ಪ್ರಥಮ ಪಿಯು ಪರೀಕ್ಷೆ ಮುಂದೂಡಿಕೆ
ಇಂದು ಕೋಲಾರ-ಚಿಕ್ಕಬಳ್ಳಾಪುರ ಬಂದ್
ಕೋಲಾರ-ಚಿಕ್ಕಬಳ್ಳಾಪುರ, ಮಾ.3: ಶಾಶ್ವತ ನೀರಾವರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ನಡೆದ ಧರಣಿಯಲ್ಲಿ ರೈತರ ಮೇಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಬಂದ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿಯೂ ಶುಕ್ರವಾರ ನಡೆಯಬೇಕಿದ್ದ ಪ್ರಥಮ ಪಿಯು ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಂದ್ ಪ್ರಯುಕ್ತ ಪ್ರಥಮ ಪಿಯುಸಿ ಪರೀಕ್ಷೆಯನ್ನು ಕೋಲಾರದಲ್ಲಿ ಮಾ.7ಕ್ಕೆ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಾ.8ಕ್ಕೆ ಮುಂದೂಡಲಾಗಿದೆ ಎಂದು ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Next Story