Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಪರೀಕ್ಷೆ ಮುಂದೂಡಿ ನಡೆಯಿತು...

ಸುಳ್ಯ: ಪರೀಕ್ಷೆ ಮುಂದೂಡಿ ನಡೆಯಿತು ಮಕ್ಕಳ ಹಬ್ಬ !

ಮಕ್ಕಳು ಹಾಜರು, ಅತಿಥಿಗಳು ಗೈರು...

ವಾರ್ತಾಭಾರತಿವಾರ್ತಾಭಾರತಿ4 March 2016 6:27 PM IST
share
ಸುಳ್ಯ: ಪರೀಕ್ಷೆ ಮುಂದೂಡಿ ನಡೆಯಿತು ಮಕ್ಕಳ ಹಬ್ಬ !

ಸುಳ್ಯ: ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬಾಲ ವಿಕಾಸ ಅಕಾಡೆಮಿ ಜಿಲ್ಲಾ ಕಾರ್ಯನುಷ್ಠಾನ ಸಮಿತಿ ಹಾಗೂ ಸಾರ್ವಜಿನಕ ಶಿಕ್ಷಣ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಶುಕ್ರವಾರ ಸುಳ್ಯದ ಕೆವಿಜಿ ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮವು ಅನೇಕ ಮಕ್ಕಳ ವಾರ್ಷಿಕ ಪರೀಕ್ಷೆಯನ್ನೇ ಕಸಿಯಿತು.

ಗಡಿಬಿಡಿ ಕಾರ್ಯಕ್ರಮ:
   
ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಮಾಡಿದರೆ ಗ್ರಾಮೀಣ ಪ್ರದೇಶದ ಮಕ್ಕಳು ಇದರಿಂದ ವಂಚಿತರಾಗುತ್ತಾರೆ ಎಂಬ ಕಾರಣದಿಂದ ತಾಲೂಕು ಕೇಂದ್ರದಲ್ಲಿ ಈ ಹಬ್ಬವನ್ನು ಆಯೋಜನೆ ಮಾಡಲಾಗಿತ್ತು. ವಾಸ್ತವವಾಗಿ ಈ ಮಕ್ಕಳ ಹಬ್ಬ 1 ತಿಂಗಳ ಮೊದಲೇ ನಡೆಯಬೇಕಿತ್ತು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲಾಗಿತ್ತು. ಹೀಗಾಗಿ ಕೊನೆ ಕ್ಷಣದಲ್ಲಿ ಡೇಟ್ ಫಿಕ್ಸ್ ಆಗಿ ಶುಕ್ರವಾರಕ್ಕೆ ನಿಗದಿಯಾಗಿತ್ತು. ಅತಿಥಿಗಳಿಗೆ, ಪತ್ರಕರ್ತರಿಗೆ ಇದರ ಆಮಂತ್ರಣ ಪತ್ರ ತಲುಪಿದ್ದು ಗುರುವಾರ ಸಂಜೆ. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಬೇಕಿತ್ತು. ಆಮಂತ್ರಣ ಪತ್ರದಲ್ಲಿ ಹೆಸರು ಇರುವ 24 ಅತಿಥಿಗಳ ಪೈಕಿ ಆ ಸಮಯಕ್ಕೆ ಒಬ್ಬರೂ ಬಂದಿರಲಿಲ್ಲ. ಸುಳ್ಯ ನಗರದ ನಾಲ್ಕೈದು ಪ್ರೌಢಶಾಲೆಗಳಿಂದ ಶಿಕ್ಷಣ ಇಲಾಖೆ ಸೂಚನೆಯಂತೆ ವಿದ್ಯಾರ್ಥಿಗಳು ಬಂದಿದ್ದರು. ಈ ಸೂಚನೆಯೂ ಶಾಲೆಗಳಿಗೆ ಬಂದದ್ದು ಶುಕ್ರವಾರ ಬೆಳಿಗ್ಗೆಯಷ್ಟೇ. 11 ಗಂಟೆಯ ವೇಳೆಗೆ ನ.ಪಂ. ಅಧ್ಯಕ್ಷ ಪ್ರಕಾಶ್ ಹೆಗ್ಡೆಯವರು ಆಗಮಿಸಿದ ಬಳಿಕ ಕಾರ್ಯಕ್ರಮ ಆರಂಭಗೊಂಡಿತು. ಸುಳ್ಯ ಸೇರಿದಂತೆ ಐದು ಕ್ಷೇತ್ರಗಳ ಶಾಸಕರು, ಮೂವರು ಸಚಿವರು, 4 ವಿಧಾನ ಪರಿಷತ್ ಸದಸ್ಯರು,, ಸಂಸದರು, ಬಾಲವಿಕಾಸ ಅಕಾಡೆಮಿ, ಸಮಾಜ ಕಲ್ಯಾಣ ಮಂಡಳಿ, ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಕ್ಕೂ ಮಿಗಿಲಾಗಿ ಬಾಲವಿಕಾಸ ಅಕಾಡೆಮಿಯ ಕಾರ್ಯನುಷ್ಠಾನ ಸಮಿತಿ ಸದಸ್ಯರು ಕಾರ್ಯಕ್ರಮಕ್ಕೆ ಸುಳಿಯಲೇ ಇಲ್ಲ. ಅಥವಾ ಕೇವಲ ಪ್ರೊಟೋಕಾಲ್ ಪ್ರಕಾರ ಅವರ ಹೆಸರು ಮುದ್ರಿತವಾಗಿತ್ತು!

ಕಷ್ಟ ಅನುಭವಿಸಿದ ಮಕ್ಕಳು:

   ಮಕ್ಕಳ ಹಬ್ಬಕ್ಕೆ ಜಿಲ್ಲೆಯಾದ್ಯಂತ ಸುಮಾರು 250 ಮಂದಿ ಆಗಮಿಸಿ ತಮ್ಮ ಪ್ರತಿಭಾ ಪ್ರದರ್ಶನ ನಡೆಸಬೇಕಿತ್ತು. ಕಡಬದ ಶಾಲೆಯೊಂದರ ಹೊರತಾಗಿ ಸುಳ್ಯದ ಹೊರಗಿನವರ್ಯಾರೂ ಬಂದಿರಲಿಲ್ಲ. ಸುಳ್ಯ ನಗರದ ವಿವಿಧ ಶಾಲೆಗಳಿಂದ ಸುಮಾರು 700 ರಷ್ಠು ವಿದ್ಯಾರ್ಥಿಗಳು ಬಂದಿದ್ದರು. ಬಂದ ವಿದ್ಯಾರ್ಥಿಗಳಲ್ಲಿಯೇ ಪ್ರತಿಭಾ ಪ್ರದರ್ಶನಕ್ಕೆ ಹೆಸರು ನೋದಾವಣೆ ಮಾಡಲಾಯಿತು. ಹಾಲ್ ಭರ್ತಿಯಾದಾಗ ಉಳಿದ ಮಕ್ಕಳು ನಿಲ್ಲಬೇಕಾಯಿತು. ಬಂದ ವಿದ್ಯಾರ್ಥಿಗಳಿಗೆ ತಮ್ಮ ಶಾಲೆಯಲ್ಲಿ ಬಿಸಿಯೂಟ ವ್ಯವಸ್ಥೆ ಮಾಡಲಾಗಿರಲಿಲ್ಲ. ಇತ್ತ ಮಕ್ಕಳ ಹಬ್ಬದಲ್ಲಿ ಇಷ್ಟು ಸಂಖ್ಯೆಯ ಮಕ್ಕಳಿಗೆ ಊಟದ ವ್ಯವಸ್ಥೆಯನ್ನೂ ಮಾಡಿರಲಿಲ್ಲ. ಹಾಗಾಗಿ ಮಧ್ಯಾಹ್ನ ಊಟಕ್ಕೂ ಕತ್ತರಿ ಬೀಳುವ ಸ್ಥಿತಿ ಇತ್ತು. ಕೊನೆ ಕ್ಷಣದಲ್ಲಿ ಊಟದ ವ್ಯವಸ್ಥೆಯನ್ನಂತೂ ಮಾಡಲಾಯಿತು.ಎಂದಿನಂತೆ ಸುಳ್ಯದಲ್ಲಿ ವಿದ್ಯುತ್ ನಾಪತ್ತೆಯಾಗಿತ್ತು. ಪುರಭವನದಲ್ಲಿ ಕುಳಿತ ಮಕ್ಕಳ ಸ್ಥಿತಿಯಂತೂ ದೇವರಿಗೇ ಪ್ರೀತಿ.

ಪರೀಕ್ಷೆ ಇಲ್ಲ:
 ಇವೆಲ್ಲಕ್ಕಿಂತ ಗಂಭೀರ ವಿಷಯವೆಂದರೆ ಬಂದ ಬಹುತೇಕ ಶಾಲಾ ವಿದ್ಯಾರ್ಥಿಗಳಿಗೆ ಶುಕ್ರವಾರ ವಾರ್ಷಿಕ ಪರೀಕ್ಷೆ ಇತ್ತು. ಮಕ್ಕಳ ಹಬ್ಬಕ್ಕೆ ಬರಬೇಕಾದ ಕಾರಣದಿಂದ ಇಂತಹ ಶಾಲಾ ಪರೀಕ್ಷೆಯನ್ನು ಮುಂದೂಡಲಾಯಿತು. ಇದಕ್ಕೆ ಶಿಕ್ಷಣ ಇಲಾಖೆಯ ಸಮಜಾಯಿಷಿಕೆ ಬೇರೆಯೇ ಇತ್ತು.
ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗಬೇಕಾದ ಉತ್ತಮ ಕಾರ್ಯಕ್ರಮವೊಂದು ಅಕಾಡೆಮಿ ಮತ್ತು ಇಲಾಖೆಯ ಅಸಮರ್ಪಕ ಕಾರ್ಯದಕ್ಷತೆಯಿಂದ ಕಾಟಾಚಾರಕ್ಕೆ ನಡೆಯುವುವಂತಾಯಿತು.

ಉದ್ಘಾಟನೆ:

 ಪಯಸ್ವಿನಿ ಸ್ತ್ರೀ ಶಕ್ತಿ ಸೊಸೈಟಿ ಅಧ್ಯಕ್ಷೆ ಉಷಾ ಜಯರಾಮ್ ಕಾಯಕ್ರಮ ಉದ್ಘಾಟಿಸಿ ಮಕ್ಕಳ ಭಾಗೀದಾರಿಕೆಯಿಂದ ಮಕ್ಕಳ ಹಬ್ಬ ಯಶಸ್ವಿಯಾಗಲಿ ಎಂದು ಹಾರೈಸಿದರು. ಅಧ್ಯಕ್ಷತೆ ವಹಿಸಿದ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಮಾತನಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಇಂತಹ ಕಾರ್ಯಕ್ರಮಗಳು ಪೂರಕ ಎಂದು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಪುರುಷೋತ್ತಮ, ಶಿಕ್ಷಣ ಸಂಯೋಜಕ ಪದ್ಮನಾಭ ಅತ್ಯಾಡಿ ವೇದಿಕೆಯಲ್ಲಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಉಸ್ಮಾನ್ ಸ್ವಾಗತಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಪ್ರಸ್ತಾವನೆಗೈದರು. ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಕನ್ಯಾ ವಂದಿಸಿದರು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X