Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುತ್ರನ ಅಘೋಷಿತ ಆಸ್ತಿಯನ್ನು ಸರಕಾರಕ್ಕೆ...

ಪುತ್ರನ ಅಘೋಷಿತ ಆಸ್ತಿಯನ್ನು ಸರಕಾರಕ್ಕೆ 1 ರೂ.ಗೆ ನೀಡುವೆ

ಚಿದಂಬರಂ ಸವಾಲು

ವಾರ್ತಾಭಾರತಿವಾರ್ತಾಭಾರತಿ6 March 2016 11:57 PM IST
share
ಪುತ್ರನ ಅಘೋಷಿತ ಆಸ್ತಿಯನ್ನು ಸರಕಾರಕ್ಕೆ 1 ರೂ.ಗೆ ನೀಡುವೆ

ಹೊಸದಿಲ್ಲಿ,ಮಾ.6: ತನ್ನ ಪುತ್ರ ಕಾರ್ತಿ ಚಿದಂಬರಂ ಅಘೋಷಿತ ಸಂಪತ್ತನ್ನು ಹೊಂದಿದ್ದಾರೆಂಬ ಆರೋಪಗಳು ಅನಾಗರಿಕ ಹಾಗೂ ವಿವೇಚನಾ ರಹಿತವಾದುದೆಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ರವಿವಾರ ಆಪಾದಿಸಿದ್ದಾರೆ. ಕಾರ್ತಿಯು ಆದಾಯ ತೆರಿಗೆ ಇಲಾಖೆಯ ಕಾನೂನು ಹಾಗೂ ನಿಯಮ ಗಳಿಗೆ ಸಂಪೂರ್ಣವಾಗಿ ಬದ್ಧ ವಾಗಿರುವ ಸಕ್ರಮ ಉದ್ಯಮ ವೊಂದನ್ನು ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಕಾರ್ತಿ ನನ್ನ ಮಗನೆಂಬ ಏಕೈಕ ಕಾರಣಕ್ಕಾಗಿ, ಆತನನ್ನು ಗುರಿಯಿಡಲಾಗುತ್ತಿದೆಯಾದರೂ, ಅವರ ನಿಜವಾದ ಲಕ್ಷ ನಾನಾಗಿದ್ದೇನೆ ಎಂದು ಚಿದಂಬರಂ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. ಆದರೆ ಅಂತಿಮವಾಗಿ ಸತ್ಯವು ಗೆಲ್ಲಲಿದೆಯೆಂದು ಅವರು ಹೇಳಿದ್ದರೆ. ಒಂದು ವೇಳೆ ತನ್ನ ಪುತ್ರ ಯಾವುದೇ ಅಘೋಷಿತ ಆಸ್ತಿ ಹೊಂದಿದ್ದಲ್ಲಿ, ಅದನ್ನು ಕೇವಲ 1 ರೂ. ಶುಲ್ಕಕ್ಕೆ ಸರಕಾರಕ್ಕೆ ಹಸ್ತಾಂತರಿಸಲು ಆತ ಸಿದ್ಧನಿರುವುದಾಗಿ ಚಿದಂಬರಂ ಸವಾಲೊಡ್ಡಿದ್ದಾರೆ.

‘‘ಒಂದು ವೇಳೆ ಕಾರ್ತಿ ಅಘೋಷಿತ ಸಂಪತ್ತನ್ನು ಹೊಂದಿದ್ದಾರೆಂದು ಸರಕಾರ ಭಾವಿಸಿದ್ದರೆ, ಅಂತಹ ಅಘೋಷಿತ ಆಸ್ತಿಗಳ ಪಟ್ಟಿಯನ್ನು ತಯಾರಿಸುವಂತೆ ನಾನು ಸರಕಾರವನ್ನು ಕೇಳಲಿದ್ದೇನೆ. ಈ ಆಸ್ತಿಗಳನ್ನು ಸರಕಾರಕ್ಕೆ ವರ್ಗಾಯಿಸಲು ಅಗತ್ಯ ವಿರುವಂತಹ ಯಾವುದೇ ದಾಖಲೆ ಪತ್ರವನ್ನು ಕಾರ್ತಿ ಸ್ವಯಂ ಪ್ರೇರಿತವಾಗಿ, ಕೇವಲ 1 ರೂ. ಸಾಂಕೇತಿಕ ಮೊತ್ತಕ್ಕೆ ಅದನ್ನು ಸರಕಾರಕ್ಕೆ ವರ್ಗಾಯಿಸುವರು’’ ಎಂದು ಚಿದಂಬರಂ ಹೇಳಿದ್ದಾರೆ. ಆ ಆಘೋಷಿತ ಅಸ್ತಿಯ ಒಡೆತನ ಸರಕಾರಕ್ಕೆ ದೊರೆಯಲಿ ಎಂದವರು ಸವಾಲೊಡ್ಡಿದರು.

 ತನ್ನ ಪುತ್ರನು ಪಿತ್ರಾರ್ಜಿತ ಆಸ್ತಿಯ ಜೊತೆಗೆ ಕಾನೂನುಬದ್ಧವಾದ ಉದ್ಯಮವನ್ನು ಸಹ ನಡೆಸುತ್ತಿದ್ದಾನೆ. ತನ್ನ ಪುತ್ರನು ಹಲವು ವರ್ಷಗಳಿಂದ ಆದಾಯ ತೆರಿಗೆ ಪಾವತಿದಾರನಾಗಿದ್ದು, ನಿಯಮಿತವಾಗಿ ತನ್ನ ಆದಾಯ ತೆರಿಗೆಯ ವಿವರಗಳನ್ನು ಸಲ್ಲಿಸುತ್ತಿದ್ದಾನೆಂದು ಚಿದಂಬರಂ ತಿಳಿಸಿದರು.

 ಈ ಆರೋಪಗಳ ಹಿಂದೆ ರಾಜಕೀಯ ಉದ್ದೇಶವಿದೆಯೆಂಬುದು ತನಗೆ ತಿಳಿದಿದೆ. ಇಂತಹ ಸುಳ್ಳು ಆಪಾದನೆಗಳನ್ನು ಮಾಡು ತ್ತಿರುವವರ ಬಗ್ಗೆ ನನಗೆ ಕನಿಕರವಲ್ಲದೆ ಮತ್ತೇನೂ ಇಲ್ಲವೆಂದು ಅವರು ಹೇಳಿದ್ದಾರೆ. ಅಪಾರ ಪ್ರಮಾಣದ ಅಘೋಷಿತ ಸಂಪತ್ತನ್ನು ಹೊಂದಿರುವ ಕಾರ್ತಿ ಚಿದಂಬರಂ ವಿರುದ್ಧ ತನಿಖೆ ನಡೆಸಬೇಕೆಂದು ಎಡಿಎಂಕೆ ಹಾಗೂ ಬಿಜೆಡಿ ಆಗ್ರಹಿಸಿ, ಸದನದಲ್ಲಿ ಗದ್ದಲ ವೆಬ್ಬಿಸಿದ್ದರಿಂದ ಸದನದ ಕಲಾಪಗಳಿಗೆ ಅಡ್ಡಿಯುಂಟಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X