Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧವೆಗೆ ಲೈಂಗಿಕ ಕಿರುಕುಳ ಆರೋಪ: ಡಿಸಿಗೆ...

ವಿಧವೆಗೆ ಲೈಂಗಿಕ ಕಿರುಕುಳ ಆರೋಪ: ಡಿಸಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ1 March 2016 11:55 PM IST
share

ಬೆಂಗಳೂರು, ಮಾ.1: ಸರಕಾರಿ ಸೌಲಭ್ಯ ಮತ್ತು ಪರಿಹಾರ ಕೊಡಿಸುವುದಾಗಿ ನಂಬಿಸಿ ವಿಧವೆ ಯೊಬ್ಬರನ್ನು ವ್ಯಕ್ತಿಯೊಬ್ಬ ಮಂಚಕ್ಕೆ ಕರೆದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕುರುಬನಾಳ ಗ್ರಾಮದಲ್ಲಿ ನಡೆದಿದೆ. ಕುರುಬನಾಳ ಗ್ರಾಮದ ಲೋಕಪ್ಪಎಂಬ ವ್ಯಕ್ತಿಯೊಬ್ಬ ಸರಕಾರಿ ಸೌಲಭ್ಯ ಕೊಡಿಸುವ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದು, ತನ್ನ ಚಪಲ ತೀರಿಸಿಕೊಳ್ಳಲು ಸೌಲಭ್ಯಗಳನ್ನು ಕೊಡಿಸುವ ನೆಪದಲ್ಲಿ ಫೀಸ್(ಲಂಚ) ಬದಲಿಗೆ ಗ್ರಾಮದ ವಿಧವೆಯರನ್ನು ಹಾಗೂ ಹೆಣ್ಣು ಮಕ್ಕಳನ್ನು ಮಂಚಕ್ಕೆ ಬಾ ಎಂದು ಕರೆದು ಇದೀಗ ಸಿಕ್ಕಿ ಬಿದ್ದಿದ್ದಾನೆ. ಈ ಮೊದಲು ಸಮಾಜಸೇವೆ ಹೆಸರಿನಲ್ಲಿ ಹಣ ಮಾಡುತ್ತಿದ್ದ ಲೋಕಪ್ಪ, ಅಬಲೆಯರನ್ನು ಲೈಂಗಿಕತೆಗೆ ಕರೆಯುವ ಚಟವನ್ನೂ ರೂಢಿಸಿಕೊಂಡು ಊರವರಿಂದ ಏಟು ತಿಂದಿದ್ದ ಎನ್ನಲಾಗಿದೆ. ಆದರೂ ತನ್ನ ಇದೇ ಚಾಳಿಯನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಹಾಗೂ ವಿಧವೆ ಮಹಿಳೆ ಸುಮಂಗಲ ಎಂಬವರಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಲೋಕಪ್ಪನ ವಿರುದ್ಧ ಸುಮಂಗಲ ಅವರು ಜಿಲ್ಲಾಧಿಕಾರಿಗೆ ದೂರು ನೀಡಲು ಮುಂದಾಗಿದ್ದಾರೆ. ಓರಿಯಂಟಲ್ ಇನ್ಶೂರೆನ್ಸ್ ಕಂಪೆನಿಯ ಕಾಮಗಾರಿಯಲ್ಲಿ ವೀರೇಶ ತುಮರಿಗುದ್ದಿ, ಶರಣಪ್ಪಕಲ್ಲೋಡ್ಡಿ ಹಾಗೂ ಶರಣಪ್ಪಮರಿಗೌಡ ಎಂಬ ಮೂವರು ಕೂಲಿಕಾರರು ಟ್ರಾಕ್ಟರ್ ಪಲ್ಟಿಯಾಗಿ ಮೃತಪಟ್ಟಿದ್ದರು. ಮೃತರ ಪತ್ನಿಯರಿಗೆ ಕಾರ್ಮಿಕ ಇಲಾಖೆಯಿಂದ ಹಾಗೂ ಜಿಲ್ಲಾಧಿಕಾರಿಯಿಂದ ಪರಿಹಾರ ಕೊಡಿಸುತ್ತೇನೆಂದು ನಂಬಿಸಿ ಪ್ರತಿ ಯೊಬ್ಬರಿಂದಲೂ ಹತ್ತು ಸಾವಿರ ರೂ. ಹಣ ಪಡೆದಿದ್ದ ಎನ್ನಲಾಗಿದೆ. ಈ ಹಣವನ್ನು ನಾನು ಅಧಿಕಾರಿಗಳಿಗೆ ಕೊಟ್ಟಿದ್ದೇನೆ, ಇಷ್ಟರಲ್ಲಿ ನಿಮಗೆ ಕಾರ್ಮಿಕ ಇಲಾಖೆಯಿಂದ 2 ಲಕ್ಷ ರೂ. ಹಾಗೂ ಜಿಲ್ಲಾಧಿಕಾರಿ ಕಚೇರಿಯಿಂದ 50 ಸಾವಿರ ರೂಪಾಯಿ ಬರುತ್ತದೆ ಎಂದು ಸುಳ್ಳು ಹೇಳುತ್ತಲೇ ಕಳೆದ ಹತ್ತು ತಿಂಗಳಿನಿಂದ ಆಗಾಗ ಹಣ ಪೀಕುತ್ತಿದ್ದ. ಇದಲ್ಲದೆ ತನ್ನ ಚಪಲಕ್ಕಾಗಿ ಮೃತ ವೀರೇಶನ ಪತ್ನಿ ಸುಮಂಗಲ(ಹೆಸರು ಬದಲಾಯಿಸಿದೆ) ಎಂಬಾಕೆಯನ್ನು ಹಾಸಿಗೆಗೆ ಕರೆದಿದ್ದ ಎನ್ನಲಾಗಿದೆ. ಅಲ್ಲದೆ, ಆಗಾಗ ಕಿರುಕುಳ ನೀಡುವ ಲೋಕಪ್ಪಇತ್ತೀಚಿಗೆ ಆಕೆಯ ಮನೆಗೆ ಬಂದು ನಾನು ಕರೆದಲ್ಲಿ ಬರದಿದ್ದರೆ ನಿನಗೆ ಪರಿಹಾರ ಕೊಡಿಸುವುದಿಲ್ಲ ಎಂದು ಬೆದರಿಕೆ ಸಹ ಹಾಕಿದ್ದನಂತೆ. ಈ ಬಗ್ಗೆ ಆತ ಫೋನಿನಲ್ಲಿ ಮಂಚಕ್ಕೆ ಕರೆದ ಧ್ವನಿ ಕೂಡಾ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದೆ ಎನ್ನಲಾಗುತ್ತಿದೆ. 

ಆರೋಪಿಯಿಂದ ಸಮಜಾಯಿಷಿ: ಕಾರ್ಮಿಕ ಇಲಾಖೆ ಯಿಂದ ಪರಿಹಾರಕ್ಕಾಗಿ ಖರ್ಚು ಎಂದು ಅವರಿಂದ ಹಣ ತೆಗೆದುಕೊಂಡಿದ್ದು ನಿಜ. ಆದರೆ ನಾನು ವಿಧವೆಯನ್ನು ಆ ದೃಷ್ಟಿಯಿಂದ ಕಂಡಿಲ್ಲವೆಂದು ಲೋಕಪ್ಪ ಇದೀಗ ಸಮಜಾ ಯಿಷಿ ನೀಡಿದ್ದಾನೆ. ಇವನ ಕಾಮದಾಟ ಹಾಗೂ ಮೋಸಕ್ಕೆ ಬಲಿಯಾದ ವಿಧವೆ ಸುಮಂಗಲ ಇದೀಗ ಲೋಕಪ್ಪನ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಲು ಮುಂದಾಗಿದ್ದಾಳೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X