Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅವಳಿ ಚಿನ್ನ ಜಯಿಸಿ ಇತಿಹಾಸ ಬರೆದ ಭಾರತ

ಅವಳಿ ಚಿನ್ನ ಜಯಿಸಿ ಇತಿಹಾಸ ಬರೆದ ಭಾರತ

ವಾರ್ತಾಭಾರತಿವಾರ್ತಾಭಾರತಿ5 March 2016 11:48 PM IST
share
ಅವಳಿ ಚಿನ್ನ ಜಯಿಸಿ ಇತಿಹಾಸ ಬರೆದ ಭಾರತ

ವಿಶ್ವ ಟೇಬಲ್ ಟೆನಿಸ್ ಟೀಮ್ ಚಾಂಪಿಯನ್‌ಶಿಪ್

ಕೌಲಾಲಂಪುರ, ಮಾ.5: ವಿಶ್ವ ಟೇಬಲ್ ಟೆನಿಸ್ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿರುವ ಭಾರತದ ಪುರುಷರ ಹಾಗೂ ಮಹಿಳಾ ತಂಡ ಐತಿಹಾಸಿಕ ಸಾಧನೆ ಮಾಡಿದೆ.

ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಮಹಿಳಾ ತಂಡ ಲಕ್ಸೆಂಬರ್ಗ್ ತಂಡವನ್ನು 3-1 ಅಂತರದಿಂದ ಮಣಿಸಿತು. ಪುರುಷರ ತಂಡ ಬ್ರೆಝಿಲ್ ತಂಡವನ್ನು 3-2 ಅಂತರದಿಂದ ಮಣಿಸುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿತು.

 ಭಾರತದ ಮಹಿಳಾ ತಂಡ ಇದೇ ಮೊದಲ ಬಾರಿ ಮೊದಲ ಹಾಗೂ ಎರಡನೆ ಹಂತದಲ್ಲಿ 8 ಪಂದ್ಯಗಳನ್ನು ಜಯಿಸಿ ಕ್ಲೀನ್‌ಸ್ವೀಪ್ ಸಾಧಿಸಿದೆ. ಪುರುಷರ ತಂಡ ನೈಜೀರಿಯ ವಿರುದ್ಧ ಸೋತ ನಂತರ ಉತ್ತಮ ಪ್ರದರ್ಶನ ನೀಡಿದೆ.

ಮಹಿಳೆಯರ ಟೀಮ್ ಫೈನಲ್‌ನಲ್ಲಿ ವೌಮಾ ದಾಸ್ ಅವರು ಡ್ಯಾನಿಯೆಲ್ ಕಾನ್ಸ್‌ಬ್ರಕ್‌ರನ್ನು 3-0 ಅಂತರದಿಂದ ಮಣಿಸಿ ತಂಡಕ್ಕೆ ಗೆಲುವಿನ ಆರಂಭ ನೀಡಿದರು. ಟೆಸ್ಸಿ ಗಾಂಡೆರಿಂಗರ್ ವಿರುದ್ಧ 3-1 ಅಂತರದಿಂದ ಜಯ ಸಾಧಿಸಿರುವ ಮನಿಕಾ ಬಾತ್ರಾ ಭಾರತಕ್ಕೆ 2-0 ಮುನ್ನಡೆ ಒದಗಿಸಿಕೊಟ್ಟರು.

ಮೂರನೆ ಸಿಂಗಲ್ಸ್ ಪಂದ್ಯದಲ್ಲಿ ಕೆ. ಶಮಿನಿ ಸಾರ್ಹಾ ಡಿ ನ್ಯೂಟ್ ವಿರುದ್ದ ಸೋತರು. ಆದರೆ, ರಿವರ್ಸ್ ಸಿಂಗಲ್ಸ್‌ನಲ್ಲಿ ಡೇನಿಯಲ್‌ರನ್ನು 3-0 ಅಂತರದಿಂದ ಮಣಿಸಿದ ಮನಿಕಾ ಭಾರತಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟರು.

‘‘ನಮಗೆಲ್ಲರಿಗೂ ಇದೊಂದು ಶ್ರೇಷ್ಠ ಅನುಭವ. ಕೌಲಾಲಂಪುರದಲ್ಲಿ ಮಾಡಿರುವ ಈ ಸಾಧನೆ ಸ್ಮರಣೀಯವಾಗಿದೆ’’ ಎಂದು ಮನಿಕಾ ಬಾತ್ರಾ ಹೇಳಿದರು.

‘‘ನಾನು ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಕ್ಕೆ ಸಂತೋಷವಾಗುತ್ತಿದೆ. ನಮ್ಮ ಸಾಂಘಿಕ ಪ್ರಯತ್ನ ಹಾಗೂ ಟೂರ್ನಿಯುದ್ದಕ್ಕೂ ನೀಡಿರುವ ಸ್ಥಿರ ಪ್ರದರ್ಶನ ಫಲ ನೀಡಿತು’’ ಎಂದು ವೌಮಾ ದಾಸ್ ಪ್ರತಿಕ್ರಿಯಿಸಿದರು.

ಪುರುಷರ ಟೀಮ್ ಫೈನಲ್‌ನಲ್ಲಿ ಹರ್ಮೀತ್ ದೇಸಾಯಿ ಸಾಹಸದಿಂದ ಭಾರತ ರೋಚಕ ಗೆಲುವು ಸಾಧಿಸಿತು. ಶುಕ್ರವಾರ ಪ್ರಯಾಸದ ಗೆಲುವು ದಾಖಲಿಸಿದ್ದ ಭಾರತದ ಹಿರಿಯ ಆಟಗಾರ ಅಚಂತಾ ಶರತ್ ಕಮಲ್‌ಗೆ ಬ್ರೆಝಿಲ್ ವಿರುದ್ಧದ ಫೈನಲ್ ಪಂದ್ಯಕ್ಕೆ ವಿಶ್ರಾಂತಿ ನೀಡಿತ್ತು. ಆದರೆ, ಮೊದಲ ಪಂದ್ಯದಲ್ಲಿ ಸೌಮ್ಯಜಿತ್ ಘೋಷ್ ಸೋತ ಕಾರಣ ಭಾರತ 1-2 ಹಿನ್ನಡೆ ಅನುಭವಿಸಿತ್ತು.

ರಿವರ್ಸ್ ಸಿಂಗಲ್ಸ್‌ನಲ್ಲಿ ಕಾಝೌ ಮಟ್ಸುಮೊಟೊ ವಿರುದ್ಧ 3-0 ಅಂತರದಿಂದ ಗೆಲುವು ಸಾಧಿಸಿರುವ ಘೋಷ್ ಭಾರತದ ಪದಕದ ವಿಶ್ವಾಸವನ್ನು ಜೀವಂತವಾಗಿರಿಸಿದರು.

ನಿರ್ಣಾಯಕ ಪಂದ್ಯವನ್ನು ಆಡಿದ ಹರ್ಮೀತ್ 15-13 ರಿಂದ ಗೆಲುವು ಸಾಧಿಸಿ ಭಾರತದ ಪಾಳಯದಲ್ಲಿ ಸಂತಸ ತಂದರು. ನನ್ನ ಕನಸು ನನಸಾದ ಕ್ಷಣವಿದು. 2018ರಲ್ಲಿ ನಾನು ತಂಡದಲ್ಲಿ ಉಳಿದರೆ ಮೊದಲ ಬಾರಿ ಚಾಂಪಿಯನ್‌ಶಿಪ್ ಡಿವಿಜನ್ ಪಂದ್ಯದಲ್ಲಿ ಆಡಬಹುದು ಎಂದು ಶರತ್ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X