Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರವಾದಿ ಬಗ್ಗೆ ಅವಹೇಳನಕಾರಿ ಕಮೆಂಟ್ :...

ಪ್ರವಾದಿ ಬಗ್ಗೆ ಅವಹೇಳನಕಾರಿ ಕಮೆಂಟ್ : ವಿಷಾದ ವ್ಯಕ್ತಪಡಿಸಿದ ' ಮಾತೃಭೂಮಿ'

LATEST UPDATE 10TH MARCH 2016LATEST UPDATE 10TH MARCH 20169 March 2016 9:18 PM IST
share
ಪ್ರವಾದಿ ಬಗ್ಗೆ ಅವಹೇಳನಕಾರಿ ಕಮೆಂಟ್ : ವಿಷಾದ ವ್ಯಕ್ತಪಡಿಸಿದ  ಮಾತೃಭೂಮಿ

ಪ್ರವಾದಿ ಕುರಿತು ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದ್ದ ‘ತೀವ್ರ ಅವಹೇಳನಕಾರಿ’ ಕಮೆಂಟ್‌ಗೆ ಮಾತೃಭೂಮಿ ದೈನಿಕ ಗುರುವಾರ ತನ್ನ ಮುಖಪುಟದಲ್ಲಿ ಪ್ರಾಮುಖ್ಯತೆಯೊಂದಿಗೆ ವಿಷಾದ ವ್ಯಕ್ತಪಡಿಸಿದೆ. ಅದರ ಅನುವಾದ ಇಲ್ಲಿದೆ.

ಮಾತೃಭೂಮಿ ವಿಷಾದಿಸುತ್ತದೆ

 2016 ಮಾರ್ಚ್ 6, ರವಿವಾರ ಪುನರ್‌ಜನಿ ವನಿತಾ ವಕೀಲರ ಸಮಿತಿ ಕ್ಯಾಲಿಕಟ್‌ನಲ್ಲಿ ಏರ್ಪಡಿಸಿದ್ದ ‘ಗೃಹಪೀಡನಾ ತಡೆ ನಿಯಮ’ ಎಂಬ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಜಸ್ಟೀಸ್ ಕಮಾಲ್ ಪಾಷ ನಡೆಸಿದ ಭಾಷಣದ ಕೆಲ ವಿಷಯಗಳಿಗೆ ಸಾಮಾಜಿಕ ಜಾಲತಾಣಗಳಿಂದ ಬಂದ ಪ್ರತಿಕ್ರಿಯೆಗಳಲ್ಲಿ ಕೆಲವು ಮಾರ್ಚ್ 9 ಕೋಝಿಕ್ಕೋಡ್ ‘ನಗರಂ’ ಎರಡನೆ ಪೇಜ್‌ನ ಆಪ್‌ಸ್ಟಾಕ್ ಎಂಬ ಲೇಖನದಲ್ಲಿ ಹಾಗೂ ಮಾರ್ಚ್ 8 ತೃಶೂರ್ ‘ನಗರಂ’ ಮೂರನೆ ಪೇಜ್‌ನ ‘ಇಡಪೆಡಲ್’ ಎಂಬ ಲೇಖನಗಳಲ್ಲಿ ಮಾತ್ರ ಪ್ರಕಟಿಸಲಾಗಿತ್ತು. ಆ ಪ್ರತಿಕ್ರಿಯೆಗಳು ಧರ್ಮಭಕ್ತರನ್ನು ನೋಯಿಸಿವೆ ಎಂದು ಅರಿವಾಗಿದೆ. ಅವು ಪ್ರಕಟವಾಗಿದ್ದಕ್ಕೆ ತೀವ್ರವಾಗಿ ವಿಷಾದಿಸುತ್ತೇವೆ.

                                                       -ಸಂಪಾದಕ

ಕ್ರಮಕ್ಕೆ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ವಿಮರ್ಶೆಗಳನ್ನು ಪೋಸ್ಟ್ ಮಾಡಿದವರ ವಿರುದ್ಧ ಅತ್ಯಂತ ಶೀಘ್ರವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾತೃಭೂಮಿ ಆಡಳಿತ ಮಂಡಳಿ ಸರಕಾರಕ್ಕೆ ಮನವಿ ಮಾಡಿದೆ. ಮಾತೃಭೂಮಿಯಲ್ಲಿ ಈ ವಿಮರ್ಶೆಗಳು ನಿರ್ಲಕ್ಷದಿಂದ ಯಥಾವತ್ ಪ್ರಕಟವಾಗಿವೆ. ಇದಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಡಳಿತ ಮಂಡಳಿ ತೀರ್ಮಾನಿಸಿದೆ.

-------------------------------------------------------------------------------------------------------------------------

ತಿರುವನಂತಪುರಮ್ ,ಮಾ. 9 : ಮಳಯಾಳಂ ದಿನಪತ್ರಿಕೆ ಮಾತೃಭೂಮಿ ಪತ್ರಿಕೆಯ ಸಾಮಾಜಿಕ ಜಾಲತಾಣದ ವಿಭಾಗದಲ್ಲಿ ಪ್ರವಾದಿಯವರ  ಕುರಿತು ಪ್ರಕಟವಾಗಿದ್ದ ' ಅವಹೇಳನಕಾರಿ' ಕಮೆಂಟ್ ಗೆ ಪತ್ರಿಕೆ ಕ್ಷಮೆ ಯಾಚಿಸಿದೆ. ಕೇರಳ ಹೈ ಕೋರ್ಟ್ ನ ನ್ಯಾಯಾಧೀಶ ಕಮಾಲ್ ಪಾಶಾ ಅವರು ಮುಸ್ಲಿಂ ಸಮುದಾಯದಲ್ಲಿರುವ ಬಹುಪತ್ನಿತ್ವ ಹಾಗು ಮುಸ್ಲಿಂ ಪರ್ಸನಲ್ ಲಾ ಕುರಿತು ಮಾತನಾಡಿದ  ವರದಿಗೆ ಪ್ರತಿಕ್ರಿಯೆಯಾಗಿ ಮಾತೃಭೂಮಿ ತನ್ನ ಆಪ್ಸ್ ಟಾಕ್ ವಿಭಾಗದಲ್ಲಿ ಓದುಗರ ಪ್ರತಿಕ್ರಿಯೆಗಳನ್ನು ಪ್ರಕಟಿಸಿತ್ತು. ಆ ಪೈಕಿ ಒಂದು ಪ್ರತಿಕ್ರಿಯೆಯಲ್ಲಿ ಪ್ರವಾದಿ ಹೆಸರು ಹೇಳದೆ ಅವರ ಬಗ್ಗೆ ' ಅತ್ಯಂತ ಅವಹೇಳನಕಾರಿ' ಮಾತನ್ನು ಹೇಳಲಾಗಿತ್ತು.   
ಇದಕ್ಕೆ ಪ್ರತಿಕ್ರಿಯೆಗಳ ಮಹಾಪೂರವೇ ಪತ್ರಿಕೆಗೆ ಹರಿದು ಬಂದಿದೆ. ಜೊತೆಗೆ ಪತ್ರಿಕೆ ಕ್ಷಮೆ ಯಾಚಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭವಾಯಿತು. ದಿನವಿಡೀ  ಪಿ ಎಫ್ ಐ , ಎಸ್ ಡಿ ಪಿ ಐ ಸಹಿತ ಇತರ ಹಲವು ಸಂಘಟನೆಗಳು ಬೇರೆ ಬೇರೆ ಕಡೆಗಳಲ್ಲಿ ಪತ್ರಿಕೆಯ ಕಚೇರಿ ಹೊರಗೆ ಪ್ರತಿಭಟನೆ ನಡೆಸಿದವು. ಜನರು ಪತ್ರಿಕೆಯನ್ನು ಸುಟ್ಟು ಹಾಕುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಬಂದವು. 
ಸಂಜೆ ವೇಳೆಗೆ ಮಾತೃಭೂಮಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಾಗು ಟಿವಿ ಚಾನೆಲ್ ನಲ್ಲಿ ಪ್ರಾಮುಖ್ಯತೆಯೊಂದಿಗೆ ಕ್ಷಮೆ ಯಾಚನೆ ಪ್ರಕಟಿಸಿತು. 


photos from

thenewsminute.com
 

share
LATEST UPDATE 10TH MARCH 2016
LATEST UPDATE 10TH MARCH 2016
Next Story
X