Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ವಿಮಾನಕ್ಕೆ ಲೇಸರ್ ‘ಡೇಂಜರ್’

ಕೇರಳ: ವಿಮಾನಕ್ಕೆ ಲೇಸರ್ ‘ಡೇಂಜರ್’

ಉನ್ನತಮಟ್ಟದ ತನಿಖೆ ಸಂಭವ

ವಾರ್ತಾಭಾರತಿವಾರ್ತಾಭಾರತಿ6 March 2016 11:59 PM IST
share
ಕೇರಳ: ವಿಮಾನಕ್ಕೆ ಲೇಸರ್ ‘ಡೇಂಜರ್’

ಹೊಸದಿಲ್ಲಿ,ಮಾ.6: ಮೂರು ದಿನಗಳ ಹಿಂದೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದೊಳಗೆ ಲೇಸರ್‌ಕಿರಣವನ್ನು ಹಾಯಿಸಿದ ಘಟನೆಯ ಕುರಿತು ಕೇರಳ ಪೊಲೀಸರು ನಡೆಸುತ್ತಿರುವ ತನಿಖೆಯು ಯಾವುದೇ ಪ್ರಗತಿಯನ್ನು ಸಾಧಿಸದ ಹಿನ್ನೆಲೆಯಲ್ಲಿ ಅದನ್ನು ಕೇಂದ್ರೀಯ ತನಿಖಾ ಸಂಸ್ಥೆಯೊಂದಕ್ಕೆ ಹಸ್ತಾಂತರಿಸುವ ಸಾಧ್ಯತೆಗಳು ದಟ್ಟವಾಗಿವೆ. ನಾಗರಿಕ ವಾಯುಯಾನ ಸಂಸ್ಥೆಯ ಮಹಾನಿರ್ದೇಶಕರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ನಾಗರಿಕ ವಾಯುಯಾನ ಭದ್ರತಾದಳಕ್ಕೆ ಸೂಚನೆ ನೀಡಿದ್ದಾರೆ.

  ವಿಮಾನದೊಳಗೆ ಲೇಸರ್ ಕಿರಣವನ್ನು ಹಾಯಿಸಿದ ಘಟನೆ ವರದಿಯಾಗಿರುವುದು ದೇಶದಲ್ಲೇ ಇದು ಮೊದಲ ಸಲವಾಗಿದೆ. ಈ ಬಗ್ಗೆ ಗುರುವಾರವೇ ದೂರು ಸಲ್ಲಿಸ ಲಾಗಿತ್ತಾದರೂ, ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಬಳಿಕವಷ್ಟೇ ಘಟನೆಯು ಬೆಳಕಿಗೆ ಬಂದಿತ್ತು.

 ಕಳೆದ ತಿಂಗಳು ಕಾಕ್‌ಪಿಟ್‌ನೊಳಗೆ ಲೇಸರ್ ಕಿರಣವನ್ನು ಹಾಯಿಸಲಾಯಿತೆಂಬ ಕಾರಣಕ್ಕಾಗಿ ಲಂಡನ್‌ನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ವಿಮಾನವನ್ನು, ಹಿತ್ರೋ ವಿಮಾನನಿಲ್ದಾಣಕ್ಕೆ ವಾಪಸ್ ಕರೆಸಿಕೊಳ್ಳಲಾಗಿತ್ತು. ಲೇಸರ್ ಕಿರಣವನ್ನು ಹಾಯಿಸುವುದರಿಂದ ಕಾಕ್‌ಪಿಟ್ ಸಿಬ್ಬಂದಿಗೆ ಆರೋಗ್ಯದ ಸಮಸ್ಯೆಯುಂಟಾಗುವ ಸಾಧ್ಯತೆಯಿದೆ. ಲೇಸರ್ ಕಿರಣಗಳ ನೆರವಿನಿಂದ ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ವಿಮಾನದ ಮೇಲೆ ಗುರಿಯಿಡುವ ಅಪಾಯವೂ ಇದೆಯೆಂದು ವಿಮಾನಯಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ವಿಮಾನಮಾರ್ಗಗಳ ಸಮೀಪ ಲೇಸರ್‌ಕಿರಣಗಳನ್ನು ಪ್ರದರ್ಶಿಸುವುದನ್ನು ಸಾಮಾನ್ಯವಾಗಿ ನಿಷೇಧಿಸಲಾಗಿದೆ.

ಪ್ರಾಥಮಿಕ ಹಂತದ ತನಿಖೆಯ ಪ್ರಕಾರ 3 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಮೇಲೆ ಕಲ್ಲಿಕೋಟೆ ವಿಮಾನನಿಲ್ದಾಣದಿಂದ 15 ಕಿ.ಮೀ. ದೂರದ ಕೇರಳ ಪರಪ್ಪನಂಗಾಡಿ ಹಾಗೂ ಬೇಪೂರ್‌ಗಳ ನಡುವಿನ ಕರಾವಳಿ ಪ್ರದೇಶದಲ್ಲಿ ಲೇಸರ್‌ಕಿರಣವನ್ನು ಹಾಯಿಸಲಾಗಿತ್ತು. ಇದು ಕೇವಲ ತಮಾಷೆಯ ಕೃತ್ಯವೇ ಅಥವಾ ವಿಮಾನಕ್ಕೆ ಹಾನಿಮಾಡುವ ಉದ್ದೇಶವಿತ್ತೇ ಎಂಬ ಬಗ್ಗೆ ತಮಗೆ ಇನ್ನೂ ಖಚಿತ ಮಾಹಿತಿಯಿಲ್ಲವೆಂದು ಉತ್ತರ ಕೇರಳದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಂತಹ ಘಟನೆಗಳನ್ನು ತಡೆಗಟ್ಟಲು ಈ ಪ್ರದೇಶದಲ್ಲಿ ಪೊಲೀಸರು ಜಾಗೃತಿ ಅಭಿಯಾನ ಕೂಡಾ ಆರಂಭಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X