Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ...

ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಗೆ ನ್ಯಾಯಾಲಯದಿಂದ ತಡೆಯಾಜ್ಞೆ

ವಾರ್ತಾಭಾರತಿವಾರ್ತಾಭಾರತಿ4 March 2016 6:42 PM IST
share

ಪುತ್ತೂರು: ಪುತ್ತೂರು ನಗರಸಭಾ ಹಾಲಿ ಅಧ್ಯಕ್ಷ ಮತ್ತು ಉಪ್ಯಾಧ್ಯಕ್ಷರ 30 ತಿಂಗಳ ಅಧಿಕಾರಾವಧಿ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಮಾ. 10 ರಂದು ನಡೆಯಬೇಕಿದ್ದ ಪುತ್ತೂರು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಕೆಲ ಸದಸ್ಯರು ರಿಟ್ ಅರ್ಜಿ ಸಲ್ಲಿಸಿ ರಾಜ್ಯ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮಾ. 10 ರಂದು ಚುನಾವಣೆ ನಡೆಸುವಂತೆ ದಿನಾಂಕ ನಿಗದಿಪಡಿಸಿ ಪುತ್ತೂರು ಸಹಾಯಕ ಕಮಿಷನರ್ ಅವರನ್ನು ಚುನಾವಣಾಧಿಕಾರಿಯನ್ನಾಗಿ ನೇಮಕಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರು.
ಈ ಬಾರಿಯ ಅಧ್ಯಕ್ಷ ಹುದ್ದೆಯನ್ನು ಪರಿಶಿಷ್ಠ ಪಂಗಡದ ಮಹಿಳೆಗೆ ಮತ್ತು ಉಪಾಧ್ಯಕ್ಷ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಮೀಸಲು ಗೊಳಿಸಲಾಗಿತ್ತು. ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ ಶೆಟ್ಟಿ ಮತ್ತು ಇತರ 6 ಮಂದಿ ಸದಸ್ಯತ್ವ ಅನರ್ಹಗೊಂಡು ಉಚ್ಛನ್ಯಾಯಾಲಯದಿಂದ ತಡೆಯಾಜ್ಞೆ ತರುವ ಮೂಲಕ ಸದಸ್ಯತ್ವ ಉಳಿಸಿಕೊಂಡ ಸದಸ್ಯರು ತಮ್ಮ ಮತದಾನದ ಹಕ್ಕಿನ ಕುರಿತ ದಾವೆಯ ಅಂತಿಮ ತೀರ್ಮಾನವಾಗುವ ತನಕ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಿದರೆ ನಮ್ಮ ಹಕ್ಕಿನಿಂದ ನಾವು ವಂಚಿತರಾಗುತ್ತೇವೆ ಎಂದು ರಿಟ್ ಸಲ್ಲಿಸಿದ ಹಿನ್ನೆಲೆಯಲ್ಲಿ ಉಚ್ಛ ನ್ಯಾಯಾಲಯ ಈ ತಡೆಯಾಜ್ಞೆ ನೀಡಿದೆ.
ನಗರಸಭಾ ಮಾಜಿ ಅಧ್ಯಕ್ಷರಾದ ನೆಲ್ಲಿಕಟ್ಟೆ ಜಗದೀಶ ಶೆಟ್ಟಿ, ವಾಣಿಶ್ರೀಧರ್ ಹಾಗೂ ಸದಸ್ಯರಾದ ನವೀನ್ ಚಂದ್ರ ನಾಕ್, ರೇಖಾ ಯಶೋಧರ, ಸೀಮಾ ಗಂಗಾಧರ, ಕಮಲಾ ಆನಂದ, ದೀಕ್ಷಾ ಪೈ ಉಚ್ಚ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದರು. ಇವರು ಜಿಲ್ಲಾಧಿಕಾರಿಗಳ ನ್ಯಾಯಾಲಯದಿಂದ ಸದಸ್ಯತ್ವ ಅನರ್ಹಗೊಂಡ ಸದಸ್ಯರಾಗಿದ್ದು, ಬಳಿಕ ಈ ಆದೇಶಕ್ಕೆ ಇವರು ತಡೆಯಾಜ್ಞೆ ತಂದು ಸದಸ್ಯರಾಗಿ ಮುಂದುವರಿದಿದ್ದರು. ಆದರೆ ಇವರಿಗೆ ನಗರಸಭೆಗೆ ಸಂಬಂಧಪಟ್ಟ ಯಾವುದೇ ಮತದಾನದಲ್ಲಿ ಪಾಲ್ಗೊಳ್ಳುವ ಹಕ್ಕು ಇರಲಿಲ್ಲ. ತಮಗೂ ಮತದಾನದ ಹಕ್ಕು ನೀಡುವಂತೆ ಇವರು ಉಚ್ಛ ನ್ಯಾಯಾಲಯದಲ್ಲಿ ಪ್ರತ್ಯೇಕ ದಾವೆ ಹೂಡಿದ್ದರು. ಈ ದಾವೆಯ ಅಂತಿಮ ತೀರ್ಪು ಇನ್ನೂ ಹೊರಬಂದಿಲ್ಲ. ಆದ ಕಾರಣ ಈ ಹಂತದಲ್ಲಿ ನಗರಸಭಾ ಅಧ್ಯಕ್ಷ ಮತ್ತು ಉಪ್ಯಾಧ್ಯಕ್ಷರ ಚುನಾವಣೆ ನಡೆಸಬಾರದು ಎಂದು ರಿಟ್ ಅರ್ಜಿಯಲ್ಲಿ ವಿನಂತಿಸಿದ್ದರು.
ಅರ್ಜಿದಾರರ ಪರವಾಗಿ ನ್ಯಾಯವಾದಿಗಳಾದ ರಾಜಶೇಖರ ಹಿಲಿಯಾರು ಮತ್ತು ಮಹೇಶ್ ಕಜೆ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X