Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ ವಿಧಾನಸಭಾ ಚುನಾವಣೆ ಟಿಕೆಟ್:...

ಮಂಜೇಶ್ವರ ವಿಧಾನಸಭಾ ಚುನಾವಣೆ ಟಿಕೆಟ್: ಸ್ಥಳೀಯರಿಗೆ ಆದ್ಯತೆ

ವಾರ್ತಾಭಾರತಿವಾರ್ತಾಭಾರತಿ7 March 2016 5:04 PM IST
share

ಕಾಸರಗೋಡು, ಮಾ.7: ವಿಧಾನಸಭಾ ಚುನಾವಣೆಗೆ ಮಂಜೇಶ್ವರದಿಂದ ಸ್ಥಳೀಯ ಮುಖಂಡರನ್ನು ಕಣಕ್ಕಿಳಿಸುವ ಬಗ್ಗೆ ಸಿಪಿಎಂ ಮತ್ತು ಬಿಜೆಪಿ ಈಗಾಗಲೇ ಗಂಭೀರ ಚಿಂತನೆ ನಡೆಸಿದ್ದು, ಸ್ಥಳೀಯ ಮುಖಂಡರ ಹೆಸರು ಸಂಭಾವ್ಯರ ಪಟ್ಟಿಯಲ್ಲಿದೆ.

ಕಳೆದ ಹಲವು ಚುನಾವಣೆಯಲ್ಲಿ ಕ್ಷೇತ್ರದ ಹೊರಗಿನ ಅಭ್ಯರ್ಥಿಗಳನ್ನೇ ಪ್ರಮುಖ ಪಕ್ಷಗಳು ಕಣಕ್ಕಿಳಿಸಿದ್ದವು. ಐಕ್ಯರಂಗವು ಈಗಾಗಲೇ ಹಾಲಿ ಶಾಸಕ ಪಿ.ಬಿ. ಅಬ್ದುರ್ರಝಾಕ್‌ರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇವರು ಕಾಸರಗೋಡು ವಿಧಾನಸಭಾ ಕ್ಷೇತ್ರದವರು. 30 ವರ್ಷಗಳಿಂದ ಕ್ಷೇತ್ರದ ಹೊರಗಿನ ಅಭ್ಯರ್ಥಿಗಳೇ ಇಲ್ಲಿಂದ ಶಾಸಕರಾಗಿದ್ದಾರೆ. 20 ವರ್ಷಗಳ ಕಾಲ ಚೆರ್ಕಳಂ ಅಬ್ದುಲ್ಲಾ, ಬಳಿಕ ಐದು ವರ್ಷಗಳ ಕಾಲ ಸಿ. ಎಚ್.ಕುಂಞಂಬು, ಐದು ವರ್ಷಗಳಿಂದ ಪಿ.ಬಿ. ಅಬ್ದುರ್ರಝಾಕ್ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

 ಕಳೆದ ಬಾರಿ ಐಕ್ಯರಂಗ, ಎಡರಂಗ ಮತ್ತು ಬಿಜೆಪಿ ಕೂಡ ಹೊರಗಿನ ಅಭ್ಯರ್ಥಿಯನ್ನೇ ಕಣಕ್ಕಿಳಿಸಿತ್ತು. ಆದರೆ ಈ ಬಾರಿ ಸಿಪಿಎಂ ಮತ್ತು ಬಿಜೆಪಿ ಸ್ಥಳಿಯರನ್ನೇ ಕಣಕ್ಕಿಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದೆ. ಸಿಪಿಎಂನಿಂದ ಶಂಕರ ರೈ ಮಾಸ್ಟರ್‌ರನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆದಿದೆ. ಪುತ್ತಿಗೆ ನಿವಾಸಿಯಾಗಿರುವ ಇವರು ಕಳೆದ ಬಾರಿ ಜಿಪಂ ಸದಸ್ಯರಾಗಿದ್ದರು. ಇದಲ್ಲದೆ ಕೆ.ಆರ್.ಜಯಾನಂದರ ಹೆಸರು ಕೂಡಾ ಕೇಳಿಬರುತ್ತಿದೆ. ಮಾಜಿ ಶಾಸಕ ಸಿ.ಎಚ್.ಕುಂಞಂಬು ಮಂಜೇಶ್ವರದಿಂದ ಸ್ಪರ್ಧಿಸಲು ಹಿಂದೇಟು ಹಾಕಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರ ಹೆಸರು ಕೇಳಿಬರುತ್ತಿದೆ.

ಬಿಜೆಪಿಯಿಂದ ಜಿಪಂ ಸದಸ್ಯ ಕೆ.ಶ್ರೀಕಾಂತ್ ಮತ್ತು ಮಾಜಿ ಜಿಲ್ಲಾಧ್ಯಕ್ಷ ಸುರೇಶ್‌ಕುಮಾರ್ ಶೆಟ್ಟಿ ಹೆಸರು ಸಂಭಾವ್ಯ ಪಟ್ಟಿಯಲ್ಲಿದೆ. ಹೊರ ಜಿಲ್ಲೆಯವರಾದ ಕಳೆದ ಬಾರಿ ಸೋತ ಕೆ. ಸುರೇಂದ್ರನ್‌ರ ಹೆಸರು ಅಂತಿಮಗೊಳಿಸಿತ್ತು. ಆದರೆ ಸ್ಥಳೀಯ ಒಂದು ಬಣದ ವಿರೋಧದ ಹಿನ್ನೆಲೆಯಲ್ಲಿ ಸ್ಥಳೀಯ ನಾಯಕರನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ. ಕನ್ನಡಿಗರು ಸೇರಿದಂತೆ ಸ್ಥಳೀಯರ ಮತ ಪಡೆಯಲು ಸ್ಥಳೀಯರೇ ಅಭ್ಯರ್ಥಿಯಾಗಬೇಕೆಂಬ ಬೇಡಿಕೆ ಪಕ್ಷದಿಂದ ಕೇಳಿಬರುತ್ತಿದೆ. ಇದಲ್ಲದೆ ನ್ಯಾಯವಾದಿ ಬಾಲಕೃಷ್ಣ ಶೆಟ್ಟಿಯವರ ಹೆಸರು ಕೂಡಾ ಕೇಳಿಬರುತ್ತಿದೆ. 20 ವರ್ಷಗಳ ಬಳಿಕ 2006ರಲ್ಲಿ ಸಿ.ಎಚ್. ಕುಂಞಂಬುರವರ ಮೂಲಕ ಸಿಪಿಎಂ ಮಂಜೇಶ್ವರ ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. 2011ರಲ್ಲಿ ಮತ್ತೆ ಐಕ್ಯರಂಗವು ಈ ಕ್ಷೇತ್ರವನ್ನು ಬಗಲಿಗೆ ಹಾಕಿಕೊಂಡಿತ್ತು. ಬಿಜೆಪಿ ಎರಡು ಬಾರಿಯೂ ಎರಡನೇ ಸ್ಥಾನ ಪಡೆದಿತ್ತು. ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಮಂಜೇಶ್ವರದಲ್ಲಿ ಯಾರೆಲ್ಲ ಅಭ್ಯರ್ಥಿಯಾಗಲಿದ್ದಾರೆ ಎಂಬುದು ಕುತೂಹಲವಾಗಿದೆ.

 ಉದುಮದಿಂದ ಮತ್ತೆ ಕೆ. ಕುಂಞಿರಾಮನ್: ಉದುಮ ಕ್ಷೇತ್ರದಿಂದ ಸಿಪಿಎಂ ಹಾಲಿ ಶಾಸಕ ಕೆ.ಕುಂಞಿರಾಮನ್‌ರನ್ನು ಕಣಕ್ಕಿಸಲಿದೆ. ಕಾಂಗ್ರೆಸ್‌ನಿಂದ ಕಣ್ಣೂರು ಮಾಜಿ ಸಂಸದ ಕೆ.ಸುಧಾಕರನ್ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದು, ಇವರ ಜೊತೆಗೆ ಸತೀಶನ್ ಪಾಚೇನಿ, ಟಿ. ಸಿದ್ದೀಕ್ ಹಾಗೂ ಸ್ಥಳೀಯ ಮುಖಂಡರ ಹೆಸರು ಕೇಳಿಬರುತ್ತಿದೆ.

   ತ್ರಿಕ್ಕರಿಪುರದಿಂದ ಸಿಪಿಎಂನ ಎಂ.ವಿ. ಬಾಲಕೃಷ್ಣನ್ ಅಥವಾ ಎಂ. ರಾಜಗೋಪಾಲ್‌ರನ್ನು ಕಣಕ್ಕಿಸಲು ಮತ್ತು ಹಾಲಿ ಶಾಸಕ ಕೆ. ಕುಂಞಿರಾಮನ್‌ರಿಗೆ ಈ ಬಾರಿ ಟಿಕೆಟ್ ನೀಡದಿರಲು ಪಕ್ಷ ತೀರ್ಮಾನಿಸಿದೆ ಕಾಂಗ್ರೆಸ್ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕಾಸರಗೋಡು ಕ್ಷೇತ್ರವನ್ನು ಮಿತ್ರ ಪಕ್ಷವಾದ ಐಎನ್‌ಎಲ್ಗೆ ನೀಡಲಾಗಿದ್ದು, ಐಎನ್‌ಎಲ್ ಈ ಬಾರಿ ಅಭ್ಯರ್ಥಿ ಕಣಕ್ಕಿಲಿಸದಿದ್ದಲ್ಲಿ ಸಿಪಿಎಂ ಸ್ಪರ್ಧಿಸಲಿದೆ. ಐಕ್ಯರಂಗ ಪಿ.ಬಿ ಅಬ್ದುರ್ರಝಾಕ್‌ರನ್ನು ಕಣಕ್ಕಿಳಿಸಿದ್ದು, ಬಿಜೆಪಿಯಿಂದ ಪ್ರಮಿಳಾ ಸಿ. ನಾಯಕ್‌ರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X