Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯ: ಹಸಿವೆಯಿಂದ ನರಳುತ್ತಿರುವ 2.5...

ಸಿರಿಯ: ಹಸಿವೆಯಿಂದ ನರಳುತ್ತಿರುವ 2.5 ಲಕ್ಷ ಮಕ್ಕಳು

ಯುದ್ಧವಿರಾಮ ಜಾರಿಯಲ್ಲಿದ್ದರೂ ಪರಿಸ್ಥಿತಿಯಲ್ಲಿ ಸುಧಾರಣೆಯಿಲ್ಲ: ‘ಸೇವ್ ದ ಚಿಲ್ಡ್ರನ್’ ವರದಿ

ವಾರ್ತಾಭಾರತಿವಾರ್ತಾಭಾರತಿ9 March 2016 7:33 PM IST
share
ಸಿರಿಯ: ಹಸಿವೆಯಿಂದ ನರಳುತ್ತಿರುವ 2.5 ಲಕ್ಷ ಮಕ್ಕಳು

ಲಂಡನ್, ಮಾ. 9: ಸಿರಿಯದಲ್ಲಿ ಯುದ್ಧವಿರಾಮ ಜಾರಿಗೆ ಬಂದಿರುವ ಹೊರತಾಗಿಯೂ, ಮುತ್ತಿಗೆಗೊಳಗಾಗಿರುವ ದೇಶದ ‘‘ಬಯಲು ಬಂದೀಖಾನೆ’’ಗಳಲ್ಲಿ ಸುಮಾರು ಎರಡೂವರೆ ಲಕ್ಷ ಮಕ್ಕಳು ಹಸಿವಿನಿಂದ ನರಳುತ್ತಿದ್ದಾರೆ ಎಂದು ಮಕ್ಕಳನ್ನು ರಕ್ಷಿಸಿ ಎಂದು ಕರೆಕೊಡುವ ಅಭಿಯಾನ ‘ಸೇವ್ ದ ಚಿಲ್ಡ್ರನ್’ ಹೇಳಿದೆ.

ಅದೇ ವೇಳೆ, ಶಾಶ್ವತ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಬುಧವಾರ ಆರಂಭವಾಗಬೇಕಿದ್ದ ಶಾಂತಿ ಸಭೆಯ ಭವಿಷ್ಯ ಅಯೋಮಯವಾಗಿದೆ.

 ಸಿರಿಯದ 18 ವಿವಿಧ ಪ್ರದೇಶಗಳಲ್ಲಿ ಸುಮಾರು 4,86,700 ಜನರು ಒಂದೋ ಸರಕಾರಿ ಅಥವಾ ಪ್ರತಿಪಕ್ಷ ಪಡೆಗಳಿಂದ ಮುತ್ತಿಗೆಗೊಳಗಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಪ್ರದೇಶಗಳ ಒಳಗೆ ಅಥವಾ ಹೊರಗೆ ಆಹಾರ, ಔಷಧ ಅಥವಾ ಇಂಧನ ಪೂರೈಕೆಯಾಗುತ್ತಿಲ್ಲ. ಇಂಥ ಪರಿಸ್ಥಿತಿಯಲ್ಲಿರುವ ಜನರ ಸಂಖ್ಯೆ 19 ಲಕ್ಷವನ್ನೂ ಮೀರಿದೆ ಎಂಬುದಾಗಿ ಕೆಲವು ನೆರವು ಸಂಸ್ಥೆಗಳು ಅಂದಾಜಿಸಿವೆ.

ಫೆಬ್ರವರಿ 7ರಂದು ಜಾರಿಗೆ ಬಂದ ಯುದ್ಧವಿರಾಮದ ಹಿನ್ನೆಲೆಯಲ್ಲಿ ಇಂಥ ಮುತ್ತಿಗೆಗೊಳಗಾಗಿರುವ ಪ್ರದೇಶಗಳ ಪರಿಸ್ಥಿತಿ ಸುಧಾರಿಸುವುದು ಹಾಗೂ ಅಲ್ಲಿಗೆ ತಲುಪಲು ನೆರವು ಸಂಸ್ಥೆಗಳಿಗೆ ಸಾಧ್ಯವಾಗುವುದು ಎಂಬ ಆಶಾಭಾವವನ್ನು ಇಟ್ಟುಕೊಳ್ಳಲಾಗಿತ್ತು. ಈವರೆಗೆ ಸುಮಾರು 1.5 ಲಕ್ಷ ಜನರನ್ನು ತಲುಪಲು ಬೆರಳೆಣಿಕೆಯಷ್ಟು ನೆರವು ತಂಡಗಳಿಗೆ ಸಾಧ್ಯವಾಗಿದೆ. ಆದರೆ, ನೆರವು ಪ್ರಮಾಣ ಸಾಲುತ್ತಿಲ್ಲ ಎಂಬುದಾಗಿ ನೆರವು ಸಂಸ್ಥೆಗಳು ಮತ್ತು ನಿವಾಸಿಗಳು ಹೇಳಿದ್ದಾರೆ.

ಈ ಪ್ರದೇಶಗಳಿಗೆ ಹೋಗಲು ಪ್ರತಿ ತಂಡಕ್ಕೆ ಪ್ರತ್ಯೇಕವಾಗಿ ಪರವಾನಿಗೆಗಳನ್ನು ನೀಡಲಾಗುತ್ತಿದೆ. ಕೆಲವು ವಾರಗಳಿಗೆ ಸಾಕಾಗುವಷ್ಟು ಪ್ರಮಾಣದ ದಾಸ್ತಾನುಗಳನ್ನಷ್ಟೇ ಒಯ್ಯಲು ಈ ತಂಡಗಳಿಗೆ ಸಾಧ್ಯವಾಗಿದೆ. ಮುಂದಿನ ಪೂರೈಕೆ ಯಾವಾಗ ಎಂಬ ಖಾತರಿ ಯಾರಲ್ಲೂ ಇಲ್ಲ.

ದಿನಕ್ಕೆ ಒಂದು ಹೊತ್ತಿನ ಊಟವೂ ಇಲ್ಲದ ದಿನಗಳು ಹಲವು ಬಾರಿ ಎದುರಾಗಿವೆ ಎಂಬುದಾಗಿ ಸಿರಿಯದ ನಿವಾಸಿಗಳು ಹೇಳಿದ್ದಾರೆ ಎಂದು ಬುಧವಾರ ಬಿಡುಗಡೆ ಮಾಡಿದ ವರದಿಯಲ್ಲಿ ‘ಸೇವ್ ದ ಚಿಲ್ಡ್ರನ್’ ಹೇಳಿದೆ. ಆಹಾರವಿಲ್ಲದೆ ತಮ್ಮ ಪಟ್ಟಣಗಳಲ್ಲಿ ಮಕ್ಕಳು ಸಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

 ‘‘ನನ್ನ ಓರ್ವ ಸಂಬಂಧಿಯ ಗಂಡು ಶಿಶು ಮಕ್ಕಳ ಆಹಾರವಿಲ್ಲದೆ ಅಪೌಷ್ಟಿಕತೆಯಿಂದಾಗಿ ಮೃತಪಟ್ಟಿತು’’ ಎಂದು ಡಮಾಸ್ಕಸ್‌ನ ಉಪನಗರ ಮಿಸ್ರಬದಲ್ಲಿನ ಮಹಿಳೆಯೊಬ್ಬರು ‘ಸೇವ್ ದ ಚಿಲ್ಡ್ರನ್’ಗೆ ಹೇಳಿದ್ದಾರೆ. ‘‘ತೀರಾ ಅನಾರೋಗ್ಯದಿಂದಾಗಿ ಮಗುವಿಗೆ ಹಾಲೂಡಿಸಲು ತಾಯಿಗೆ ಆಗಿರಲಿಲ್ಲ’’ ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X