Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊಸ್ಮಠ: ಉರುಂಬಿಯಲ್ಲಿ ಕಿರು ಜಲವಿದ್ಯುತ್...

ಹೊಸ್ಮಠ: ಉರುಂಬಿಯಲ್ಲಿ ಕಿರು ಜಲವಿದ್ಯುತ್ ಯೋಜನೆ ಕಾಮಗಾರಿ ಮತ್ತೆ ಆರಂಭ

ನ್ಯಾಯಯುತ ಹೋರಾಟಕ್ಕೆ ಅಣಿಯಾದ ಅಣೆಕಟ್ಟು ವಿರೋಧಿ ಹೋರಾಟ ಸಮಿತ

ವಾರ್ತಾಭಾರತಿವಾರ್ತಾಭಾರತಿ2 March 2016 7:45 PM IST
share

ಕಡಬ, ಮಾ.2. ಪುತ್ತೂರು ತಾಲೂಕಿನ ಪೆರಾಬೆ ಗ್ರಾಮದ ಉರುಂಬಿ ಎಂಬಲ್ಲಿ ಅನಧಿಕೃತವಾಗಿ ಕುಮಾರಧಾರ ನದಿಗೆ ಅಣೆಕಟ್ಟು ನಿರ್ಮಿಸಿ ಕಿರುಜಲವಿದ್ಯುತ್ ಯೋಜನೆಯ ಕಾಮಗಾರಿ ಕೈಗೆತ್ತಿಕೊಂಡಿರುವ ಕುಕ್ಕೆ ಹೈಡಲ್ ಪವರ್ ಪ್ರಾಜೆಕ್ಟ್ ಕಂಪೆನಿಯವರು ಇತ್ತೀಚೆಗೆ ಕಾವಗಾರಿ ಆರಂಭಿಸಿ ಕಾನೂನು ಉಲ್ಲಂಘಿಸುತ್ತಿದ್ದು, ಈ ಬಗ್ಗೆ ಕಾನೂನು ಹೋರಾಟಕ್ಕೆ ಸಿದ್ದತೆ ರೂಪಿಸಲಾಗಿದೆ ಎಂದು ಕುಮಾರಧಾರ ಅಣೆಕಟ್ಟು ವಿರೋಧಿ ಹೋರಾಟ ಸಮಿತಿಯು ಎಚ್ಚರಿಸಿದೆ.

    ಕಡಬದಲ್ಲಿ ಬುಧವಾರ ನಡೆದ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ಕರುಣಾಕಾರ ಗೋಗಟೆ ಅವರು, ಇತ್ತೀಚೆಗೆ ಜಿ.ಪಂ., ತಾ.ಪಂ ಚುನಾವಣೆ ಸಂದರ್ಭ ನೀತಿ ಸಂಹಿತೆ ಲಾಭವನ್ನು ಗಿಟ್ಟಿಸಿಕೊಂಡು ಸ್ಥಳಿಯ ಅಧಿಕಾರಿಗಳಿಗೆ 2012-13 ಸಾಲಿನಲ್ಲಿ ಕೆಲವು ಇಲಾಖೆಗಳಲ್ಲಿ ಸಿಕ್ಕಿರುವ ಅನುಮತಿ ಪತ್ರವನ್ನು ತೋರಿಸಿ ಅದನ್ನೆ ಅಧಿಕೃತ ಅನುಮತಿ ಎಂದು ನಂಬಿಸಿ ಯೋಜನಾ ಉದ್ದೇಶಿತ ಸ್ಥಳವಾದ ಉರುಂಬಿಯಲ್ಲಿ ಕಾಮಗಾರಿ ಆರಂಭಿಸಿದ್ದರು. ಈ ಬಗ್ಗೆ ಹೋರಾಟ ಸಮಿತಿ ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸಿದಾಗ ಕಂಪೆನಿಯವರಿಗೆ ಯಾವುದೆ ಅನುಮತಿ ದೊರೆತಿಲ್ಲ ಎಂದು ಉತ್ತರಿಸಿದರಲ್ಲದೆ ಎ.ಸಿ ಹಾಗೂ ಕಡಬ ವಿಶೇಷ ತಹಶೀಲ್ದಾರರಿಗೆ ಸೂಚಿಸಿ ಕಾಮಗಾರಿಗೆ ತಡೆ ನೀಡಿದ್ದಾರೆ. ಈ ನಡುವೆ ಹೋರಾಟ ಸಮಿತಿ ನಿಯೋಗ ಬೆಂಗಳೂರಿನ ಇಂಧನ ಇಲಾಖೆ , ಕ್ರೆಡಲ್ ಮತ್ತು ಅರಣ್ಯ ಇಲಾಖೆಗೆ ತೆರಳಿ ವಿಚಾರಿಸಿದಾಗಲೂ ಯಾವುದೇ ರೀತಿಯ ಅನುಮತಿ ನೀಡದಿರುವುದರ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕ್ರೆಡೆಲ್ ಅಧಿಕಾರಗಳ ತಂಡವೊಂದು ಮುಂದಿನ 15 ದಿನದೊಳಗೆ ಕಾವಗಾರಿ ಮಾಡಲಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಭರವಸೆ ನೀಡಿದೆ. ಈ ಹಿಂದೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸುಳ್ಯ ಶಾಸಕ ಎಸ್ ಅಂಗಾರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಯೋಜನೆ ಬಗ್ಗೆ ಪ್ರಶ್ನಿಸಿದ್ದು, ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಯೋಜನೆಯ ಹಂಚಿಕೆ ಮಾತ್ರ ನಡೆದಿದೆ. ಸಂತ್ರಸ್ಥರ ಬಗೆಗಿನ ಕಳಕಳಿ ನನಗಿದೆ. ಅರಣ್ಯ ಹಾಗೂ ಇಂಧನ ಇಲಾಖೆಯ ಜಂಟಿ ಸಮೀಕ್ಷೆ ನಡೆಸಿ ವರದಿ ಪಡೆದ ಬಳಿಕ ಮುಂದುವರಿಯಲಾಗುವುದು ಎಂಬ ಭರವಸೆ ನೀಡಿದ್ದಾರೆ. ಯೋಜನೆ ಅನುಷ್ಠಾನಿಸಲು ಸುಮಾರು 39 ಇಲಾಖೆಗಳ ಹಾಗೂ ಸ್ಥಳಿಯಾಡಳಿತದ ಅನುಮತಿ ಬೇಕು. ಈ ಪೈಕಿ ಕೆಲವೊಂದು ಅನುಮತಿ ಪಡೆದು ಈ ಹಿಂದೆ ಕೆಲಸ ಪ್ರಾರಂಬಿಸಿತ್ತು. ಈ ಹಿಂದೆ ಸ್ಥಳದಲ್ಲಿ ಹೋರಾಟ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾಮಗಾರಿ ಸ್ಥಗಿತಗೊಳಿಸಿದ್ದರು. ಕಂಪೆನಿಗೆ ನೀಡುವ ಅನುಮತಿ ಬಗ್ಗೆ ಮಹತ್ವದ ತೀಮಾಣ ಕೈಗೊಳ್ಳುವುದಿದ್ದರೆ ಹೋರಾಟ ಸಮಿತಿಯವರಿಗೆ ಮುಂಚಿತವಾಗಿ ತಿಳಿಸಿಯೇ ಮುಂದುವರಿಯುತ್ತೇವೆ ಎಂದು ಭರವಸೆ ನೀಡಿದ್ದರು. ಅಲ್ಲದೆ ಅಂದು ನೀಡಿದ್ದ ತಡೆಯಾಜ್ಞೆ ಊರ್ಜಿತದಲ್ಲಿದೆ. ಆದರೂ ಕಳೆದ ಕೆಲವು ದಿನಗಳ ಹಿಂದೆ ಹಿಟಾಚಿ ಯಂತ್ರದ ಮುಖೇನ ನದಿ ಪಾತ್ರದಲ್ಲಿ ಸಮತಟ್ಟು ಮಾಡುವ ಕಾರ್ಯವನ್ನು ಯೋಜನೆ ಕೈಗೆತ್ತಿಕೊಂಡಿರುವ ಕಂಪೆನಿಯವರು ಮಾಡುತ್ತಿದ್ದಾರೆ ಎಂದು ವಿವರಿಸಿದ ಗೋಗಟೆಯವರು ಅನಧಿಕೃತ ಕಾಮಗಾರಿಯನ್ನು ತಕ್ಷಣ ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X