Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಾಂತಿಪಾಲಕರ ಲೈಂಗಿಕ ದೌರ್ಜನ್ಯ ಪ್ರಕರಣಗಳ...

ಶಾಂತಿಪಾಲಕರ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ

ವಿಶ್ವಸಂಸ್ಥೆ ವರದಿಯಲ್ಲಿ ಕಳವಳ

ವಾರ್ತಾಭಾರತಿವಾರ್ತಾಭಾರತಿ5 March 2016 8:41 PM IST
share
ಶಾಂತಿಪಾಲಕರ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ

ವಿಶ್ವಸಂಸ್ಥೆ, ಮಾ. 5: ತನ್ನ ಶಾಂತಿಪಾಲನಾ ಪಡೆಯ ಸೈನಿಕರಿಂದ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ವಿಶ್ವಸಂಸ್ಥೆ ಶುಕ್ರವಾರ ತಿಳಿಸಿದೆ. ಕಳೆದ ವರ್ಷ 21 ದೇಶಗಳ ಸೈನಿಕರ ವಿರುದ್ಧ 69 ಆರೋಪಗಳು ದಾಖಲಾಗಿವೆ ಎಂದು ವರದಿಯೊಂದು ತಿಳಿಸಿದೆ.

ಪ್ರಕರಣಗಳನ್ನು ನಿಭಾಯಿಸಲು ಸ್ಥಳದಲ್ಲೇ ಕೋರ್ಟ್ ಮಾರ್ಶಲ್ (ಸೇನಾ ನ್ಯಾಯಾಲಯದ ವಿಚಾರಣೆ)ಗಳನ್ನು ನಡೆಸಬೇಕು ಎಂದು ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಬಾನ್ ಕಿ ಮೂನ್ ಕರೆ ನೀಡಿದ್ದಾರೆ. ಅದೇ ವೇಳೆ, ಈ ನಿಟ್ಟಿನಲ್ಲಿ ತಾನು ಭದ್ರತಾ ಮಂಡಳಿಯ ಪ್ರಥಮ ಕರಡು ನಿರ್ಣಯವೊಂದನ್ನು ಸಿದ್ಧಪಡಿಸುತ್ತಿರುವುದಾಗಿ ಅಮೆರಿಕ ಹೇಳಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸೈನಿಕರ ರಾಷ್ಟ್ರೀಯತೆಗಳನ್ನು ಮೊದಲ ಬಾರಿಗೆ ಬಾನ್ ತನ್ನ ವಾರ್ಷಿಕ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ. ಸಂಬಂಧಪಟ್ಟ ದೇಶಗಳು ತಮ್ಮ ತಪ್ಪಿತಸ್ಥ ಸೈನಿಕರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.

ಹೆಚ್ಚಿನ ಸಂಖ್ಯೆಯ ಆರೋಪಗಳನ್ನು ಎದುರಿಸುತ್ತಿರುವುದು ಆಫ್ರಿಕ ದೇಶಗಳ ಸೈನಿಕರು ಮತ್ತು ಪೊಲೀಸರು. ಆ ದೇಶಗಳೆಂದರೆ: ಕ್ಯಾಮರೂನ್, ಕಾಂಗೊ, ತಾಂಝಾನಿಯ, ಬೆನಿನ್, ಬುರ್ಕಿನ ಫಸೊ, ಬುರುಂಡಿ, ಗ್ಯಾಬನ್, ಘಾನ, ಮಡಗಾಸ್ಕರ್, ನೈಜರ್, ನೈಜೀರಿಯ, ರುವಾಂಡ, ಸೆನೆಗಲ್ ಮತ್ತು ಟೋಗೊ.

ಕೆನಡ ಮತ್ತು ಜರ್ಮನಿಯ ಶಾಂತಿಪಾಲನಾ ಪೊಲೀಸರು ಮತ್ತು ಮೋಲ್ಡೋವ ಮತ್ತು ಸ್ಲೊವೇಕಿಯ ದೇಶಗಳ ಸೈನಿಕರ ವಿರುದ್ಧವೂ ಲೈಂಗಿಕ ದೌರ್ಜನ್ಯ ಆರೋಪಗಳು ದಾಖಲಾಗಿವೆ.

ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳು ಕಾರ್ಯಾಚರಣೆ ನಡೆಸಿದ ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್ ಮತ್ತು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೊ ದೇಶಗಳಲ್ಲಿ ಗರಿಷ್ಠ ಸಂಖ್ಯೆಯ ಲೈಂಗಿಕ ದೌರ್ಜನ್ಯಗಳು ವರದಿಯಾಗಿದ್ದವು. ಅದೇ ವೇಳೆ, ಐವರಿ ಕೋಸ್ಟ್, ಮಾಲಿ ಮತ್ತು ಇತರ ಆರು ದೇಶಗಳಿಂದಲೂ ದೌರ್ಜನ್ಯಗಳು ವರದಿಯಾಗಿವೆ.

ಬದಲಾವಣೆಯ ಹರಿಕಾರರಾಗಿ ಮಹಿಳೆಯರು: ಮೂನ್ ಕರೆ

ನ್ಯೂಯಾರ್ಕ್, ಮಾ. 5: ‘‘ಬದಲಾವಣೆಯ ಹರಿಕಾರ’’ರಾಗಿ ಮಹಿಳೆಯರನ್ನು ಸಬಲೀಕರಣಗೊಳಿಸಬೇಕು ಎಂಬುದಾಗಿ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಬಾನ್ ಕಿ ಮೂನ್ ಕರೆ ನೀಡಿದ್ದಾರೆ ಎಂದು ಮಾಧ್ಯಮಗಳು ಶನಿವಾರ ವರದಿ ಮಾಡಿವೆ.

 ಮಾರ್ಚ್ 8ರಂದು ಆಚರಿಸಲಾಗುವ ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಮುಖ್ಯಸ್ಥರು ಈ ಕರೆ ನೀಡಿದ್ದಾರೆ.

ಜಗತ್ತಿನ ಬಡತನದ ಭಾಗಗಳಲ್ಲಿ ಹೆರಿಗೆಯ ಸಂದರ್ಭಗಳಲ್ಲಿ ಸಾಯುವ ಅಪಾಯವನ್ನು ಮಹಿಳೆಯರು ಈಗಲೂ ಎದುರಿಸುತ್ತಿದ್ದಾರೆ ಹಾಗೂ ಇಂದಿಗೂ ಬಾಲಕಿಯರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಬಾನ್‌ರ ಹೇಳಿಕೆಯನ್ನು ಉಲ್ಲೇಖಿಸಿ ಕ್ಸಿನುವ ವಾರ್ತಾ ಸಂಸ್ಥೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X