Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನೈಜ ದೇಶದ್ರೋಹಿಗಳ ವಿರುದ್ಧ...

ನೈಜ ದೇಶದ್ರೋಹಿಗಳ ವಿರುದ್ಧ ಕ್ರಮವಿಲ್ಲವೇಕೆ?

ವಾರ್ತಾಭಾರತಿವಾರ್ತಾಭಾರತಿ1 March 2016 11:20 PM IST
share

ಮಿಲಿಟರಿಗೆ ರಿಕ್ರುಟ್ಮೆಂಟ್ ನಡೆಯುವಾಗ ಖಾಕಿ ಬರ್ಮುಡಾದ ಹಿಂದುತ್ವ ಕಾಲಾಳುಗಳು ಮಿಲಿಟರಿ ಸೇರಲು ಬರುವುದೇ ಇಲ್ಲ. ಆದರೆ ಸಭೆ ಸಮಾರಂಭಗಳಲ್ಲಿ ಮಾತ್ರ ಹೆಂಗಸರನ್ನು ಮತ್ತು ಹೈಸ್ಕೂಲ್ ಮಕ್ಕಳನ್ನು ಸೇರಿಸಿ ದೇಶಪ್ರೇಮದ ಬೊಬ್ಬೆ ಹಾಕುವುದರಲ್ಲಿ ಈ ಸಂಘಿಗಳು ಅಗ್ರಗಣ್ಯರು. ಸಿಯಾಚಿನ್‌ನಲ್ಲಿ ಹುತಾತ್ಮರಾದ ವೀರ ಯೋಧ ಹನುಮಂತಪ್ಪ, ಮಹೇಶ್ ಮತ್ತು ನಾಗೇಶ್ ಇವರ ಪತ್ನಿ ಅಥವಾ ತಾಯಿಯನ್ನೂ ತಮ್ಮ ಸಂಘಟನೆಯೊಂದಿಗೆ ಸೇರಿಸಿಕೊಳ್ಳುವ ಭಾವನಾತ್ಮಕ ತಂತ್ರ ಸಂಘ ಪರಿವಾರದವರಿಂದ ಆಗುತ್ತಿದೆ (ವಿಚಿತ್ರವೆಂದರೆ ಅವರ ತಂದೆಯನ್ನು ಅಥವಾ ಕುಟುಂಬದ ಇತರ ಗಂಡಸರನ್ನು ಸೇರಿಸಿಕೊಳ್ಳುತ್ತಿಲ್ಲ. ಇದೂ ಮನೋವೈಜ್ಞಾನಿಕ ತಂತ್ರ). ಕಲಬುರಗಿಯ ದಿವಂಗತ ಪೊಲೀಸ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಬಂಡೆಯವರ ಪತ್ನಿಯನ್ನು ತಮ್ಮ ಸಂಘಟನೆಯೊಂದಿಗೆ ಕೇಸರಿಗಳು ಸೇರಿಸಿಕೊಂಡಿದ್ದಾರೆ. ಆದರೆ ಈ ಸಂಘಿಗಳಲ್ಲಿ ಯಾವುದೇ ಗಂಡಸು ಸ್ವತಃ ಮಿಲಿಟರಿ ಸೇರಲು ಮುಂದೆ ಬರುತ್ತಿಲ್ಲ. ಇವರ ಪೌರುಷವೆಲ್ಲ ಕೇಸರಿ ಪಡ್ಡೆಗಳನ್ನು ಮುಸ್ಲಿಮ್, ಕ್ರೈಸ್ತ ಮತ್ತು ದಲಿತರ ವಿರುದ್ಧ ಪ್ರಚೋದಿಸುವುದಕ್ಕೆ ಮಾತ್ರ ಸೀಮಿತ. ಇದು ಆವರ ಪಕ್ಕಾ ಹೇಡಿತನ ತೋರಿಸುತ್ತದೆ. ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ ಕುಮಾರ್ ಹೆಗಡೆ- ಈ ಜಗತ್ತಿನಿಂದ ಭಯೋತ್ಪಾದನೆ ಸಂಪೂರ್ಣ ನಿವಾರಿಸಬೇಕಾದರೆ ಇಸ್ಲಾಮ್ ಧರ್ಮವನ್ನೇ ಮೂಲೋತ್ಪಾಟನೆ ಮಾಡಬೇಕು ಎನ್ನುತ್ತಾರೆೆ! ಅದೇ ದಿನ ಉತ್ತರ ಪ್ರದೇಶದ ಆಗ್ರಾದಲ್ಲಿ ಮೂವರು ಬಿಜೆಪಿ ಶಾಸಕರು ಭಾರತೀಯ ಮುಸ್ಲಿಮರು ರಾಕ್ಷಸರು, ಅವರ ವಿರುದ್ಧ ಅಂತಿಮ ಯುದ್ಧಕ್ಕಾಗಿ ಸಿದ್ಧರಾಗಿ ಎಂದು ಕರೆ ನೀಡುತ್ತಾರೆ! ಭಾರತದೆಲ್ಲೆಡೆ ಸಾರ್ವಜನಿಕವಾಗಿ ಇಂತಹ ಪ್ರಚೋದನಾತ್ಮಕ ಹೇಳಿಕೆ ಕೊಡುತ್ತಲೇ ಇರಬೇಕೆಂದು ನೇರವಾಗಿ ಅಮಿತ್ ಶಾರಿಂದ ಎಲ್ಲೆಡೆಯ ಹಿಂದೂ ಮುಖಂಡರಿಗೆ ನೇರ ಆದೇಶ ಬಂದಿದೆಯಂತೆ. ಇಂತಹ ಹೇಳಿಕೆಗಳು ಉಲ್ಟಾ ಹೊಡೆದಾಗ ಮಾತ್ರ ಅದು ಅವರವರ ವೈಯಕ್ತಿಕ ಹೇಳಿಕೆ, ನಮ್ಮ ಹಿಂದುತ್ವ ಸಂಘಟನೆ ಅಥವಾ ಬಿಜೆಪಿಗೆ ಅವರ ಹೇಳಿಕೆ ಸಂಬಂಧಿಸಿಲ್ಲ ಎಂದು ಹೇಳಿ ಜಾರಿಕೊಳ್ಳುತ್ತಾರೆ. ಇದು ಹಿಂದುತ್ವ ಸಂಘಟನೆಗಳ ಅತ್ಯಂತ ಹಳೆಯ ಕುತ್ಸಿತ ತಂತ್ರ. ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆಯ ವಿರುದ್ಧ ಈಗಾಗಲೇ ಮೂರು ಕಡೆ ಪೊಲೀಸ್ ದೂರುಗಳು ದಾಖಲಾಗಿವೆ. ಸುಮಾರು ಮೂರೂವರೆ ವರ್ಷಗಳ ಹಿಂದೆ ಮಂಗಳೂರಿನ ಓರ್ವ ಸಂಘ ಪರಿವಾರದ ವಕೀಲ ಪಿ.ಪಿ. ಹೆಗ್ಡೆ ಎಂಬವರು ಬೆಳ್ತಂಗಡಿಯಲ್ಲಿ ಒಟ್ಟಿಗೇ ಮೂರು ದೇಶದ್ರೋಹದ ಹೇಳಿಕೆ ಕೊಟ್ಟಿದ್ದಾರೆ. ಅವೆಂದರೆ - ನಮ್ಮ ದೇಶದ ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ರಾಷ್ಟ್ರಧ್ವಜ ಆಗಬೇಕು, ಸ್ವಾತಂತ್ರ್ಯ ದಿನಾಚರಣೆ ಮಾಡಬಾರದು ಮತ್ತು ಮಹಾತ್ಮಾ ಗಾಂಧೀಜಿಗೆ ರಾಷ್ಟ್ರಪಿತ ಅನ್ನಬಾರದು ಎಂದು ಮೂರು ದೇಶದ್ರೋಹದ ಹೇಳಿಕೆ ಕೊಟ್ಟ ಬಗ್ಗೆ ಬೆಳ್ತಂಗಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಕರ್ನಾಟಕದಲ್ಲಿ ಈಗ ಕಾಂಗ್ರೆಸ್ ಸರಕಾರವಿದ್ದರೂ ಪೊಲೀಸರು ಮೂರೂವರೆ ವರ್ಷಗಳಿಂದ ಚಾರ್ಜ್‌ಶೀಟ್ ಹಾಕಿಲ್ಲ. ಆದರೆ ಗುಜರಾತಿನಲ್ಲಿ ಹಾರ್ದಿಕ್ ಪಟೇಲ್ ವಿರುದ್ಧ ರಾಷ್ಟ್ರಧ್ವಜದ ದುರುಪಯೋಗ ಮಾಡಿದನೆಂದು ನಾಲ್ಕೇ ದಿನದೊಳಗೆ ಘರ್ಜಿಸಿ ದೇಶದ್ರೋಹದ ಕೇಸ್ ಹಾಕಿ ಅನೇಕ ತಿಂಗಳಿನಿಂದ ಗುಜರಾತ್ ಸರಕಾರ ಜೈಲಿನೊಳಗೆ ಇಟ್ಟಿದೆ. ಕರ್ನಾಟಕಕ್ಕೂ ಗುಜರಾತಿಗೂ ದೇಶದ್ರೋಹದ ವ್ಯಾಖ್ಯೆಯಲ್ಲಿ ಮತ್ತು ತ್ವರಿತ ಕಾನೂನು ಕ್ರಮ ಕೈಗೊಳ್ಳುವಲ್ಲಿ ಇಷ್ಟೊಂದು ಭಾರೀ ಅಂತರ ಯಾಕಿದೆ ?

ತಮ್ಮ ವಿಶ್ವಾಸಿ

-ವೀರಪ್ಪ ಡಿ ಎನ್ ಮಡಿಕೇರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X