Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಲಿ, ಆನೆಗಳ ರಾಜಧಾನಿ ಕರ್ನಾಟಕ: ರಮಾನಾಥ...

ಹುಲಿ, ಆನೆಗಳ ರಾಜಧಾನಿ ಕರ್ನಾಟಕ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ9 March 2016 10:39 PM IST
share
ಹುಲಿ, ಆನೆಗಳ ರಾಜಧಾನಿ ಕರ್ನಾಟಕ: ರಮಾನಾಥ ರೈ

ಬೆಂಗಳೂರು, ಮಾ.9: ದೇಶದಲ್ಲಿಯೆ ಹೆಚ್ಚಿನ ಸಂಖ್ಯೆಯಲ್ಲಿ ಹುಲಿ ಹಾಗೂ ಆನೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕವಾಗಿದ್ದು, ಈ ಸಾಧನೆಗೆ ಅರಣ್ಯ ಇಲಾಖೆಯ ಸಿಬ್ಬಂದಿಯ ಶ್ರಮವೇ ಕಾರಣ ಎಂದು ಅರಣ್ಯ ಇಲಾಖೆ ಸಚಿವ ರಮಾನಾಥ ರೈ ಅಭಿನಂದಿಸಿದ್ದಾರೆ.
ಬುಧವಾರ ಸಿಎಸ್‌ಎಸ್ ಕಾರ್ಪ್ ಸಂಸ್ಥೆಯು ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ‘ವೈಜ್ಞಾನಿಕ ನಿಯತಕಾಲಿಕೆ’ಯನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 400 ಹುಲಿಗಳ ಇದ್ದು, ಅದರ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದು ತಿಳಿಸಿದರು.
ವನ್ಯಜೀವಿಗಳು ಹಾಗೂ ಮನುಷ್ಯನ ನಡುವೆ ನಡೆಯುತ್ತಿರುವ ಸಂಘರ್ಷವನ್ನು ತಡೆಯುವುದು ಅರಣ್ಯ ಇಲಾಖೆಯ ಮುಂದಿರುವ ಬಹುದೊಡ್ಡ ಸವಾಲಾಗಿದೆ. ಹೀಗಾಗಿ ಅರಣ್ಯವನ್ನು ಮತ್ತಷ್ಟು ವಿಸ್ತರಿಸುವುದು ಹಾಗೂ ದಟ್ಟವಾಗಿಸುವ ಮೂಲಕ ವನ್ಯಜೀವಿಗಳು ನಾಡಿಗೆ ಬರದಂತೆ ತಡೆಯುವಂತಹ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ರಮಾನಾಥ ರೈ ಹೇಳಿದ್ದಾರೆ.
ವನ್ಯಜೀವಿಗಳು ಇದ್ದರೆ ಮಾತ್ರ ಕಾಡು ಇರಲು ಸಾಧ್ಯ ಎಂಬ ಸತ್ಯವನ್ನು ಜನತೆ ಅರಿಯಬೇಕು. ಕಾಡು ಸಮೃದ್ಧವಾಗಿದ್ದರೆ ಮಳೆ, ಬೆಳೆಗೆ ಸಮಸ್ಯೆಯಾಗುವುದಿಲ್ಲ. ಉತ್ತಮ ಮಳೆಯಾದರೆ ರೈತರು ನೆಮ್ಮದಿಯಿಂದ ಜೀವನ ಸಾಗಿಸಬಹುದು. ಹೀಗಾಗಿ ಕಾಡು ಇದ್ದರೆ ಮಾತ್ರ ನಾಡು ಎಂಬ ವಾಸ್ತವವನ್ನು ಅರಿತು ಅರಣ್ಯ ರಕ್ಷಣೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಅವರು ತಿಳಿಸಿದರು.
ಅರಣ್ಯ ಇಲಾಖೆಯ ಕಾರ್ಯದರ್ಶಿ ಮಹೇಂದ್ರ ಜೈನ್ ಮಾತನಾಡಿ, ಕರ್ನಾಟಕದಲ್ಲಿ ಐದು ಹುಲಿ ಸಂರಕ್ಷಿತ ಪ್ರದೇಶಗಳಿದ್ದು, ಹುಲಿಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಹುಲಿಗಳ ಜೀವನ ಕ್ರಮಗಳ ಹಂತಗಳನ್ನು ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.
 ಸಿಎಸ್‌ಎಸ್ ಕಾರ್ಪ್ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟೈಗರ್ ರಮೇಶ್ ಮಾತನಾಡಿ, ವನ್ಯಜೀವಿಗಳ ಚಲನವಲನಗಳನ್ನು ತಿಳಿಯುವ ನಿಟ್ಟಿನಲ್ಲಿ ಸಿಎಸ್‌ಎಸ್ ಕಾರ್ಪ್ ಸಂಸ್ಥೆಯು ಅರಣ್ಯ ಇಲಾಖೆಗೆ 800 ಕ್ಯಾಮೆರಾಗಳನ್ನು ಉಚಿತವಾಗಿ ನೀಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಅಗತ್ಯವಿರುವ ನೆರವನ್ನು ನೀಡಲು ಸಿದ್ಧವಿದ್ದೇವೆ ಎಂದು ತಿಳಿಸಿದರು.
72 ವಯಸ್ಕ ಹುಲಿಗಳ ಚಟುವಟಿಕೆಗಳು ರಾಷ್ಟ್ರೀಯ ಹುಲಿ ವೈಜ್ಞಾನಿಕ ನಿಯತಕಾಲಿಕದಲ್ಲಿ ದಾಖಲಿಸಲಾಗಿದೆ. ಹುಲಿಗಳ ಚಿತ್ರಗಳು ಹಾಗೂ ಹುಲಿಯ ಮೇಲ್ಭಾಗದಲ್ಲಿರುವ ಪಟ್ಟಿಗಳ ಪ್ರತಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಯಮಾವಳಿ ಪ್ರಕಾರ 4ನೆ ಹಂತದ ಹುಲಿ ಸಮೀಕ್ಷೆಯಲ್ಲಿ ಕ್ಯಾಮೆರಾ ಟ್ರಾಪ್ ಬಳಕೆ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಮುಖ್ಯಸ್ಥ ವಿನಯ್ ಲೂತ್ರ, ಅರಣ್ಯ ಇಲಾಖೆಯ ಸಂರಕ್ಷಣಾಧಿಕಾರಿ ಗೋಕುಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X