Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಪಿಸಿಸಿಗೆ ಪರಿಶಿಷ್ಟ ಅಧ್ಯಕ್ಷ ,...

ಕೆಪಿಸಿಸಿಗೆ ಪರಿಶಿಷ್ಟ ಅಧ್ಯಕ್ಷ , ಕರಾವಳಿಯ ವಿರೋಧ ಲೆಕ್ಕಿಸದೆ "ಎತ್ತಿನಹೊಳೆ" ಅನುಷ್ಠಾನಕ್ಕೆ ಚಿಂತನೆ

ಪಕ್ಷಕ್ಕೆ ಅಹಿಂದ ಬೆಂಬಲ ಸುಭದ್ರಗೊಳಿಸಲು ಸಿದ್ದರಾಮಯ್ಯ ಕಾರ್ಯತಂತ್ರ

ನಂಜುಂಡಪ್ಪ , ಬೆಂಗಳೂರುನಂಜುಂಡಪ್ಪ , ಬೆಂಗಳೂರು1 March 2016 9:08 PM IST
share
ಕೆಪಿಸಿಸಿಗೆ ಪರಿಶಿಷ್ಟ ಅಧ್ಯಕ್ಷ , ಕರಾವಳಿಯ ವಿರೋಧ ಲೆಕ್ಕಿಸದೆ ಎತ್ತಿನಹೊಳೆ ಅನುಷ್ಠಾನಕ್ಕೆ ಚಿಂತನೆ

ಬೆಂಗಳೂರು.ಮಾ.1: ಬರುವ ದಿನಗಳಲ್ಲಿ ಪಕ್ಷ ಮತ್ತು ಸರ್ಕಾರದ ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ, ಇದೀಗ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡಕ್ಕೆ ಸೇರಿದವರನ್ನು ನೇಮಿಸಲು ಗಂಭೀರ ಚಿಂತನೆ ನಡೆಸಿರುವ ಸಂಗತಿ ಬೆಳಕಿಗೆ ಬಂದಿದೆ.

ಅಹಿಂದ ಮತಬ್ಯಾಂಕ್‌ನ್ನು ಇನ್ನಷ್ಟು ಗಟ್ಟಿಗೊಳಿಸಲು ಕಾರ್ಯತಂತ್ರ ರೂಪಿಸುತ್ತಿರುವ ಸಿದ್ದರಾಮಯ್ಯ ಬಣ, ಲಿಂಗಾಯಿತ ಮತ್ತು ವಕ್ಕಲಿಗ ಸಮುದಾಯಕ್ಕೆ ಸೇರದವರನ್ನು ಈ ಹುದ್ದೆಗೆ ತಂದರೆ ಸೂಕ್ತ ಎನ್ನುವ ನಿಲುವಿಗೆ ಬಂದಿದೆ.

ದುಬಾರಿ ವಾಚ್ ಪ್ರಕರಣದಿಂದ ಹೊರ ಬಂದು ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಸಲುವಾಗಿ ಕಾರ್ಯತಂತ್ರ ರೂಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಸಮುದಾಯದ ಮೇಲ್ಮನೆ ಸದಸ್ಯ ವಿ.ಎಸ್. ಉಗ್ರಪ್ಪ, ಸಣ್ಣ ಕೈಗಾರಿಕಾ ಸಚಿವ ಸತೀಶ್ ಜಾರಕಿಹೊಳಿ, ಅವರ ಸಂಬಂಧಿ ರಮೇಶ್ ಜಾರಕಿಹೊಳಿ, ಎನ್.ವೈ. ಗೋಪಾಲಕೃಷ್ಣ ಅವರ ಪೈಕಿ ಒಬ್ಬರನ್ನು ಈ ಹದ್ದೆಗೆ ತರಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.
ಉಗ್ರಪ್ಪ ಕೆಪಿಸಿಸಿ ಅಧ್ಯಕ್ಷರಾದರೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹುಳುಕುಗಳನ್ನು ಯಶಸ್ವಿಯಾಗಿ ಹೊರ ತೆಗೆಯಲಿದ್ದಾರೆ. ಜತೆಗೆ ಸರ್ಕಾರದ ಸಾಧನೆಗಳನ್ನು ಸಹ ಜನ ಸಾಮಾನ್ಯರಿಗೆ ಮುಟ್ಟಿಸಲು ಸೂಕ್ತ ಕಾರ್ಯತಂತ್ರ ರೂಪಿಸಲಿದ್ದಾರೆ ಎನ್ನುವ ವಿಶ್ವಾಸ ಸಿದ್ದರಾಮಯ್ಯ ಅವರದ್ದಾಗಿದೆ.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಂತರ ಸಿದ್ದರಾಮಯ್ಯ ಅವರು ಹಿರಿಯ ಧುರೀಣ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದು, ಅಹಿಂದ ಮತಬ್ಯಾಂಕ್ ರಾಜಕಾರಣವನ್ನು ಇನ್ನಷ್ಟು ಗಟ್ಟಿಗೊಳಿಸುವ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಕಳೆದ ವಾರ ಸಿದ್ದರಾಮಯ್ಯ ನವದೆಹಲಿಗೆ ತೆರಳುವ ಮುನ್ನ ಈ ಕುರಿತು ಚರ್ಚೆ ನಡೆಸಿದ್ದು, ಈ ಬಣ ಮೂರು ಹಂತದ ಕಾರ್ಯತಂತ್ರ ರೂಪಿಸಿದೆ ಎನ್ನಲಾಗಿದೆ. ಪರಿಶಿಷ್ಟ ಪಂಗಡ ಮತ್ತು ಕುರುಬ ಸಮುದಾಯ ಒಟ್ಟು ಶೇ 15 ರಷ್ಟು ಜನಸಂಖ್ಯೆ ಹೊಂದಿದ್ದು, ಈ ಸಮುದಾಯಗಳು ಮಾದಿಗ ಸಮುದಾಯದ ಜತೆ ಉತ್ತಮ ಒಡನಾಟ ಹೊಂದಿವೆ. ಜತೆಗೆ ಅಲ್ಪ ಸಂಖ್ಯಾತರನ್ನು ಸೆಳೆದು ಪಕ್ಷವನ್ನು ಗಟ್ಟಿಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಲಾಗಿದೆ.

ಇದರ ಜತೆಗೆ ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತರಲು ಹೆಚ್ಚಿನ ಮುತುವರ್ಜಿ ವಹಿಸಲು ಈ ಬಣ ಮುಂದಾಗಿದೆ. ಜಲ ಸಮೃದ್ಧಿ ಹೊಂದಿರುವ ಕರಾವಳಿ ಜನ ವಿರೋಧಿಸಿದರೂ ಸರಿಯೇ ನೀರಿಲ್ಲದೇ ಕೆಂಗೆಟ್ಟಿರುವ ಬಯಲುಸೀಮೆಗೆ ಈ ಯೋಜನೆ ಜಾರಿಗೆ ತಂದೇ ತೀರಬೇಕೆಂಬ ಅಚಲ ನಿರ್ಧಾರಕ್ಕೆ ಬಂದಿದೆ. ಕರಾವಳಿ ಹೇಗಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಸಹಕಾರಿಯಾಗಿಲ್ಲ. ಕರಾವಳಿ ಹೋರಾಟಗಾರರಿಗೆ ಹೆದರಿ ನೀರಿಲ್ಲದೇ ತೊಂದರೆ ಎದುರಿಸುತ್ತಿರುವವರನ್ನು ನಿರ್ಲಕ್ಷಿಸಬಾರದು ಎನ್ನುವ ತೀರ್ಮಾನಕ್ಕೆ ಈ ಬಣ ಬಂದಿದೆ ಎನ್ನಲಾಗಿದೆ. ಇದರಿಂದ ಬಯಲು ಸೀಮೆಯಲ್ಲಿ ಪಕ್ಷದ ನೆಲೆಯನ್ನು ಇನ್ನಷ್ಟು ವಿಸ್ತರಿಸಲು ಸಹಕಾರಿಯಾಗಲಿದೆ ಎನ್ನುವುದು ಈ ಬಣದ ನಿಲುವಾಗಿದೆ. ಇದೇ ಉದ್ದೇಶದಿಂದ ಮಾರ್ಚ್ 6 ರಂದು ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

share
ನಂಜುಂಡಪ್ಪ , ಬೆಂಗಳೂರು
ನಂಜುಂಡಪ್ಪ , ಬೆಂಗಳೂರು
Next Story
X