Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈಸ್ಕೂಲ್ ಪರೀಕ್ಷೆ ಬರೆಯದೆ ಸಪ್ತಪದಿ...

ಹೈಸ್ಕೂಲ್ ಪರೀಕ್ಷೆ ಬರೆಯದೆ ಸಪ್ತಪದಿ ತುಳಿಯಲು ನಿರಾಕರಿಸಿದ ವಧು!

ವಾರ್ತಾಭಾರತಿವಾರ್ತಾಭಾರತಿ7 March 2016 11:50 AM IST
share
ಹೈಸ್ಕೂಲ್ ಪರೀಕ್ಷೆ ಬರೆಯದೆ ಸಪ್ತಪದಿ ತುಳಿಯಲು ನಿರಾಕರಿಸಿದ ವಧು!

ಮಹೋಬಾ, ಮಾರ್ಚ್.7: ಉತ್ತರಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ವಧುವೊಬ್ಬಳು ಶಿಕ್ಷಣಕ್ಕೆ ತನ್ನನ್ನು ಸಮರ್ಪಿಸಿಕೊಂಡ ಅನನ್ಯ ಉದಾಹರಣೆ ವರದಿಯಾಗಿದೆ. ಇಲ್ಲಿನ ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳು ತಾನು ಪರೀಕ್ಷೆಯನ್ನು ಬರೆಯದೆ ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ್ದು ಕೊನೆಗೆ ಅವಳು ತನ್ನ ಹಟವನ್ನು ಸಾಧಿಸಿದ್ದಾಳೆ. ಮದುವೆಯ ಕನಸು ಕಾಣುವ ಯುವತಿಯರಿಗಿಂತ ಭಿನ್ನವಾಗಿ ಶಿಕ್ಷಣಕ್ಕೆ ಸಮರ್ಪಣಾ ಭಾವನೆಯನ್ನು ಅವಳು ವ್ಯಕ್ತಪಡಿಸಿದ್ದಾಳೆ. ಕರ್ಬಾಯಿ ವಿಕಾಸ್‌ಖಂಡ್‌ನ ಶ್ರೀನಗರದ ರಾಜೂ ಸೇನರ ಹದಿನೆಂಟು ವರ್ಷ ಪ್ರಾಯದ ಪುತ್ರಿ ಕೋಮಲ್‌ಳ ವಿವಾಹವನ್ನು ರಾಜೀವ್ ಸೇನ ಎಂಬಾತನೊಂದಿಗೆ ನಡೆಸಲು ನಿರ್ಧರಿಸಲಾಗಿತ್ತು,. ಕಳೆದ ಮಾರ್ಚ್ ನಾಲ್ಕರಂದು ಮದುವೆ ದಿಬ್ಬಣವೂ ಬಂದಿತ್ತು.

ರಾತ್ರೆಯಲ್ಲಿ ಮದುವೆಯ ವಿಧಿವಿಧಾನಗಳೆಲ್ಲವೂ ನಡೆದು ಮರುದಿನ ಬೆಳಗ್ಗೆ ವರ ಮತ್ತು ವಧುವಿನ ಸಪ್ತಪದಿ ತುಳಿಯಲು ಸಿದ್ಧತೆ ನಡೆಸುವಾಗ ಕೋಮಲ್ ತನ್ನ ಹೈಸ್ಕೂಲ್ ಪರೀಕ್ಷೆಯ ಕೊನೆಯ ಪ್ರಶ್ನೆ ಪತ್ರಿಕೆಗೆ ಬರೆಯಲು ಸಿದ್ಧತೆ ನಡೆಸುತ್ತಿದ್ದಳು. ಪರೀಕ್ಷೆ ಬರೆಯದೆ ತಾನು ಸಪ್ತಪದಿ ತುಳಿಯಲಾರೆ ಎಂದು ಹಟ ತೊಟ್ಟದ್ದಲ್ಲದೆ ಯಾರು ಎಷ್ಟೇ ಸಮಾಧಾನಿಸಿದರೂ ಅವಳುಕೇಳಲು ಸಿದ್ಧಳಿರಲಿಲ್ಲ. ಅಂತಿಮವಾಗಿ ಅವಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತರಲಾಯಿತು. ಪರೀಕ್ಷೆ ಬರೆದ ನಂತರ ಅವಳು ವರನೊಂದಿಗೆ ಸಪ್ತಪದಿಯನ್ನು ತುಳಿದಳು. ಭಾರೀ ಹಿಂದುಳಿದಿರುವ ಬುಂದೇಲ್‌ಖಂಡದ ಸುಮಾರು 25ಸಾವಿರ ಜನಸಂಖ್ಯೆಯ ಶ್ರೀನಗರ ಗ್ರಾಮದಲ್ಲಿ ನಡೆದ ಈ ಶಿಕ್ಷಣಕ್ಕೆ ಅದಮ್ಯ ಪ್ರೀತಿಯ ಘಟನೆ ಕಣ್ಣು ತೆರೆಸುವಂತಿದೆ. ಕೋಮಲ್‌ಳ ಪತಿ ರಾಜೀವ್ ಪತ್ನಿಯ ಕಲಿಕೆಯ ಪ್ರೇಮವನ್ನು ಶ್ಲಾಘಿಸಿದ್ದಲ್ಲದೆ ಶಿಕ್ಷಣ ಮುಂದುವರಿಸಲು ನೆರವಾಗುವುದಾಗಿ ತಿಳಿಸಿದ್ದಾನೆ.ನವೋದಯ ಮಹಾ ವಿದ್ಯಾಲಯದ ಪ್ರಾಚಾರ್ಯ ವಿಶ್ವನಾಥ್ ಸಿಂಗ್‌ರು ಈ ಕುರಿತು ಪ್ರತಿಕ್ರಿಯಿಸುತ್ತಾ ಶೆ. 56ರಷ್ಟು ಮಾತ್ರ ಸಾಕ್ಷರತೆ ಇರುವ ಸಣ್ಣ ಗ್ರಾಮದ ಈ ಘಟನೆ ದೊಡ್ಡ ಸಾಮಾಜಿಕ ಬದಲಾವಣೆಗೆ ಕಾರಣವಾಗಬಹುದು ಮತ್ತು ಜನರಲ್ಲಿ ಶಿಕ್ಷಣದ ಕುರಿತು ಅಭಿರುಚಿಯನ್ನು ಹೆಚ್ಚಿಸಬಹುದೆಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X