Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫ್ರಾನ್ಸ್‌ನ ‘ಕ್ಯಾಲೈಸ್ ಜಂಗಲ್’...

ಫ್ರಾನ್ಸ್‌ನ ‘ಕ್ಯಾಲೈಸ್ ಜಂಗಲ್’ ನಿರಾಶ್ರಿತ ಶಿಬಿರದಲ್ಲಿ ಬಾಲಕರ ಮೇಲೆ ಅತ್ಯಾಚಾರ

ನೆರವು ಕಾರ್ಯಕರ್ತರ ದೂರು

ವಾರ್ತಾಭಾರತಿವಾರ್ತಾಭಾರತಿ5 March 2016 11:49 PM IST
share

ಲಂಡನ್, ಮಾ. 5: ಫ್ರಾನ್ಸ್‌ನ ಕ್ಯಾಲೈಸ್ ನಗರದಲ್ಲಿ ವಲಸಿಗರಿಗಾಗಿರುವ ಶಿಬಿರ ‘ಕ್ಯಾಲೈಸ್ ಜಂಗಲ್’ನಲ್ಲಿ ಹದಿಹರೆಯದ ಬಾಲಕರ ಮೇಲೆ ಅತ್ಯಾಚಾರ ನಡೆಸಲಾಗುತ್ತಿದೆ ಎಂದು ನೆರವು ಕಾರ್ಯಕರ್ತರು ಆರೋಪಿಸಿ ದ್ದಾರೆ. ಈ ಶಿಬಿರದಲ್ಲಿ ಮಕ್ಕಳ ರಕ್ಷಣಾ ಕಾನೂನುಗಳು ಸಾಕಷ್ಟು ಪ್ರಮಾಣದಲ್ಲಿ ಅಸ್ತಿತ್ವದಲ್ಲಿಲ್ಲ ಎಂದು ಅವರು ಬೆಟ್ಟು ಮಾಡಿದ್ದಾರೆ.

ತಮ್ಮ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಿಕೊಂಡಿರುವ 14 ಮತ್ತು 16 ವರ್ಷಗಳ ನಡುವಿನ ಏಳು ಬಾಲಕರಿಗೆ ಕಳೆದ ಆರು ತಿಂಗಳಲ್ಲಿ ತಾವು ಚಿಕಿತ್ಸೆ ನೀಡಿರುವುದಾಗಿ ಕ್ಯಾಲೈಸ್‌ನ ಹೊರವಲಯದಲ್ಲಿ ಶಿಬಿರಗಳಲ್ಲಿ ವಾಸಿಸುತ್ತಿರುವವರಿಗೆ ನೆವು ನೀಡುತ್ತಿರುವ ವೈದ್ಯಕೀಯ ಸ್ವಯಂಸೇವಕರು ‘ದ ಇಂಡಿಪೆಂಡೆಂಟ್’ಗೆ ಹೇಳಿದ್ದಾರೆ. ಅವರ ಈ ಹೇಳಿಕೆಗಳಿಗೆ ಅನುಗುಣವಾಗಿ ಅವರ ದೇಹಗಳಲ್ಲಿ ಗಾಯಗಳು ಕಂಡುಬಂದಿವೆ.

ನಾಲ್ಕು ಪ್ರಕರಣಗಳಲ್ಲಿ ಬಾಲಕರಿಗೆ ಶಸ್ತ್ರಕ್ರಿಯೆ ನಡೆಸಲಾಗಿತ್ತು. ಅವರ ಪೈಕಿ ಓರ್ವ ಮಾತ್ರ ಆಸ್ಪತ್ರೆಗೆ ದಾಖಲಾದನು. ಉಳಿದವರು, ತಮ್ಮ ಮೇಲೆ ಪ್ರತೀಕಾರದ ದಾಳಿ ನಡೆಯಬಹುದು ಎಂಬ ಹೆದರಿಕೆಯಿಂದ ಅಥವಾ ತಮ್ಮ ಮೇಲೆ ನಡೆದ ದೌರ್ಜನ್ಯ ಇತರರಿಗೆ ಗೊತ್ತಾಗಿ ಅವಮಾನವಾಗುತ್ತದೆ ಎಂಬ ಭೀತಿಯಿಂದ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದಾರೆ ಎಂದು ನೆರವು ಕಾರ್ಯಕರ್ತರು ಹೇಳಿದರು.

ಐರೋಪ್ಯ ಒಕ್ಕೂಟದ ಕಾನೂನು ಅನುಷ್ಠಾನ ಸಂಸ್ಥೆ ‘ಯುರೋಪಾಲ್’ ಕೂಡ ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಕಳವವಳ ವ್ಯಕ್ತಪಡಿಸಿದೆ. ಇಡೀ ಯುರೋಪ್ ಖಂಡದಲ್ಲಿರುವ ಪಾಲಕರು ಜೊತೆಗಿರದ ನಿರಾಶ್ರಿತ ಮಕ್ಕಳು ಲೈಂಗಿಕ ದೌರ್ಜನ್ಯದ ಭೀತಿಯನ್ನು ಎದುರಿಸುತ್ತಿದ್ದಾರೆ ಎಂದು ಅದು ಹೇಳಿದೆ.

ಹೆತ್ತವರು ಜೊತೆಗಿರದ ಸುಮಾರು 10,000 ಮಕ್ಕಳು ಯುರೋಪ್‌ನಲ್ಲಿ ನಾಪತ್ತೆಯಾಗಿದ್ದಾರೆ ಎಂದು ಯರೋಪಾಲ್‌ನ ಹಿರಿಯ ಪ್ರತಿನಿಧಿಯೋರ್ವರು ಜನವರಿಯಲ್ಲಿ ತಿಳಿಸಿದ್ದರು.

ಶಿಬಿರದಲ್ಲಿ ಮಕ್ಕಳ ರಕ್ಷಣೆ ಕುರಿತ ಕಠಿಣ ಕಾನೂನುಗಳು ಜಾರಿಯಲ್ಲಿಲ್ಲದಿರುವುದು ಇದಕ್ಕೆ ಕಾರಣ ಎಂದು ನೆರವು ಕಾರ್ಯ ಕರ್ತರು ಹೇಳುತ್ತಾರೆ. ಇದೇ ಕಾರಣವನ್ನು ಮುಂದಿಟ್ಟುಕೊಂಡು ಫ್ರಾನ್ಸ್‌ನ ಪೊಲೀಸರೂ ಈ ವಿಷಯದಲ್ಲಿ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X