Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ ಗಡಿಯಲ್ಲಿ 30 ಮೀ. ಸುರಂಗ...

ಜಮ್ಮು-ಕಾಶ್ಮೀರ ಗಡಿಯಲ್ಲಿ 30 ಮೀ. ಸುರಂಗ ಪತ್ತೆ!

ವಾರ್ತಾಭಾರತಿವಾರ್ತಾಭಾರತಿ4 March 2016 11:50 PM IST
share
ಜಮ್ಮು-ಕಾಶ್ಮೀರ ಗಡಿಯಲ್ಲಿ 30 ಮೀ. ಸುರಂಗ ಪತ್ತೆ!

ಭಾರೀ ಭಯೋತ್ಪಾದಕ ದಾಳಿಯ ಯೋಜನೆ: ಬಿಎಸ್ಸೆಫ್

ಶ್ರೀನಗರ, ಮಾ.4: ಜಮ್ಮು-ಕಾಶ್ಮೀರ ನಿಯಂತ್ರಣ ರೇಖೆಯ ಮೂಲಕ ಹಾದು ಹೋಗಿರುವ 30 ಮೀ. ಉದ್ದ ಹಾಗೂ 10 ಅಡಿ ಆಳದ ಸುರಂಗವೊಂದನ್ನು ಸೈನಿಕರು ಸ್ಥಳದ ಹುಲ್ಲು ತೆಗೆದು ಸ್ವಚ್ಛಗೊಳಿಸುವ ವೇಳೆ ಗುರುವಾರ ಪತ್ತೆ ಮಾಡಿದ್ದಾರೆ.

ಭಾರೀ ಭಯೋತ್ಪಾದನಾ ದಾಳಿಯೊಂದನ್ನು ನಡೆಸುವ ಸಲುವಾಗಿ ಈ ಸುರಂಗವನ್ನು ತೋಡಲಾಗಿತ್ತೆಂದು ಗಡಿ ಭದ್ರತಾ ಪಡೆ (ಬಿಎಸ್ಸೆಫ್) ಇಂದು ಹೇಳಿದೆ.

ಸದ್ಯೋಭವಿಷ್ಯದಲ್ಲಿ ಈ ಸುರಂಗದ ಮೂಲಕ ಭಾರತದೊಳಗೆ ನುಸುಳಿ ದೊಡ್ಡ ಭಯೋತ್ಪಾದಕ ದಾಳಿಯೊಂದನ್ನು ನಡೆಸಲು ಯೋಜನೆ ಹಾಕಿಕೊಂಡಿದ್ದಂತೆ ತೋರುತ್ತಿದೆಯೆಂದು ಹಿರಿಯ ಬಿಎಸ್ಸೆಫ್ ಅಧಿಕಾರಿ ರಾಕೇಶ್ ಶರ್ಮಾ ತಿಳಿಸಿದ್ದಾರೆ.

ಆರ್.ಎಸ್.ಪುರ ವಲಯದ ಅಲ್ಲಾಡ್ ಮಾಯಿ ದೆ ಕೊಥೇ ಎಂಬ ಗಡಿ ಠಾಣ್ಯವೊಂದರ ಬಳಿ ಆನೆ ಹುಲ್ಲಿನಿಂದ ಮುಚ್ಚಿದ್ದ ಈ ಸುರಂಗ ಕಂಡು ಬಂದಿದೆ.

ಈ ಬಗ್ಗೆ ಬಿಎಸ್ಸೆಫ್ ಪಾಕಿಸ್ತಾನದೊಂದಿಗೆ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ತನ್ನಲ್ಲಿರುವ ಸಾಕ್ಷಗಳ ಆಧಾರದಲ್ಲಿ ತಾನು ಕ್ರಮವನ್ನು (ಪಾಕಿಸ್ತಾನದಿಂದ) ನಿರೀಕ್ಷಿಸುತ್ತಿದ್ದೇನೆಂದು ಅದು ಹೇಳಿದೆ.

ತನಿಖೆಗೆ ಮುಂದೆ ಬರುವಂತೆ ತಾವು ಪಾಕಿಸ್ತಾನ ರೇಂಜರ್ಸ್‌ಗೆ ಮನವಿ ಮಾಡಿದ್ದೇವೆ. ತಾವು ಈ ಬಗ್ಗೆ ಎಚ್ಚರಿಕೆ ವಹಿಸಿ ಕ್ರಮ ಕೈಗೊಳ್ಳುತ್ತೇವೆಂದು ಅವರು ಹೇಳಿದ್ದಾರೆಂದು ರಾಕೇಶ್ ಶರ್ಮಾ ತಿಳಿಸಿದ್ದಾರೆ.

ಪಾಕಿಸ್ತಾನದಿಂದ ಕೊರೆಯಲಾಗಿರುವ ಈ ಸುರಂಗದ ಮೂಲಕ ಜಮ್ಮು-ನಗರದೊಳಗೆ ಶಸ್ತ್ರಾಸ್ತ್ರಗಳು ಹಾಗೂ ಭಯೋತ್ಪಾದಕರನ್ನು ಒಳಗೆ ಕಳುಹಿಸಲು ಉದ್ದೇಶಿಸಲಾಗಿತ್ತೆಂದು ಅವರು ಹೇಳಿದ್ದಾರೆ.

ಸುರಂಗ ಪೂರ್ಣಗೊಂಡಿರಲಿಲ್ಲ. ಅದರ ಇನ್ನೊಂದು ತುದಿ ಭಾರತದೊಳಗೆ ತೆರೆದುಕೊಂಡಿಲ್ಲವೆಂದು ಸೈನಿಕರು ತಿಳಿಸಿದ್ದಾರೆ.

2012ರಲ್ಲಿ ವಾತಾಯಾನ ಪೈಪುಗಳಿದ್ದ 400 ಮೀ.ಉದ್ದದ ಬಹುನಾಜೂಕಾದ ಸುರಂಗವೊಂದು ಸಂಬಾ ವಲಯದಲ್ಲಿ ಪತ್ತೆಯಾಗಿತ್ತು. ಇನ್ನೊಂದು ಸುರಂಗ ಅಖ್ನೂರ್ ವಲಯದ ಗಡಿಯ ಬಳಿ 2009ರಲ್ಲಿ ಕಂಡು ಬಂದಿತ್ತು.

ಕುರುಚಲು ಕಾಡನ್ನು ಬೆಳೆಯಗೊಟ್ಟು ಸುರಂಗ ರಚಿಸುವುದು ಅವರ ಕಾರ್ಯತಂತ್ರವಾಗಿದೆಯೆಂದು ಎಎಸ್ಸೆಫ್ ಅಧಿಕಾರಿ ಹೇಳಿದ್ದಾರೆ.

ಅಂತಹ ಸುರಂಗ ಕೊರೆಯಲು ಪರಿಣತಿ ಹಾಗೂ ಭಾರೀ ತಾಂತ್ರಿಕತೆ ಬೇಕಾಗುತ್ತದೆ. ಈ ಹಿಂದೆ ಬಂಧಿಸಲ್ಪಟ್ಟಿದ್ದ ಭಯೋತ್ಪಾದಕರು, ಗಡಿಯೊಳಗೆ ನುಸುಳುವುದಕ್ಕೆ ಸುರಂಗಳನ್ನು ಉಪಯೋಗಿಸುವ ಬಗ್ಗೆ ಸೂಚನೆ ನೀಡಿದ್ದರು. ಗಡಿ ನುಸುಳುವ ಪಾರಂಪರಿಕ ಮಾರ್ಗಗಳು ತಡೆಯಲ್ಪಟ್ಟಿರುವುದರಿಂದ ಭಯೋತ್ಪಾದಕರು ತಮ್ಮ ತಂತ್ರವನ್ನು ಬದಲಿಸಿರುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X