Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯಾಗೆ ಮಧ್ಯಾಂತರ ಜಾಮೀನು

ಕನ್ಹಯ್ಯಾಗೆ ಮಧ್ಯಾಂತರ ಜಾಮೀನು

ವಾರ್ತಾಭಾರತಿವಾರ್ತಾಭಾರತಿ2 March 2016 11:42 PM IST
share
ಕನ್ಹಯ್ಯಾಗೆ ಮಧ್ಯಾಂತರ ಜಾಮೀನು

ಕನ್ಹಯ್ಯಾ ಕುಮಾರ್ ವಿರುದ್ಧ ದೇಶದ್ರೋಹದ ಆರೋಪವನ್ನು ದಾಖಲಿಸಿರುವ ಬಗ್ಗೆ ಪೊಲೀಸರಿಗೆ ಕೆಲವೊಂದು ಕಠಿಣ ಪ್ರಶ್ನೆಗಳನ್ನು ಕೇಳಿರುವ ನ್ಯಾಯಪೀಠವು, ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಘಟನೆಯಲ್ಲಿ ಅವರು ಸಕ್ರಿಯ ಪಾತ್ರವನ್ನು ವಹಿಸಿದ್ದರೆಂಬುದಕ್ಕೆ ಪುರಾವೆ ನೀಡುವಂತೆ ಆದೇಶಿಸಿದೆ.

ಹೊಸದಿಲ್ಲಿ, ಮಾ.2: ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿದ್ದ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ಗೆ ದಿಲ್ಲಿ ಹೈಕೋರ್ಟ್ ಬುಧವಾರ ಆರು ತಿಂಗಳುಗಳ ಅವಧಿಗೆ ಮಧ್ಯಾಂತರ ಜಾಮೀನು ನೀಡಿದೆ. ಫೆಬ್ರವರಿ 9ರಂದು ಜೆಎನ್‌ಯು ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪ ಎದುರಿಸುತ್ತಿರುವ ಕನ್ಹಯ್ಯಿ ಕುಮಾರ್‌ಗೆ 10 ಸಾವಿರ ರೂ. ಭದ್ರತಾ ಖಾತರಿಯೊಂದಿಗೆ ಜಾಮೀನು ನೀಡಲಾಗಿದೆ.

ಕನ್ಹಯ್ಯ ಕುಮಾರ್ ಯಾವುದೇ ದೇಶವಿರೋಧಿ ಘೋಷಣೆಗಳನ್ನು ಕೂಗಿಲ್ಲವೆಂದು ಅವರ ವಕೀಲರು ದಿಲ್ಲಿ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ ವಾದಿಸಿದ್ದರು. ಆದರೆ ದಿಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೂರಿನಲ್ಲಿ ಕನ್ಹಯ್ಯೆ ಮತ್ತಿತರರು ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದರು ಹಾಗೂ ಸಂಸತ್‌ದಾಳಿ ಪ್ರಕರಣದ ಅಪರಾಧಿ ಅಫ್ಝಲ್ ಗುರುವಿನ ಪೋಸ್ಟರ್‌ಗಳನ್ನು ಹಿಡಿದಿದ್ದರೆಂದು ಆಪಾದಿಸಿದ್ದರು.ಕನ್ಹಯ್ಯಿ ಕುಮಾರ್ ತನಿಖೆಗೆ ಸಹಕರಿಸುತ್ತಿರಲಿಲ್ಲ ಹಾಗೂ ಗುಪ್ತಚರ ದಳ (ಐಬಿ) ಹಾಗೂ ದಿಲ್ಲಿ ಪೊಲೀಸರು ನಡೆಸಿದ ಜಂಟಿ ವಿಚಾರಣೆಯ ವೇಳೆ ಅವರು ವ್ಯತಿರಿಕ್ತ ಹೇಳಿಕೆಗಳನ್ನು ನೀಡಿದ್ದರೆಂದು ಅವರು ಆರೋಪಿಸಿದ್ದರು.

ದಿಲ್ಲಿ ಪೊಲೀಸರ ಆರೋಪವನ್ನು ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಸಹಿತ ಹಿರಿಯ ವಕೀಲರು ಪ್ರಶ್ನಿಸಿದ್ದಾರೆ. ಪ್ರತಿಭಟನೆಯ ವೇಳೆ ಮುಖಕ್ಕೆ ಮುಸುಕು ಹಾಕಿಕೊಂಡಿದ್ದ ಕೆಲವರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಆಗ ಕನ್ಹಯ್ಯೆ ಅವರಲ್ಲಿ ಗುರುತುಚೀಟಿಗಳನ್ನು ನೀಡುವಂತೆ ಕೇಳುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆಯೆಂದು ಅವರು ವಾದಿಸಿದ್ದಾರೆ.ಕನ್ಹಯ್ಯಾ ಕುಮಾರ್ ವಿರುದ್ಧ ದೇಶದ್ರೋಹದ ಆರೋಪವನ್ನು ದಾಖಲಿಸಿರುವ ಬಗ್ಗೆ ಪೊಲೀಸರಿಗೆ ಕೆಲವೊಂದು ಕಠಿಣ ಪ್ರಶ್ನೆಗಳನ್ನು ಕೇಳಿರುವ ನ್ಯಾಯಪೀಠವು, ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಘಟನೆಯಲ್ಲಿ ಅವರು ಸಕ್ರಿಯ ಪಾತ್ರವನ್ನು ವಹಿಸಿದ್ದರೆಂಬುದಕ್ಕೆ ಪುರಾವೆ ನೀಡುವಂತೆ ಆದೇಶಿಸಿದೆ.

♦♦♦

ಜೆಎನ್‌ಯು ‘ದೇಶದ್ರೋಹ’ದ ವೀಡಿಯೊ ನಕಲಿ: ಫಾರೆನ್ಸಿಕ್ ಪ್ರಯೋಗಾಲಯ ವರದಿ ಬಹಿರಂಗ

ಕನ್ಹಯ್ಯ ಬಂಧನ ಪ್ರಕರಣಕ್ಕೆ ಹೊಸ ತಿರುವು

ಹೊಸದಿಲ್ಲಿ, ಮಾ.2: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿವಾದಾತ್ಮಕ ಕಾರ್ಯಕ್ರಮದಲ್ಲಿ ಕೆಲವು ವಿದ್ಯಾರ್ಥಿಗಳು ದೇಶದ್ರೋಹದ ಘೋಷಣೆಗಳನ್ನು ಕೂಗಿದ್ದರೆಂಬುದಕ್ಕೆ ಪುರಾವೆಯೆಂದು ಪರಿಗಣಿಸಲಾದ ಎರಡು ವೀಡಿಯೊಗಳು ನಕಲಿಯೆಂದು ದಿಲ್ಲಿ ಸರಕಾರದ ಆದೇಶದನ್ವಯ ನಡೆಸಲಾದ ಅಪರಾಧ ವಿಧಿವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯು ಬಹಿರಂಗಪಡಿಸಿದೆ.

ಹೈದರಾಬಾದ್‌ನಲ್ಲಿರುವ ‘ಟ್ರೂತ್ ಲ್ಯಾಬ್ಸ್ ಸಂಸ್ಥೆ’ಗೆ ಆಮ್ ಆದ್ಮಿ ಸರಕಾರವು ಏಳು ವೀಡಿಯೊಗಳನ್ನು ಪರಿಶೀಲನೆಗಾಗಿ ಕಳುಹಿಸಿಕೊಟ್ಟಿತ್ತು. ಈ ಪೈಕಿ ಎರಡು ವೀಡಿಯೊಗಳನ್ನು ಸ್ಪಷ್ಟವಾಗಿ ತಿರುಚಲಾಗಿದ್ದು, ಅವುಗಳಲ್ಲಿ ಬೇರೆ ಧ್ವನಿಗಳನ್ನು ಸೇರ್ಪಡೆಗೊಳಿಸಿರುವುದು ದೃಢಪಟ್ಟಿದೆಯೆಂದು ಟ್ರೂತ್ ಲ್ಯಾಬ್ಸ್ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಸಿ.ಗಾಂಧಿ ತಿಳಿಸಿದ್ದಾರೆ.

‘‘ವೀಡಿಯೊದಲ್ಲಿ ನಿರಂತರತೆ ಕಂಡುಬರುತ್ತಿಲ್ಲ ಹಾಗೂ ಧ್ವನಿಯನ್ನು ಬೇರೆಲ್ಲಿಂದಲೋ ಸೇರಿಸಲಾಗಿದೆ. ಒಂದು ವೇಳೆ ನಮಗೆ ಧ್ವನಿಯ ಮಾದರಿಗಳನ್ನು ಒದಗಿಸಿದಲ್ಲಿ, ಯಾರ ಧ್ವನಿಯನ್ನು ಸೇರ್ಪಡೆಗೊಳಿಸಲಾಗಿದೆಯೆಂಬುದನ್ನು ನಿರ್ಧರಿಸಲು ಸಾಧ್ಯವಿದೆ’’ ಎಂದು ಗಾಂಧಿ ತಿಳಿಸಿದ್ದಾರೆ.

ಈ ತಿರುಚಲ್ಪಟ್ಟ ವೀಡಿಯೊಗಳು ಮೂಲತಃ ಯೂಟ್ಯೂಬ್ ಹಾಗೂ ಟ್ವಿಟರ್‌ಗಳಲ್ಲಿ ಪ್ರಸಾರಗೊಂಡಿದ್ದವು. ಈ ವೀಡಿಯೊದಲ್ಲಿ ಘೋಷಣೆಗಳನ್ನು ಕೂಗುವ ದೃಶ್ಯದ ತುಣುಕುಗಳನ್ನು ಬೇರೆಯೇ ದಿನಗಳಲ್ಲಿ ತೆಗೆಯಲಾಗಿತ್ತೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X