Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ದಲಿತರ ಮೇಲಿನ ದೌರ್ಜನ್ಯಗಳ ಅಧ್ಯಯನ

ದಲಿತರ ಮೇಲಿನ ದೌರ್ಜನ್ಯಗಳ ಅಧ್ಯಯನ

-ಕಾರುಣ್ಯಾ-ಕಾರುಣ್ಯಾ1 March 2016 11:05 PM IST
share
ದಲಿತರ ಮೇಲಿನ ದೌರ್ಜನ್ಯಗಳ ಅಧ್ಯಯನ

 ರಾಜ್ಯದ ದಲಿತ ಚಳವಳಿಯಲ್ಲಿ ಲಕ್ಷ್ಮಣ್ ಹೆಸರು ಸದಾ ಮುಂಚೂಣಿಯಲ್ಲಿರುತ್ತದೆ. ಅವರು ಒಂಟಿ ಚಿರತೆಯಂತೆ ಸದಾ ದಲಿತ ವಿರೋಧಿ ಶಕ್ತಿಗಳ ಮೇಲೆ ಹಾರುತ್ತಲೇ ಇದ್ದಾರೆ. ಸಂಘಟನೆಯ ರೂಪದಲ್ಲಿ, ಸಾಹಿತ್ಯಕ ರೂಪದಲ್ಲಿ, ವೈಚಾರಿಕ ಲೇಖನಗಳ ರೂಪದಲ್ಲಿ, ಕಾವ್ಯ ರೂಪದಲ್ಲಿ...ಹೀಗೆ ಹೋರಾಟಕ್ಕೆ ಅವರಿಗೆ ಸಾವಿರ ದಾರಿಗಳು. ಅವರ ಈ ಹೋರಾಟದ ಭಾಗವಾಗಿಯೇ ಹೊರಬಂದಿದೆ ‘ಇದು ಭಾರತ’ ಲೇಖನಗಳ ಸಂಗ್ರಹ. ಇದೊಂದು ವಿಶಿಷ್ಟ ಸಂಗ್ರಹ. ಇದನ್ನು ಪರಿಪೂರ್ಣವಾಗಿ ಲೇಖನಗಳು ಎಂದು ಕರೆಯುವುದಕ್ಕಿಂತ, ಬಿಡಿ ದಾಖಲೆಗಳು ಎಂದು ಕರೆಯಬಹುದು. ಇದೊಂದು ರೀತಿಯಲ್ಲಿ ಅಧ್ಯಯನದಿಂದ ಮೂಡಿಬಂದ ಕೃತಿಯೂ ಹೌದು. ದಲಿತರ ಮೇಲೆ ದೇಶಾದ್ಯಂತ ನಡೆಯುತ್ತಿರುವ ವಿವಿಧ ದಾಳಿ, ದೌರ್ಜನ್ಯಗಳನ್ನು ಗುರುತಿಸಿ, ಅದನ್ನು ಸಂಗ್ರಹಿಸಿ ಬರಹರೂಪಕ್ಕಿಳಿಸಿದ್ದಾರೆ. ಇಲ್ಲಿ ಸುಮಾರು 100ಕ್ಕೂ ಅಧಿಕ ಘಟನೆಗಳನ್ನು ಒಂದೆಡೆ ಸೇರಿಸಿದ್ದಾರೆ. ಪತ್ರಿಕೆಗಳ ವರದಿಗಳು, ಸ್ಥಳ ಪರಿಶೀಲನೆ, ನಿಯೋಗ ಭೇಟಿ ಇತ್ಯಾದಿಗಳ ಮೂಲಕ ಹೊರ ಬಿದ್ದಿರುವ ಘಟನೆಗಳನ್ನು ಸಂಗ್ರಹಿಸಿ ಲಕ್ಷಣ್ ಅವರು ಈ ಕೃತಿಯನ್ನು ರೂಪಿಸಿದ್ದಾರೆ. ‘‘ಮನುಷ್ಯ ಬೆತ್ತಲಾಗಿ ಬೀದಿಯಲ್ಲಿ ಓಡಾಡುವುದು ಎಷ್ಟು ಅವಮಾನಕರವೋ, ಅಷ್ಟೇ ಅವಮಾನಕರವಾದದ್ದು ಹಿಂದೂ ಧರ್ಮದಲ್ಲಿನ ಅಸ್ಪಶ್ಯತೆಯನ್ನು ತಲೆಯ ಮೇಲೆ ಹೊತ್ತುಕೊಂಡು ದಲಿತರು ಜೀವಿಸುತ್ತಿರುವುದು’’ ಎಂದು ಅಭಿಪ್ರಾಯ ಪಡುವ ಲಕ್ಷ್ಮಣ್ ಆ ಅವಮಾನಗಳು ಎಷ್ಟು ಭೀಕರವಾಗಿರುತ್ತವೆ ಎನ್ನುವುದನ್ನು ಸಾಕ್ಷ ಸಮೇತ ಹೊರಗೆಡವಿದ್ದಾರೆ. ಕೃತಿಯ ಪೀಠಿಕೆಯಾಗಿ, ಆರ್ಯರ ಕುತಂತ್ರದಿಂದ ಇಲ್ಲಿನ ದ್ರಾವಿಡ ಸಂಸ್ಕೃತಿ ಹೇಗೆ ಶೋಷಣೆಗೀಡಾಗಬೇಕಾಯಿತು ಎನ್ನುವುದನ್ನು ಬರೆಯುತ್ತಾರೆ. ಹಂಗರಹಳ್ಳಿ ಜೀತ ಪ್ರಕರಣದಿಂದ ಆರಂಭಗೊಳ್ಳುವ ಘಟನೆಗಳಿಂದ ದಲಿತರ ಬರ್ಬರ ಬದುಕು ತೆರೆದುಕೊಳ್ಳುತ್ತದೆ. ಮುಂದೆ ರಾಜ್ಯವೂ ಸೇರಿದಂತೆ, ದೇಶದಲ್ಲಿ ಹೇಗೆ ದಲಿತ ದೌರ್ಜನ್ಯಗಳು ಬೇರೆ ಬೇರೆ ರೂಪಗಳಲ್ಲಿ ಹರಡಿಕೊಂಡಿವೆ ಎನ್ನುವುದನ್ನು ಉದಾಹರಣೆ ಸಹಿತ ತೆರೆದಿಡುತ್ತಾರೆ.
ಸವರ್ಣೀಯರಲ್ಲಿ ನಾಚಿಕೆಯನ್ನೂ, ದಲಿತರಲ್ಲಿ ಜಾಗೃತಿಯನ್ನೂ ಮೂಡಿಸುವ ಕೃತಿ ಇದು. ಕಣ್ವ ಪಬ್ಲಿಕೇಶನ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಹೊರತಂದಿರುವ ಈ ಕೃತಿಯ ಮುಖಬೆಲೆ 245 ರೂ. ಆಸಕ್ತರು 9980021101 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X