Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮೆ, ಪಿಂಚಣಿ ಸೇರಿದಂತೆ ಹಲವಾರು...

ವಿಮೆ, ಪಿಂಚಣಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಎಫ್‌ಡಿಐ ನಿಯಮಾವಳಿಯಲ್ಲಿ ಸಡಿಲಿಕೆ

ವಾರ್ತಾಭಾರತಿವಾರ್ತಾಭಾರತಿ29 Feb 2016 11:33 PM IST
share

ಹೊಸದಿಲ್ಲಿ,ಫೆ.29: ವಿತ್ತಸಚಿವ ಅರುಣ್ ಜೇಟ್ಲಿಯವರು ಹೆಚ್ಚಿನ ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ವಿಮೆ, ಪಿಂಚಣಿ, ಸಂಪತ್ತು ಪುನರ್‌ನಿರ್ಮಾಣ ಕಂಪೆನಿಗಳು (ಎಆರ್‌ಸಿ) ಮತ್ತು ಶೇರು ವಿನಿಮಯ ಕೇಂದ್ರಗಳು ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ವಿದೇಶಿ ನೇರ ಹೂಡಿಕೆ(ಎಫ್‌ಡಿಐ) ನಿಯಮಾವಳಿಗಳಲ್ಲಿ ಸಡಿಲಿಕೆಗಳನ್ನು ಮುಂಗಡಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
ವಿಮೆ ಮತ್ತು ಪಿಂಚಣಿ ಕ್ಷೇತ್ರಗಳಲ್ಲಿ ಭಾರತೀಯ ವ್ಯವಸ್ಥಾಪನೆ ಮತ್ತು ನಿಯಂತ್ರಣದ ಮಾರ್ಗ ಸೂಚಿಗಳಿಗೊಳಪಟ್ಟು ಪೂರ್ವಾನುಮತಿಯ ಅಗತ್ಯವಿಲ್ಲದೆ ಶೇ.49 ರಷ್ಟು ಎಫ್‌ಡಿಐಗೆ ಅವಕಾಶ ಕಲ್ಪಿಸಲಾಗುವುದು. ಈ ಮಿತಿ ಈವರೆಗೆ ಶೇ.26ರಷ್ಟಿತ್ತು.
ಅದೇ ರೀತಿ ಎಆರ್‌ಸಿಗಳಲ್ಲಿ ಪೂರ್ವಾನುಮತಿಯ ಅಗತ್ಯವಿಲ್ಲದೆ ಶೇ.100ರಷ್ಟು ಎಫ್‌ಡಿಐ ಹೂಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಈ ಕ್ಷೇತ್ರದಲ್ಲಿ ಶೇ.49ರಷ್ಟು ಹೂಡಿಕೆಗೆ ಮಾತ್ರ ಅವಕಾಶವಿತ್ತು.
ಇದರ ಜೊತೆಗೆ ಭಾರತೀಯ ಶೇರು ಮಾರುಕಟ್ಟೆಗಳಲ್ಲಿ ವಿದೇಶಿ ಸಂಸ್ಥೆಗಳ ಹೂಡಿಕೆಯ ಮಿತಿಯನ್ನು ಶೇ.5ರಿಂದ ದೇಶಿಯ ಸಂಸ್ಥೆಗಳಿಗೆ ಸಮನಾಗಿ ಶೇ.15ಕ್ಕೆ ಹೆಚ್ಚಿಸಲಾಗಿದೆ.
ಬ್ಯಾಂಕುಗಳನ್ನು ಹೊರತುಪಡಿಸಿ ಶೇರು ವಿನಿಮಯ ಕೇಂದ್ರಗಳಲ್ಲಿ ಲಿಸ್ಟ್ ಆಗಿರುವ ಕೇಂದ್ರ ಸಾರ್ವಜನಿಕ ಕ್ಷೇತ್ರದ ಉದ್ಯಮಗಳಲ್ಲಿ ವಿದೇಶಿ ಫೋರ್ಟ್‌ಫೋಲಿಯೊ ಹೂಡಿಕೆದಾರ(ಎಫ್‌ಪಿಐ)ರಿಂದ ಹೂಡಿಕೆಗಳ ಮಿತಿಯನ್ನು ಈಗಿನ ಶೇ.24ರಿಂದ ಶೇ.49ಕ್ಕೆ ಹೆಚ್ಚಿಸಲಾಗಿದೆ.
ಈಗ ಪೂರ್ವಾನುಮತಿಯ ಅಗತ್ಯವಿಲ್ಲದೆ 18 ನಿರ್ದಿಷ್ಟ ಬ್ಯಾಂಕೇತರ ಹಣಕಾಸು ಚಟುವಟಿಕೆಗಳಿಗೆ ಸೀಮಿತವಾಗಿರುವ ಎಫ್‌ಡಿಐನ್ನು ಹಣಕಾಸು ಕ್ಷೇತ್ರ ನಿಯಂತ್ರಣ ಪ್ರಾಧಿಕಾರಗಳಿಂದ ನಿಯಂತ್ರಿಸಲ್ಪಟ್ಟಿರುವ ಇತರ ಚಟುವಟಿಕೆಗಳಿಗೂ ವಿಸ್ತರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜೇಟ್ಲಿ ತಿಳಿಸಿದರು.
‘‘ಮೇಕ್ ಇನ್ ಇಂಡಿಯಾ’’ ಅಭಿಯಾನವನ್ನು ಉತ್ತೇಜಿಸುವ ಮತ್ತು ಮುಂದುವರಿದ ರಾಷ್ಟ್ರಗಳಲ್ಲಿಯ ಪದ್ಧತಿಗಳನ್ನು ಅನುಸರಿಸುವ ನಿಟ್ಟಿನಲ್ಲಿ ವಿದೇಶಿ ಹೂಡಿಕೆದಾರರಿಗೆ ಕೆಲವು ಷರತ್ತುಗಳಿಗೊಳಪಟ್ಟು ‘‘ನಿವಾಸಿ ಸ್ಥಾನಮಾನ’’ವನ್ನು ನೀಡಲಾಗುವುದು. ಹಾಲಿ ಈ ಹೂಡಿಕೆದಾರರಿಗೆ ಒಂದು ಬಾರಿಗೆ ಕೇವಲ ಐದು ವರ್ಷಗಳ ಅವಧಿಗೆ ಬಿಸಿನೆಸ್ ವೀಸಾಗಳನ್ನು ನೀಡಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X