Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವರ್ತಮಾನದ ಕಣ್ಣಲ್ಲಿ ಕನಕದಾಸರ ಸಾಹಿತ್ಯ

ವರ್ತಮಾನದ ಕಣ್ಣಲ್ಲಿ ಕನಕದಾಸರ ಸಾಹಿತ್ಯ

-ಕಾರುಣ್ಯಾ-ಕಾರುಣ್ಯಾ8 March 2016 11:55 PM IST
share
ವರ್ತಮಾನದ ಕಣ್ಣಲ್ಲಿ ಕನಕದಾಸರ ಸಾಹಿತ್ಯ

 ‘ಕನಕದಾಸರ ಕೃತಿಗಳಲ್ಲಿ ಸಮಾನತಾ ಸಮಾಜ’ ಡಾ. ನರಸಿಂಹಮೂರ್ತಿ ಹೂವಿನಹಳ್ಳಿ ಅವರು ಬರೆದ ಅಧ್ಯಯನಾ ಕೃತಿ. ಸಮಕಾಲೀನ ಸಮಾಜದ ಅನೇಕ ಬಗೆಯ ದಮನದ ಕೇಂದ್ರಗಳನ್ನು ಕನಕದಾಸರ ಕೃತಿಗಳ ಮೂಲಕ ವಿಮರ್ಶಿಸಿ, ಸ್ಫೋಟಿಸಲೆತ್ನಿಸಿರುವ ಈ ಪುಸ್ತಕ, ಕನಕದಾಸರ ಚಿಂತನೆಗಳನ್ನು ನಮ್ಮ ಕಾಲದ ಬೆಳಕಿನಲ್ಲಿ ಮರು ಶೋಧಿಸಿಕೊಳ್ಳಲು ಹೊರಟಿದೆ. ಕನಕದಾಸರ ಕಾವ್ಯವನ್ನು ವಚನ ಸಾಹಿತ್ಯದ ಜೊತೆಗೆ ನೋಡುವ ಸಾಹಸವನ್ನೂ ಅವರು ಮಾಡಿದ್ದಾರೆ.
ಕೆಳಜಾತಿಯಿಂದ ಬಂದ ಹೋರಾಟ ಗಾರ, ಲೇಖಕರಾದ ಕನಕದಾಸರು ಸಂಪ್ರದಾಯಸ್ಥ ಸಂಸ್ಕೃತಿಯೊಂದರ ವಿರುದ್ಧ ಪ್ರತಿಭಟನೆಯನ್ನು, ಇತರ ಕೀರ್ತನೆ ಮತ್ತು ಕೃತಿಯಲ್ಲಿ ದಾಖಲಿಸಿದ್ದಾರೆ ಎಂದು ಪ್ರತಿಪಾದಿಸುವ ಲೇಖಕರು, ಅವರನ್ನು ಮೇಲ್ವರ್ಣೀಯ ಜನರು ತಮ್ಮ ಸೂತ್ರದಲ್ಲಿ ಬಂಧಿಸಿಡುವುದನ್ನು ವಿರೋಧಿಸುತ್ತಾರೆ. ಸಾಮಾಜಿಕ ಚಳವಳಿಯನ್ನು ಪ್ರಾರಂಭಿಸಿ, ಸಾಮಾನ್ಯ ಜನರೊಂದಿಗೆ ಸಮಾನತೆಯ, ಸ್ಥಾನಮಾನದ ವಿಚಾರಗಳಿಗೆ ಹೋರಾಟಕ್ಕಿಳಿದು, ಜನಾಂಗಕ್ಕಾಗುತ್ತಿದ್ದ ನೋವು, ಅಪಮಾನ, ಬೇಸರ, ಕೀಳರಿಮೆಗಳನ್ನು ಭಕ್ತಿಯ ಆಚರಣೆಯಲ್ಲಿ ತೊಡಗಿಕೊಂಡೇ ಮಾನವೀಯ ವೌಲ್ಯಗಳನ್ನು ಹೇಳುವ ಅನುಭಾವಿಯಾಗಿ ರೂಪುಗೊಂಡವರು ಕನಕದಾಸರು ಎಂದು ಲೇಖಕರು ಅಭಿಪ್ರಾಯಪಡುತ್ತಾರೆ.

ಏಳು ಅಧ್ಯಾಯಗಳನ್ನೊಳಗೊಂಡ ಈ ಕೃತಿ, ಕನಕದಾಸರ ಸಾಹಿತ್ಯ ಮತ್ತು ಚಳವಳಿಯ ಬೇರೆ ಬೇರೆ ಮಗ್ಗುಲುಗಳನ್ನು ಸ್ಪರ್ಶಿಸುತ್ತದೆ. ಕೀರ್ತನೆಗಳಲ್ಲಿ ಭಕ್ತಿ, ಕೀರ್ತನೆಗಳಲ್ಲಿ ಸಮಾಜ, ಕನಸಿನ ಕಾವ್ಯಗಳು, ಕಾವ್ಯಗಳಲ್ಲಿ ಧರ್ಮ ಮತ್ತು ಯುದ್ಧ, ಜಾತಿ ದಂಗೆಯ ಕೃತಿ ರಾಮಧಾನ್ಯ ಚರಿತ್ರೆ, ಕನಕ ದಾಸರ ಕೀರ್ತನೆಗಳಲ್ಲಿ ಸಂಸ್ಕೃತಿ, ರಾಜಕೀಯ ಮೊದಲಾದವ ವಿಷಯಗಳ ಕುರಿತಂತೆ ಈ ಕೃತಿ ಚರ್ಚಿಸುತ್ತದೆ. ಪ್ರೇರಣಾ ಪ್ರಕಾಶನ ಬೆಂಗಳೂರು ಹೊರತಂದಿರುವ ಈ ಕೃತಿಯ ಮುಖಬೆಲೆ 75 ರೂ. ಆಸಕ್ತರು 9480583913 ದೂರವಾಣಿಯನ್ನು ಸಂಪರ್ಕಿಸಬಹುದು.
 

share
-ಕಾರುಣ್ಯಾ
-ಕಾರುಣ್ಯಾ
Next Story
X