Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಹಿತ್ಯಕ್ಕೆ ಧರ್ಮದ ಚೌಕಟ್ಟನ್ನು...

ಸಾಹಿತ್ಯಕ್ಕೆ ಧರ್ಮದ ಚೌಕಟ್ಟನ್ನು ವಿರೋಧಿಸಿದ್ದ ಬಾಳಿಲ: ಡಾ.ತಾಳ್ತಜೆ

ವಾರ್ತಾಭಾರತಿವಾರ್ತಾಭಾರತಿ5 March 2016 11:34 PM IST
share
ಸಾಹಿತ್ಯಕ್ಕೆ ಧರ್ಮದ ಚೌಕಟ್ಟನ್ನು ವಿರೋಧಿಸಿದ್ದ ಬಾಳಿಲ: ಡಾ.ತಾಳ್ತಜೆ

ವುಂಗಳೂರು, ಮಾ.5: ಸಾಹಿತ್ಯಕ್ಕೆ ಧರ್ಮದ ಚೌಕಟ್ಟನ್ನು ನಿರ್ಮಿಸುವುದನ್ನು ದಿಟ್ಟವಾಗಿ ವಿರೋಧಿಸಿದ ನೇರ ನಡೆನುಡಿಯ ವ್ಯಕ್ತಿತ್ವವನ್ನು ಬಾಳಿಲ ಕೃಷ್ಣಶಾಸ್ತ್ರಿ ಹೊಂದಿ ದ್ದರು ಎಂದು ಮುಂಬೈ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ತಿಳಿಸಿದರು.

ಕರ್ನಾಟಕ ಕೋಮು ಸೌರ್ಹಾದ ವೇದಿಕೆಯ ದ.ಕ. ಜಿಲ್ಲಾ ಘಟಕದ ವತಿಯಿಂದ ಅಗಲಿದ ಹಿರಿಯ ಸಾಹಿತಿ ಬಾಳಿಲ ಕೃಷ್ಣಶಾಸ್ತ್ರಿಯವರಿಗೆ ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾನಿಲಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿದರು.

ಸಾಹಿತ್ಯ ಸಮ್ಮೇಳನಗಳನ್ನು ಧಾರ್ಮಿಕ ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳುವುದನ್ನು ನೇರವಾಗಿ ವಿರೋಧಿಸಿದ ಬಾಳಿಲ ಕೃಷ್ಣಶಾಸ್ತ್ರಿ, ಮಾನವೀಯ ವೌಲ್ಯಗಳನ್ನು ಹೊಂದಿದ್ದ ಉತ್ತಮ ಶಿಕ್ಷಕರಾಗಿದ್ದರು. ಜೊತೆಗೆ ಸಾಹಿತ್ಯ ಪರಿಚಾರಿಕೆಯ ಕೆಲಸವನ್ನು ಬದ್ಧತೆಯೊಂದಿಗೆ ನಿರ್ವಹಿಸಿದವರು.ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣ, ಶಿಕ್ಷೆ ನೀಡದೆ ಶಿಕ್ಷಣ ನೀಡುವುದು, ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಪರಿಗಣಿಸಬೇಕು ಎನ್ನುವುದನ್ನು ಗಟ್ಟಿಯಾಗಿ ಪ್ರತಿಪಾದಿಸಿದವರು.

ಗ್ರಾಮೀಣ ಪ್ರದೇಶದಲ್ಲಿ ಆಂಗ್ಲಭಾಷೆಯನ್ನು ಅತ್ಯಂತ ಸರಳ ಹಾಗೂ ಪರಿಣಾಮಕಾರಿ ವಿಧಾ ನದ ಮೂಲಕ ವಿದ್ಯಾರ್ಥಿಗಳಿಗೆ ಬೋಧನೆ ಮಾಡು ತ್ತಿದ್ದವರಲ್ಲಿ ಬಾಳಿಲ ಕೃಷ್ಣಶಾಸ್ತ್ರಿಗಳು ಒಬ್ಬರಾಗಿದ್ದರು. ಶಾಸ್ತ್ರಿಗಳು ಒಬ್ಬ ಉತ್ತಮ ಕಾರ್ಯಕ್ರಮ ನಿರೂಪಕರಾಗಿದ್ದರು. ಅವರು ನಿರೂಪಿಸುತ್ತಿದ್ದ ಕಾರ್ಯಕ್ರಮಗಳಲ್ಲಿ ಲವಲವಿಕೆ ಇರುತ್ತಿತ್ತು ಎಂದು ತಾಳ್ತಜೆ ವಸಂತ ಕುಮಾರ್ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್ ವಹಿಸಿದ್ದರು.
 ಕರ್ನಾಟಕ ಕೋಮು ಸೌರ್ಹಾದ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಇಸ್ಮತ್ ಪಜೀರ್ ಕಾರ್ಯಕ್ರಮ ನಿರೂಪಿಸಿದರು. ‘ಪಡಿ’ ಸಂಘಟನೆಯ ನಿರ್ದೇಶಕ ರೆನ್ನಿ ಡಿಸೋಜ ಹಾಗೂ ಬಾಳಿಲ ಕೃಷ್ಣಶಾಸ್ತ್ರಿಯವರ ಪತ್ನಿ ಸರಸ್ವತಿ ಈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಾಳಿಲ ಕೃಷ್ಣ ಶಾಸ್ತ್ರಿಗಳು ಶಿಕ್ಷಣದ ಖಾಸಗೀಕರಣವನ್ನು ಬಲವಾಗಿ ವಿರೋಧಿಸಿದವರು. ಶಿಕ್ಷಣ ಕ್ಷೇತ್ರದಲ್ಲಿ ಪಠ್ಯಕ್ರಮ ಹಾಗೂ ಶಿಕ್ಷಣದಲ್ಲಿ ಬೋಧನಾ ಕ್ರಮದ ಬಗ್ಗೆ ವಿರೋಧ ಹೊಂದಿದ್ದ ಬಾಳಿಲ ಕೃಷ್ಣ ಶಾಸ್ತ್ರಿ ಸಮಾಜದ ಸಮಕಾಲೀನ ಸಮಸ್ಯೆಗಳಾದ ಕೋಮುವಾದ, ವೈಜ್ಞಾನಿಕ ಮನೋಭಾವದ ಕೊರತೆ ಸೇರಿದಂತೆ ಹಲವಾರು ಪ್ರಗತಿಪರ ವಿಚಾರ ಧಾರೆಗಳನ್ನು ಮೈಗೂಡಿಸಿಕೊಂಡಿದ್ದರು.
           -ಸುರೇಶ್ ಭಟ್ ಬಾಕ್ರಬೈಲ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X