Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಕೊರಿಯದ ವಿರುದ್ಧ ದ.ಕೊರಿಯ ಹೊಸ...

ಉತ್ತರ ಕೊರಿಯದ ವಿರುದ್ಧ ದ.ಕೊರಿಯ ಹೊಸ ದಿಗ್ಬಂಧನ

ವಾರ್ತಾಭಾರತಿವಾರ್ತಾಭಾರತಿ8 March 2016 11:13 PM IST
share

ಸಿಯೋಲ್ (ದಕ್ಷಿಣ ಕೊರಿಯ), ಮಾ. 8: ಉತ್ತರ ಕೊರಿಯದ ವಿರುದ್ಧ ದಕ್ಷಿಣ ಕೊರಿಯ ಮಂಗಳವಾರ ಹೊಸದಾಗಿ ಏಕಪಕ್ಷೀಯ ದಿಗ್ಬಂಧನವನ್ನು ವಿಧಿಸಿದೆ. ವಿದೇಶಗಳಲ್ಲಿರುವ ಉತ್ತರ ಕೊರಿಯದ ರೆಸ್ಟೋರೆಂಟ್‌ಗಳನ್ನು ಬಹಿಷ್ಕರಿಸುವಂತೆ ತನ್ನ ಪ್ರಜೆಗಳಿಗೆ ಕರೆ ನೀಡಿರುವುದು ದಕ್ಷಿಣ ಕೊರಿಯದ ದಿಗ್ಬಂಧನದಲ್ಲಿ ಒಳಗೊಂಡಿದೆ.
ಉತ್ತರ ಕೊರಿಯದ ಹಲವಾರು ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ದಕ್ಷಿಣ ಕೊರಿಯ ಹೊಸದಾಗಿ ಸಿದ್ಧಪಡಿಸಿದ ಕಪ್ಪು ಪಟ್ಟಿಯಲ್ಲಿ ಸೇರಿಸಿದೆ. ಅದೇ ರೀತಿ, ಈ ಹಿಂದೆ ಉತ್ತರ ಕೊರಿಯದ ಬಂದರುಗಳಲ್ಲಿ ನೆಲೆಸಿದ್ದ ಹಡಗುಗಳು ದಕ್ಷಿಣ ಕೊರಿಯದ ಜಲಪ್ರದೇಶವನ್ನು ಪ್ರವೇಶಿಸುವುದರ ಮೇಲೆ ನಿರ್ಬಂಧ ವಿಧಿಸಲಾಗಿದೆ.
ಕಳೆದ ವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವಿಧಿಸಿದ ಕಠಿಣ ದಿಗ್ಬಂಧನದ ಬೆನ್ನಿಗೇ ದಕ್ಷಿಣ ಕೊರಿಯದ ನಿರ್ಬಂಧ ಹೊರಬಿದ್ದಿದೆ. ಉತ್ತರ ಮತ್ತು ದಕ್ಷಿಣ ಕೊರಿಯಗಳ ನಡುವೆ ಆರ್ಥಿಕ ಸಹಕಾರದ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಈ ದಿಗ್ಬಂಧನವು ಉತ್ತರ ಕೊರಿಯದ ಮೇಲೆ ಪರಿಣಾಮವನ್ನೇನೂ ಬೀರದಿದ್ದರೂ, ಉತ್ತರ ಕೊರಿಯ ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸುವುದು ಎಂದು ನಿರೀಕ್ಷಿಸಲಾಗಿದೆ.
ಉತ್ತರ ಕೊರಿಯದ ಭೂಪ್ರದೇಶದ ಒಳಗೆ ದಕ್ಷಿಣ ಮತ್ತು ಉತ್ತರ ಕೊರಿಯಗಳು ಜಂಟಿಯಾಗಿ ನಡೆಸುತ್ತಿದ್ದ ಕೇಸಾಂಗ್ ಕೈಗಾರಿಕಾ ಪ್ರದೇಶದ ಚಟುವಟಿಕೆಗಳನ್ನು ನಿಲ್ಲಿಸುವ ಅಭೂತಪೂರ್ವ ಕ್ರಮವೊಂದನ್ನು ದಕ್ಷಿಣ ಕೊರಿಯ ಕಳೆದ ತಿಂಗಳು ತೆಗೆದುಕೊಂಡಿರುವುದನ್ನು ಸ್ಮರಿಸಬಹುದಾಗಿದೆ.
ಉತ್ತರ ಕೊರಿಯ ಜನವರಿ ತಿಂಗಳಲ್ಲಿ ನಡೆಸಿದ ಪರಮಾಣು ಪರೀಕ್ಷೆ ಹಾಗೂ ಬಳಿಕ ನಡೆಸಿದ ಕ್ಷಿಪಣಿ ಪರೀಕ್ಷೆಯ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯ ಈ ಕ್ರಮಗಳನ್ನು ತೆಗೆದುಕೊಂಡಿದೆ.

ಉನ್ನತ ಅಧಿಕಾರಿಗಳ ಸ್ಮಾರ್ಟ್ ಫೋನ್‌ಗಳಿಗೆ ಕನ್ನ

ದಕ್ಷಿಣ ಕೊರಿಯದ ಹತ್ತಾರು ಉನ್ನತ ಸರಕಾರಿ ಅಧಿಕಾರಿಗಳ ಸ್ಮಾರ್ಟ್‌ಫೋನ್‌ಗಳಿಗೆ ಉತ್ತರ ಕೊರಿಯ ಕನ್ನ ಹಾಕಿದೆ ಎಂದು ದಕ್ಷಿಣ ಕೊರಿಯದ ಗುಪ್ತಚರ ಸಂಸ್ಥೆ ಮಂಗಳವಾರ ಆರೋಪಿಸಿದೆ. ಈ ಅಧಿಕಾರಿಗಳ ಫೋನ್‌ಗಳಲ್ಲಿದ್ದ ಅಕ್ಷರ ಮತ್ತು ಧ್ವನಿ ಸಂದೇಶಗಳು ಮತ್ತು ಫೋನ್ ಕರೆ ವಿವರಗಳನ್ನು ಕದಿಯಲಾಗಿದೆ ಎಂದು ಅದು ಹೇಳಿದೆ.
ಫೆಬ್ರವರಿ ಕೊನೆಯ ಭಾಗ ಮತ್ತು ಮಾರ್ಚ್ ತಿಂಗಳ ಮೊದಲ ಭಾಗದ ನಡುವಿನ ಅವಧಿಯಲ್ಲಿ ಸೈಬರ್‌ದಾಳಿಗಳನ್ನು ನಡೆಸಲಾಗಿದೆ ಎಂದು ರಾಷ್ಟ್ರೀಯ ಗುಪ್ತಚರ ಸೇವೆ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಅದೂ ಅಲ್ಲದೆ, ಈ ವರ್ಷದ ಆರಂಭದಲ್ಲಿ ದಕ್ಷಿಣ ಕೊರಿಯದ ರೈಲ್ವೆ ಅಧಿಕಾರಿಗಳ ಇಮೇಲ್ ಖಾತೆಗಳಿಗೂ ಕನ್ನ ಹಾಕಲು ಉತ್ತರ ಕೊರಿಯ ವಿಫಲ ಪ್ರಯತ್ನ ನಡೆಸಿತ್ತು ಎಂದು ಹೇಳಿಕೆ ತಿಳಿಸಿದೆ. ದಕ್ಷಿಣ ಕೊರಿಯದ ರೈಲ್ವೆ ಸಾರಿಗೆ ನಿಯಂತ್ರಣ ವ್ಯವಸ್ಥೆಯ ಮೇಲೆ ಸೈಬರ್ ದಾಳಿ ನಡೆಸುವುದಕ್ಕೆ ಸಿದ್ಧತೆಯಾಗಿ ಅದು ಈ ಪ್ರಯತ್ನ ನಡೆಸಿತ್ತು ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X