Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆ್ಯಪಲ್ ಜಾಹೀರಾತು ಫಲಕಗಳಲ್ಲಿ...

ಆ್ಯಪಲ್ ಜಾಹೀರಾತು ಫಲಕಗಳಲ್ಲಿ ರಾರಾಜಿಸುತ್ತಿದೆ ಬೆಂಗಳೂರಿಗ ಕ್ಲಿಕ್ಕಿಸಿದ ಪತ್ನಿಯ ಫೊಟೋ

ವಾರ್ತಾಭಾರತಿವಾರ್ತಾಭಾರತಿ4 March 2016 2:55 PM IST
share
ಆ್ಯಪಲ್ ಜಾಹೀರಾತು ಫಲಕಗಳಲ್ಲಿ ರಾರಾಜಿಸುತ್ತಿದೆ ಬೆಂಗಳೂರಿಗ ಕ್ಲಿಕ್ಕಿಸಿದ ಪತ್ನಿಯ ಫೊಟೋ

ಬೆಂಗಳೂರು, ಮಾ.4: ಬೆಂಗಳೂರು ಮೂಲದ ದಂಪತಿ ಆಶಿಷ್ ಪರ್ಮಾರ್ ಹಾಗೂ ರೈನಾನಾಣಯ್ಯರವರ ಸಂತಸಕ್ಕೆ ಪಾರವೇ ಇಲ್ಲವಾಗಿದೆ. ಅವರಿಬ್ಬರ ಫೋನುಗಳೂ ಕಳೆದ ಕೆಲವು ದಿನಗಳಿಂದ ರಿಂಗಣಿಸುತ್ತಲೇ ಇವೆ. ದೇಶ ವಿದೇಶಗಳಿಂದ ಅವರ ಕುಟುಂಬ ವರ್ಗ, ಸ್ನೇಹಿತರು ಹಾಗೂ ಹಿತೈಷಿಗಳು ಕರೆ ಮಾಡುತ್ತಲೇ ಇದ್ದಾರೆ. ಪರ್ಮಾರ್ ಅವರು ತಮ್ಮ ಐಫೋನ್6ನಲ್ಲಿ ಕ್ಲಿಕ್ಕಿಸಿದ ಅವರ ಪತ್ನಿಯ ಛಾಯಾಚಿತ್ರ ಈಗ ಆ್ಯಪಲ್ ಜಾಹೀರಾತು ಫಲಕಗಳಲ್ಲಿವಿಶ್ವದಾದ್ಯಂತ ರಾರಾಜಿಸುತ್ತಿದೆ.

ಛಾಯಾಗ್ರಾಹಕರಾಗಿರುವ ಆಶಿಷ್ ಕಳೆದ ದೀಪಾವಳಿಯ ಸಂದರ್ಭ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾಗ ಕೆಂಪು ಸೀರೆಯಲ್ಲಿ ಮಿಂಚುತ್ತಿದ್ದ ತಮ್ಮ ಪತ್ನಿ ಕೈಯ್ಯಲ್ಲೊಂದು ಬೆಳಗುವ ಹಣತೆ ಹಿಡಿದುಕೊಂಡು ನಿಂತ ಚಿತ್ರವನ್ನು ಕ್ಲಿಕ್ಕಿಸಿದ್ದರು.


ಆ್ಯಪಲ್‌ನ ಐಫೋನ್ 6 ಅಭಿಯಾನದಲ್ಲಿ ಭಾಗವಹಿಸಿದ್ದ ಆಶಿಷ್ ಶಾಟ್‌ಆನ್‌ ಐಫೋನ್6 ಎಂಬ ಹ್ಯಾಶ್‌ಟಾಗ್‌ನೊಂದಿಗೆ ಸಾಮಾಜಿಕ ತಾಣದಲ್ಲಿ ಈ ಛಾಯಾಚಿತ್ರವನ್ನು ಪೋಸ್ಟ್ ಮಾಡಿದ್ದರು.


ಕಂಪೆನಿಯ ಈ ಅಭಿಯಾನಕ್ಕೆ ವಿಶ್ವದಾದ್ಯಂತದ ಒಟ್ಟು 41 ಮಂದಿ ಹವ್ಯಾಸಿ ಹಾಗೂ ವೃತ್ತಿಪರ ಛಾಯಾಗ್ರಾಹಕರು ತೆಗೆದ 53 ಛಾಯಾಚಿತ್ರಗಳು ಆಯ್ಕೆಯಾಗಿದ್ದು ಅವವುಗಳಲ್ಲಿ ಆಶಿಷ್ ತೆಗೆದ ಫೊಟೋ ಕೂಡ ಸೇರಿದೆ.


‘‘ಅದು ದೀಪಾವಳಿಯ ಸಂದರ್ಭವಾಗಿತ್ತು, ನನ್ನ ಪತ್ನಿ ನನ್ನ ತಾಯಿಗೆ ಮನೆಯ ಸುತ್ತ ಹಣತೆಯನ್ನಿಡಲು ಸಹಕರಿಸುತ್ತಿದ್ದಳು. ನಾನಲ್ಲಿ ಬಂದಾಗ ಒಂದು ಬಟ್ಟಲು ತುಂಬಾ ಹಣತೆಯೊಂದಿಗೆ ಆಕೆ ಹೋಗುತ್ತಿರುವುದನ್ನು ನೋಡಿ ಆ ಹಣತೆಯ ಬೆಳಕು ಆಕೆಯ ಮೊಗದಲ್ಲಿ ಮೂಡಿದ ಕಾಂತಿಯನ್ನು ಗಮನಿಸಿ ನನ್ನ ಐಫೋನ್ ತೆಗೆದು ಕೇವಲ ಒಂದು ಹಣತೆ ಕೈಯಲ್ಲಿ ಹಿಡಿದುಕೊಂಡು ಆಕೆಯನ್ನು ನಿಲ್ಲಲು ಹೇಳಿ ಆ ಫೊಟೋ ತೆಗೆದೆನು. ಅದೊಂದು ಸಹಜವಾಗಿ ತೆಗೆದ ಶಾಟ್ ಆಗಿತ್ತು,’’ಎಂದು ಆಶಿಷ್ ನೆನಪಿಸುತ್ತಾರೆ.


ಆಶಿಷ್ ತೆಗೆದ ಫೊಟೋ ಆಸ್ಟ್ರೇಲಿಯಾದಲ್ಲಿ ಕೂಡ ಕಂಪೆನಿಯ ಜಾಹೀರಾತುಗಳಲ್ಲಿ ಕಾಣಿಸತೊಡಗಿದ್ದು, ಆಶಿಷ್ ಹಾಗೂ ರೈನಾ ದಂಪತಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X