Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿ.ಎಂ.ವಾಚ್ ಚರ್ಚೆ ನಡೆಸುವ ವಸ್ತುವೇ...

ಸಿ.ಎಂ.ವಾಚ್ ಚರ್ಚೆ ನಡೆಸುವ ವಸ್ತುವೇ ಅಲ್ಲ

ನಿಲುವಳಿ ಸೂಚನೆ ಕುರಿತ ಪತ್ರಕ್ಕೆ ಸಹಿ ಮಾಡಲು ನಿರಾಕರಿಸಿದ ಎಚ್.ಡಿ. ರೇವಣ್ಣ, ಜೆ.ಡಿ.ಎಸ್ ಗೆ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ2 March 2016 6:58 PM IST
share
ಸಿ.ಎಂ.ವಾಚ್ ಚರ್ಚೆ ನಡೆಸುವ ವಸ್ತುವೇ ಅಲ್ಲ

ಬೆಂಗಳೂರು.ಮಾ.2: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣದ ಬಗ್ಗೆ ದೇಶ–ವಿದೇಶಗಳಲ್ಲಿ ಚರ್ಚೆಯಾಗುತಿದೆ. ಆದರೆ ಪ್ರಕರಣವನ್ನು ಹೊರಗೆಳೆದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ಸಹೋದರ ಎಚ್.ಡಿ. ರೇವಣ್ಣ ಅವರಿಗೆ ಮಾತ್ರ ಇದೊಂದು ಚರ್ಚೆಗೆ ಯೋಗ್ಯವಾದ ವಿಚಾರವೇ ಅಲ್ಲ. ಹೌದು ಅಂತಹ ಕುತೂಲಹ ಸಂಗತಿಯೊಂದು ಬಯಲಾಗಿದೆ.

ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣದ ಬಗ್ಗೆ ನಿಲುವಳಿ ಸೂಚನೆಯಡಿ ಚರ್ಚೆ ನಡೆಸಲು ಆಸಕ್ತರಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ಮಹತ್ವಾಂಕ್ಷೆಗೆ ಅವರ ಸಹೋದರ ಎಚ್.ಡಿ. ರೇವಣ್ಣ ತಣ್ಣೀರೆರಚಿದ್ದ ಪ್ರಸಂಗ ಬೆಳಕಿಗೆ ಬಂದಿದೆ.

ನಿಲುವಳಿ ಸೂಚನೆಯ ಪ್ರಸ್ತಾವವನ್ನು ಸಭಾಧ್ಯಕ್ಷರಿಗೆ ರವಾನಿಸಲು ಸಿದ್ಧಪಡಿಸಲಾಗಿದ್ದ ಪತ್ರಕ್ಕೆ ರೇವಣ್ಣ ಸಹಿ ಮಾಡದೇ, “ಇದು ಚರ್ಚೆ ನಡೆಸುವ ವಸ್ತುವೇ ಅಲ್ಲ. ಯಾರೋ ಉಡುಗೊರೆ ಕೊಟ್ಟರು. ಇನ್ಯಾರೋ ಅದನ್ನು ಪಡೆದರು. ಈ ಬಗ್ಗೆ ನಿಲುವಳಿ ಸೂಚನೆಯಡಿ ಚರ್ಚೆ ನಡೆಸಬೇಕೆ. ನಾನು ಇದಕ್ಕೆ ಸಹಿ ಮಾಡುವುದಿಲ್ಲ” ಎಂದು ನಿರಾಕರಿಸಿದರು ಎನ್ನಲಾಗಿದೆ.

ಜೆಡಿಎಸ್ ಮೂಲಗಳ ಪ್ರಕಾರ ವಾಚ್ ಪ್ರಕರಣದಲ್ಲಿ ರೇವಣ್ಣ ಮತ್ತು ಕುಮಾರ ಸ್ವಾಮಿ ನಡುವೆ ಸಹಮತವಿಲ್ಲ. ರೇವಣ್ಣ ಅವರ ನಿರಾಸಕ್ತಿಯ ಕಾರಣದಿಂದಾಗಿಯೇ ಪ್ರಕರಣವನ್ನು ಬೆಳಕಿಗೆ ತಂದ ಕುಮಾರ ಸ್ವಾಮಿ ಚರ್ಚೆ ನಡೆಸಲು ಆಸಕ್ತಿ ತೋರಲಿಲ್ಲ.

ತಾವು ಬಹಿರಂಗಪಡಿಸಿದ ಪ್ರಕರಣವನ್ನು ಬಿಜೆಪಿಯವರು ಹೈಜಾಕ್ ಮಾಡಿ ಚರ್ಚೆ ನಡೆಸುತ್ತಿರುವುದನ್ನು ನೋಡಿ ಕುಮಾರ ಸ್ವಾಮಿ ಒಳಗೊಳಗೇ ನಗುತ್ತಿದ್ದರು. ಅಷ್ಟೇಕೆ ಈ ಬಗ್ಗೆ ಮೇಲ್ಮನೆಯಲ್ಲೂ ಜೆಡಿಎ್ ಸದಸ್ಯರ್ಯಾರು ಚಕಾರ ಎತ್ತಲಿಲ್ಲ.

ಮೊದಲ ದಿನ ಬಿಜೆಪಿಯವರು ವಾಚ್ ಪ್ರಕರಣದ ಬಗ್ಗೆ ಚರ್ಚೆ ಆರಂಭಿಸುತ್ತಿದ್ದಂತೆ ರೇವಣ್ಣ ಸದನದಿಂದ ಹೊರ ನಡೆದರು. ಯಾರಾದರೂ ತಮ್ಮನ್ನು ಈ ವಿಚಾರದ ಬಗ್ಗೆ ಪ್ರಶ್ನಿಸಿ ಕೇಣಕಿದರೆ ಏನೆಂದು ಉತ್ತರ ಹೇಳುವುದು ಎನ್ನುವ ಆತಂಕೂ ರೇವಣ್ಣ ಅವರಿಗಿತ್ತು ಎನ್ನಲಾಗಿದೆ.

ಮೂಲಗಳ ಪ್ರಕಾರ, ರೇವಣ್ಣ ಅವರಿಗೆ ಇದೀಗ ಸಿದ್ದರಾಮಯ್ಯ ಅವರನ್ನು ಎದುರು ಹಾಕಿಕೊಳ್ಳುವ ಮನಸ್ಸಿಲ್ಲ. ಇಬ್ಬರ ಬಾಂಧವ್ಯ ಅತ್ಯಂತ ಸುಮಧುರವಾಗಿರುವುದು ಬೇರೆ ವಿಚಾರ. ಇದೀಗ ಹಾಸನ ಜಿಲ್ಲಾ ಪಂಚಾಯತ್‌ನಲ್ಲಿ ತಮ್ಮ ಪತ್ನಿ ಭವಾನಿ ರೇವಣ್ಣ ಗೆಲುವು ಸಾಧಿಸಿದ್ದು, ಅವರನ್ನು ಹೇಗಾದರೂ ಮಾಡಿ ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ನೇಮಿಸುವ ಗುರಿಯೂ ಇದೆ.

ಹೀಗಾಗಿ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿಕೊಳ್ಳಬೇಕಾಗಿದೆ. ಈ ಹುದ್ದೆ ಐದು ವರ್ಷಗಳ ಅವಧಿವರೆಗೆ ಇರಲಿದ್ದು, ಇದಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಒಮ್ಮೆ ಸಮಾಲೋಚನೆಯನ್ನೂ ಸಹ ನಡೆಸಿದ್ದಾರೆ. ಮುಖ್ಯಮಂತ್ರಿ ಅವರಿಂದ ಸಕಾರಾತ್ಮಕ ಸ್ಪಂದನೆಯೂ ಸಹ ದೊರೆತಿೆ ಎಂದು ಇದೇ ಮೂಲಗಳು ಹೇಳಿವೆ.

ಈ ಮೂಲಕ ಸಂಕಷ್ಟ ಸಂದರ್ಭದಲ್ಲಿ ರೇವಣ್ಣ ಅವರ ಸಹಾಯ ಪಡೆಯುವುದು ಸಿದ್ದರಾಮಯ್ಯ ಅವರ ಉದ್ದೇಶವಾಗಿದೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ್‌ನಲ್ಲಿ ರೇವಣ್ಣ ಅವರಿಗೆ ಅನುಕೂಲಕರವಾಗುವಂತೆ ಮೀಸಲಾತಿ ನಿಗದಿ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಹೀಗಾಗಿ ರೇವಣ್ಣ ವಾಚ್ ಪ್ರಕರಣವನ್ನು ಪ್ರಸ್ತಾಪಿಸಿ ಮುಜುಗರವುಂಟು ಮಾಡಲು ರೇವಣ್ಣ ಬಯಸಲಿಲ್ಲ ಎಂದು ಇದೇ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X