ತುಂಬೆ: ರಾಷ್ಟ್ರೀಯ ಹೆದ್ದಾರಿ ಬಳಿ ಅತಿಕ್ರಮಣ ತೆರವು

ಬಂಟ್ವಾಳ, ಮಾ.5: ತುಂಬೆಯಿಂದ ಮಂಗಳೂರು ಮಹಾ ನಗರ ಪಾಲಿಕೆಗೆ ನೀರು ಪೂರೈಕೆಯಾಗುವ ಪೈಪ್ ಮೇಲೆ ಅಕ್ರಮವಾಗಿ ನಿರ್ಮಿಸಿರುವ ಕಂಪೌಂಡ್ ಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.
ಅತಿಕ್ರಮಿಸಿರುವ ಜಾಗವನ್ನು ತೆರವುಗೊಳಿಸುವಂತೆ ಅಧಿಕಾರಿಗಳು ಈ ಹಿಂದೆಯೇ ಸಂಬಂಧಿಸಿದವರಿಗೆ ನೊಟೀಸ್ ನೀಡಿದ್ದರು. ಸ್ವಯಂ ಆಗಿ ತೆರವುಗೊಳಿಸದಿರುವುದರಿಂದ ಇಂದು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರು ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೆಲ ಹೊತ್ತು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು, ತಹಶೀಲ್ದಾತರ್ ಪುರಂದರ ಹೆಗಡೆ ಹಾಗೂ ಮಂಗಳೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ಆಗಮಿಸಿದ್ದರು.
Next Story





