Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಸ್ಪರ ಅರಿತುಕೊಂಡು ಬಾಳಿದರೆ ಮಾತ್ರ...

ಪರಸ್ಪರ ಅರಿತುಕೊಂಡು ಬಾಳಿದರೆ ಮಾತ್ರ ಸಮಾಜದಲ್ಲಿ ಶಾಂತಿ - ಆನಾಜೆ ಗಣೇಶ್ ರೈ

ವಾರ್ತಾಭಾರತಿವಾರ್ತಾಭಾರತಿ6 March 2016 4:40 PM IST
share
ಪರಸ್ಪರ ಅರಿತುಕೊಂಡು ಬಾಳಿದರೆ ಮಾತ್ರ ಸಮಾಜದಲ್ಲಿ ಶಾಂತಿ - ಆನಾಜೆ ಗಣೇಶ್ ರೈ

ಪುತ್ತೂರು: ಜಗತ್ತಿನ ಯಾವ ಧರ್ಮವೂ ಹಿಂಸೆಯನ್ನು ಕಲಿಸಿಲ್ಲ ಆದರೆ ಧರ್ಮವನ್ನು ಅನುಸರಿಸುವ ಅನುಯಾಯಿಗಳು ಮಾತ್ರ ಹಿಂಸೆಯಲ್ಲಿ ತೊಡಗಿದ್ದು ಇದು ಅರಿವಿನ ಕೊರತೆಯ ಕಾರಣದಿಂದಾಗಿದೆ. ಪ್ರತೀಯೊಬ್ಬರೂ ಪರಸ್ಪರ ಅರಿತು ತಿಳುವಳಿಕೆಯುಳ್ಳವರಾದರೆ ಸಮಾಜದಲ್ಲಿ ಶಾಂತಿಯ ವಾತಾವರಣವನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಆನಾಜೆ ಗಣೇಶ್ ರೈ ಹೇಳಿದರು.

ಅವರು ಶನಿವಾರ ರಾತ್ರಿ ನಡೆದ ಇರ್ದೆ- ಪಳ್ಳಿತ್ತಡ್ಕ 40 ಅನೇ ಉರೂಸ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಎಲ್ಲಾ ಧರ್ಮಗಳ ಮೂಲ ಸಿದ್ದಾಂತ ಒಂದೇ ಆಗಿದೆ ಆದರೆ ವಿವಿಧ ಧರ್ಮಿಯರ ನಡುವೆ ವ್ಯರ್ಥ ವಿಚಾರಕ್ಕೂ ಹಿಂಸೆ ಉಂಟಾಗುತ್ತಿದೆ ಇದರಿಂದ ಸಮಾಜಕ್ಕೆ ಎಂದೂ ಒಳಿತಾಗುವುದಿಲ್ಲ. ನಮ್ಮ ಮನಸ್ಸು ಶುದ್ದವಾಗಿರಬೇಕು . ಇತರರು ತನ್ನಂತೆ ಎಂಬ ಭಾವನೆ ನಮ್ಮಲ್ಲಿದ್ದರೆ ಮಾತ್ರ ನಾವು ಮನುಷ್ಯರಾಗಲು ಸಾಧ್ಯ ಎಂದರು. ಎಂದು ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವರದರಾಜ ಚಂದ್ರಗಿರಿ ಮಾತನಾಡಿ ನಮ್ಮಲ್ಲಿ ಅಹಂಕಾರ ಇರಬಾರದು. ನಾನು ಯಾರು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅಹಂಕಾರ ಇರುವವನು ಶ್ರೇಷ್ಟ ವ್ಯಕ್ತಿಯಾಗಲು ಸಾಧ್ಯವಿಲ್ಲ. ಎಲ್ಲಾ ಧರ್ಮಿಯರು ಪರಸ್ಪರ ಸೌಹಾರ್ಧತೆಯಿಂದ ಜೀವನ ನಡೆಸಬೇಕು. ತನ್ನ ಧರ್ಮವನ್ನು ಅರಿತುಕೊಂಡು ಇತರೆ ಧರ್ಮವನ್ನು ತಿಳಿದುಕೊಳ್ಳುವ ಮನಸ್ಸು ನಮ್ಮಲ್ಲಿರಬೇಕು. ತನ್ನ ಧರ್ಮ ಮಾತ್ರ ಶ್ರೇಷ್ಟ ಎಮಬ ಭಾವನೆಯನ್ನು ಪ್ರತೀಯೊಬ್ಬರೂ ಬಿಟ್ಟು ಬಿಡುವಂತಾಗಬೇಕು ಆಗಿದ್ದಲ್ಲಿ ಮಾತ್ರ ನಮಗೆ ಎಲ್ಲರೊಂದಿಗೂ ಸ್ನೇಹದಿಂದ ಇರಲು ಸಾಧ್ಯವಾಗುತ್ತದೆ. ಸ್ವಧರ್ಮವನ್ನು ಪಾಲನೆ ಮಾಡುವುದರ ಜೊತೆಗೆ ಅನ್ಯ ಧರ್ಮವನ್ನು, ಧರ್ಮಿಯರನ್ನು ಗೌರವದಿಂದ ಕಾಣುವ ಮನೋವೃತ್ತಿ ಬೆಳೆಸಿಕೊಳ್ಳಬೇಕು ಎಂದರು.
ಸನ್ಮಾನ
ಈ ಸಂದರ್ಭದಲ್ಲಿ ಇರ್ದೆ - ಪಳ್ಳಿತ್ತಡ್ಕ ದರ್ಗಾ ಶರೀಫ್ ಇದರ ಸ್ಥಳದಾನಿ ಆನಾಜೆ ಗಣೇಶ್ ರೈ ಅವರನ್ನು ಕೊರಿಂಗಿಲ ಜಮಾತ್ ಕಮಿಟಿ ಹಾಗೂ ಉರೂಸ್ ಕಮಿಟಿ ಪರವಾಗಿ ಸನ್ಮಾನಿಸಲಾಯಿತು.

  ಕೊರಿಂಗಿಲ ಜಮಾತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಕುಂಞಿ ಹಾಜಿ ಕೊರಿಂಗಿಲ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಫಝಲ್ ರಹೀಂ ಉದ್ಘಾಟಿಸಿದರು. ಸಯ್ಯದ್ ಹಾಶಿಂ ಬಾಅಲವಿ ತಂಙಳ್ ದುವಾ ನೆರವೇರಿಸಿದರು. ಪುತ್ತೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಎಸ್. ಬಿ ಮುಹಮ್ಮದ್ ದಾರಿಮಿ ಶುಭ ಹಾರೈಸಿದರು. ವೇದಿಕೆಯಲ್ಲಿ ಕೊರಿಂಗಿಲ ಮಸೀದಿ ಇಮಾಂ ಅಯ್ಯೂಬ್ ವಹಬಿ, ಜಿಪಂ ಸದಸ್ಯ ಎಂ ಎಸ್ ಮಹಮ್ಮದ್, ಮೈದಾನಿಮೂಲೆ ಜುಮಾ ಮಸೀದಿ ಅಧ್ಯಕ್ಷ ಯೂಸುಫ್ ಹಾಜಿ ಕ್ಯಕಾರ, ಗ್ರಾಪಂ ಸದಸ್ಯ ರಕ್ಷಣ್ ರೈ ಆನಾಜೆ, ಮಹಮ್ಮದ್ ಕುಂಞಿ ಕುಕ್ಕುವಳ್ಳಿ ಕೆಎಸ್‌ಎ, ಬೆಟ್ಟಂಪಾಡಿ ಗ್ರಾಪಂ ಸದಸ್ಯ ಮೊಯಿದು ಕುಂಞಿ ಕೋನಡ್ಕ, ಅಬ್ದುಲ್ ರಹಿಮಾನ್ ಆಝಾದ್ ಪುತ್ತೂರು, ಅಬ್ಬಾಸ್ ಉಪಸ್ಥಿತರಿದ್ದರು.
ಉರೂಸ್ ಸಮಾರೋಪ ಸಮಾರಂಭ
ತ್ವಾಹಾ ಬಾಫಕಿ ತಂಙಳ್ ಕುಂಬೋಲ್ ಇವರ ಅಧ್ಯಕ್ಷತೆಯಲ್ಲಿ ಉರೂಸ್ ಸಮಾರೋಪ ಸಮಾರಂಭ ನಡೆಯಿತು. ಶಾಕಿರ್ ದಾರಿಮಿ ಕೊಲ್ಲಂ ರವರು ಅಲ್ಲಾಹು ಸ್ನೇಹಿಚ್ಚ ಅಡಿಮ ಎಂಬ ವಿಷಯದಲ್ಲಿ ಮುಖ್ಯ ಧಾರ್ಮಿಕ ಪ್ರವಚನ ನೀಡಿದರು. ಸಯ್ಯದ್ ಮಹಮ್ಮದ್ ಸವಾದ್ ತಂಙಳ್ ಕೋಝಿಕ್ಕೋಡು, ಕೆ. ಎಂ ಯೂಸುಫ್ ಹಾಜಿ ಕೊರಿಂಗಿಲ, ಟಿ. ಎ ರಹಿಮಾನ್ ಶಹನಾ ಟಿಂಬರ್, ಉರೂಸ್ ಕಮಿಟಿ ಅಧ್ಯಕ್ಷ ಅಶ್ರಫ್ ಕುಕ್ಕುಪುಣಿ , ಕೊರಿಂಗಿಲ ಜಮಾತ್ ಕಾರ್ಯದರ್ಶಿ ಶಾಹುಲ್ ಹಮೀದ್ ಕೊರಿಂಗಿಲ ಉಪಸ್ಥಿತರಿದ್ದರು.
ಸಮರೋಪದ ಬಳಿಕ ಅನ್ನದಾನ ನಡೆಯಿತು. ಉರೂಸ್ ಪ್ರಯುಕ್ತ 7 ದಿನಗಳ ಕಾಲ ಸಾವಿರಾರು ಮಂದಿ ಭಕ್ತರು ಬೆಲ್ಲದ ಗಂಜಿ ಸೀರಣಿ ಸ್ವೀಕರಿಸಿದರು.
ಅಬ್ದುಲ್ಲ ಮೌಲವಿ ಬೇಂಗತ್ತಡ್ಕ ಸ್ವಾಗತಿಸಿ, ಆಸಿಫ್ ತಂಬುತ್ತಡ್ಕ ವಂದಿಸಿದರು. ಅಶ್ರಫ್ ಮುಸ್ಲಿಯಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X