Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಟಿಪ್ಪರ್ ಡಿಕ್ಕಿ, ಬೈಕ್...

ಉಪ್ಪಿನಂಗಡಿ: ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲಿಯೇ ಮೃತ

ವಾರ್ತಾಭಾರತಿವಾರ್ತಾಭಾರತಿ9 March 2016 8:04 PM IST
share
ಉಪ್ಪಿನಂಗಡಿ: ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲಿಯೇ ಮೃತ

ಉಪ್ಪಿನಂಗಡಿ: ಅತೀ ವೇಗದಿಂದ ಬಂದ ಟಿಪ್ಪರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಸಂಜೆ ಉಪ್ಪಿನಂಗಡಿಯ ಆದಿತ್ಯ ಹೊಟೇಲ್ ಬಳಿ ನಡೆದಿದೆ. ಘಟನೆ ಬಳಿಕ ಲಾರಿ ನಿಲ್ಲಿಸಿ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಉಪ್ಪಿನಂಗಡಿ ಗ್ರಾಮದ ಮಠ ಹಿರ್ತಡ್ಕ ನಿವಾಸಿ ಅಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಹಸೈನಾರ್ (28) ಮೃತ ದುರ್ದೈವಿ. ಘಟನೆಯ ವಿವರ: ಚಾಲಕ ವೃತ್ತಿ ನಡೆಸುವ ಮುಹಮ್ಮದ್ ಹಸೈನಾರ್ ತನ್ನ ಮನೆ ಕಡೆ ಟಿವಿಎಸ್ ಕಂಪೆನಿಯ ಜುಪಿಟರ್ ಮೊಪೆಡ್‌ನಲ್ಲಿ ತೆರಳುತ್ತಿದ್ದು, ಆದಿತ್ಯ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿ ದ್ವಿಚಕ್ರ ವಾಹನ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಟಿಪ್ಪರೊಂದು ನೆಲ್ಯಾಡಿ ಕಡೆ ಡಾಮರು ಮಿಶ್ರಣ ಸಾಗಿಸುತ್ತಿದ್ದ ರಾಜ್‌ಕಮಲ್ ಕನ್‌ಸ್ಟ್ರಕ್ಷನ್‌ನವರಿಗೆ ಸೇರಿದ ಟಿಪ್ಪರ್ ಅತೀ ವೇಗ ಹಾಗೂ ಅಜಾಗರುಕತೆಯಿಂದ ಬಂದು ರಸ್ತೆ ಬದಿ ನಿಂತಿದ್ದ ಮುಹಮ್ಮದ್ ಹಸೈನಾರ್‌ಗೆ ಡಿಕ್ಕಿ ಹೊಡೆಯಿತು. ಘಟನೆಯಿಂದ ಮುಹಮ್ಮದ್ ಹಸೈನಾರ್ ಸ್ಥಳದಲ್ಲಿಯೇ ಸಾವನ್ನಪಿದ್ದು, ದ್ವಿಚಕ್ರ ವಾಹನ ಛಿದ್ರವಾಗಿ ಹೋಗಿದೆ. ಅಪಘಾತ ನಡೆಸಿದ ಬಳಿಕವೂ ಅದೇ ವೇಗದಲ್ಲಿ ಲಾರಿಯನ್ನು ಮುಂದಕ್ಕೆ ಚಲಾಯಿಸಿಕೊಂಡು ತಪ್ಪಿಸಲೆತ್ನಿಸಿದ್ದು, ಈ ಸಂದರ್ಭ ಪ್ರತ್ಯಕ್ಷದರ್ಶಿಗಳು ನಿಲ್ಲಿಸಲು ಬೊಬ್ಬೆ ಹೊಡೆದುದರಿಂದ ಅಪಘಾತ ಸ್ಥಳದಿಂದ ಸುಮಾರು 100 ಮೀಟರ್ ದೂರದಲ್ಲಿ ಲಾರಿಯನ್ನು ನಿಲ್ಲಿಸಿ ಸಮೀಪದ ತೋಟಕ್ಕೆ ಹಾರಿ ಪರಾಯಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ. ಈ ಸಂದರ್ಭ ಪ್ರತ್ಯಕ್ಷದರ್ಶಿಗಳು ಈತನ ಬೆನ್ನಟ್ಟಿದರಾದರೂ ಈತ ಮಾತ್ರ ಪರಾರಿಯಾಗಿದ್ದಾನೆ. ಮುಹಮ್ಮದ್ ಹಸೈನಾರ್ ವಿವಾಹಿತರಾಗಿದ್ದು, ಇಬ್ಬರು ಹೆಣ್ಣು ಹಾಗೂ ಓರ್ವ ಗಂಡು ಮಗುವನ್ನು ಹೊಂದಿದ್ದಾರೆ. ಲಾರಿಗೂ ಸವರಿದ್ದ: ಇಲ್ಲಿ ರಸ್ತೆ ಹಾಗೂ ಅದರ ಬದಿ ವಿಶಾಲವಾಗಿದ್ದು, ಮುಹಮ್ಮದ್ ಹಸೈನಾರ್ ಡಾಮರು ರಸ್ತೆಯಿಂದ ಕೆಳಗಿಳಿದು ರಸ್ತೆ ಬದಿಯ ತೀರಾ ಅಂಚಿನಲ್ಲಿ ನಿಂತು ಮೊಬೈಲ್‌ನಲ್ಲಿ ಮಾತನಾಡಿಕೊಂಡಿದ್ದರು. ಆದರೂ ಕೂಡಾ ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಗೆ ಮುಹಮ್ಮದ್ ಹಸೈನಾರ್ ಬಲಿಯಾಗಬೇಕಾಯಿತು. ಮುಹಮ್ಮದ್ ಹಸೈನಾರ್ ನಿಂತಿದ್ದ ಸ್ವಲ್ಪ ಹಿಂದೆ ಲಾರಿಯೊಂದು ನಿಂತಿದ್ದು, ಅದನ್ನು ಸವರಿಕೊಂಡು ಬಂದು ಟಿಪ್ಪರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ದ್ವಿಚಕ್ರ ವಾಹನ ಛಿದ್ರ: ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ಛಿದ್ರವಾಗಿದ್ದು, ಬಿಡಿ ಭಾಗಗಳು ದೂರಕ್ಕೆಸೆಯಲ್ಪಟ್ಟಿದ್ದವು. ಡಿಕ್ಕಿ ಹೊಡೆದ ಬಳಿಕ ಲಾರಿ ಕೂಡಾ ದ್ವಿಚಕ್ರ ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ. ಇದರಿಂದಾಗಿ ದ್ವಿಚಕ್ರ ವಾಹನದ ಅಳಿದುಳಿದ ಭಾಗಗಳು ಗುಜರಿಗೆ ಹಾಕಲು ಪುಡಿಮಾಡಿದ ಕಬ್ಬಿಣದಂತೆ ಭಾಸವಾಗುತ್ತಿತ್ತು.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಸುಮಾರು ಒಂದು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X