Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ...

ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಶರತ್ತುಬದ್ಧ ಅನುಮತಿ

ವಾರ್ತಾಭಾರತಿವಾರ್ತಾಭಾರತಿ9 March 2016 11:50 PM IST
share
ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಶರತ್ತುಬದ್ಧ ಅನುಮತಿ

ಜೊತೆಗೆ 5 ಕೋಟಿ ರೂ. ದಂಡ

ಹೊಸದಿಲ್ಲಿ, ಮಾ.9: ಅಸುರಕ್ಷಿತ ವೇದಿಕೆ ಮತ್ತು ಪರಿಸರದ ಮೇಲೆ ಪರಿಣಾಮದ ಕಳವಳಗಳಿದ್ದರೂ ಶ್ರೀ ಶ್ರೀ ರವಿಶಂಕರ ಅವರು ಈ ವಾರಾಂತ್ಯದಲ್ಲಿ ಯಮುನಾ ನದಿಯ ತೀರದಲ್ಲಿ ಆಯೋಜಿಸಿರುವ ‘ವಿಶ್ವ ಸಂಸ್ಕೃತಿ ಉತ್ಸವ’ದ ಬೃಹತ್ ಕಾರ್ಯಕ್ರಮ ನಿಗದಿಯಾಗಿರುವಂತೆ ನಡೆಯಲಿದೆ. ದಂಡ ಮತ್ತು ಕೆಲವು ಶರತ್ತುಗಳನ್ನು ವಿಧಿಸುವ ಮೂಲಕ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ(ಎನ್‌ಜಿಟಿ)ವು ಬುಧವಾರ ಕಾರ್ಯಕ್ರಮಕ್ಕೆ ಹಸಿರು ನಿಶಾನೆಯನ್ನು ತೋರಿಸಿದೆ.

ಈ ಕಾರ್ಯಕ್ರಮವು ಯಮುನಾ ನದಿಯ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ತೀವ್ರ ಹಾನಿಯನ್ನುಂಟು ಮಾಡಲಿದೆ ಎಂಬ ಕಳವಳವನ್ನು ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಸಂದರ್ಭ ಕಳೆದೆರಡು ದಿನಗಳ ಕಾಲ ವಿವಿಧ ರಾಜ್ಯ ಮತ್ತು ಕೇಂದ್ರೀಯ ಸಂಸ್ಥೆಗಳ ಮುಂದೆ ಕಠಿಣ ಪ್ರಶ್ನೆಗಳನ್ನಿಟ್ಟಿದ್ದ ಎನ್‌ಜಿಟಿಯು ಶ್ರೀ ಶ್ರೀಗಳ ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನಕ್ಕೆ ಐದು ಕೋ.ರೂ.ಗಳ ದಂಡವನ್ನು ವಿಧಿಸಿದೆ.

ಐದು ಲಕ್ಷ ರೂ.ಗಳ ದಂಡವನ್ನು ತೆರುವಂತೆ ದಿಲ್ಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಆದೇಶಿಸಿರುವ ನ್ಯಾಯಾಧಿಕರಣವು ಭವಿಷ್ಯದಲ್ಲಿ ಈ ರೀತಿಯಲ್ಲಿ ಪರವಾನಿಗೆಗಳನ್ನು ನೀಡದಂತೆ ಅದಕ್ಕೆ ತಾಕೀತು ಮಾಡಿದೆ.

ಯೋಗ ಮತ್ತು ಧ್ಯಾನ ಅಧಿವೇಶನಗಳು,ಶಾಂತಿ ಪ್ರಾರ್ಥನೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನೊಳಗೊಂಡಿರುವ ಮೂರು ದಿನಗಳ ವಿಶ್ವ ಸಂಸ್ಕೃತಿ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಆದರೆ ಅವರ ಸುರಕ್ಷತೆಯ ಹೊಣೆಯನ್ನು ಹೊತ್ತಿರುವ ಎಸ್‌ಪಿಜಿಯು ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

ಕಾರ್ಯಕ್ರಮಕ್ಕಾಗಿ ನಿರ್ಮಿಸಲಾಗಿರುವ ಏಳು ಎಕರೆ ವಿಸ್ತೀರ್ಣದ ವೇದಿಕೆಯು ಸುರಕ್ಷಿತವಾಗಿಲ್ಲ ಮತ್ತು ಪ್ರಧಾನಿ ಹಾಗೂ ಇತರ ವಿಐಪಿಗಳಿಗಾಗಿ ಪ್ರತ್ಯೇಕ ವೇದಿಕೆಯನ್ನು ನಿರ್ಮಿಸಬೇಕು ಎಂದು ತಜ್ಞರ ಸಮಿತಿಯೊಂದು ಪೊಲೀಸರಿಗೆ ತಿಳಿಸಿದೆ.

ಆರು ಫುಟ್ಬಾಲ್ ಮೈದಾನಗಳಷ್ಟು ವಿಶಾಲವಾಗಿರುವ ವೇದಿಕೆಯ ಜೊತೆಗೆ ಹಲವಾರು ತಾತ್ಕಾಲಿಕ ಸೇತುವೆಗಳು,ಮೊಬೈಲ್ ಗೋಪುರಗಳು ಮತ್ತು ಪಾರ್ಕಿಂಗ್ ಪ್ರದೇಶ ಕೂಡ ತಲೆಯೆತ್ತಿವೆ. ಯಮುನಾ ತೀರದ ಸಾವಿರ ಎಕರೆಗೂ ಅಧಿಕ ಪ್ರದೇಶವನ್ನು ಹಂಗಾಮಿ ಗ್ರಾಮವಾಗಿ ಪರಿವರ್ತಿಸಲಾಗಿದೆ.

ಈ ಬೃಹತ್ ಕಾರ್ಯಕ್ರಮಕ್ಕೆ ನೀಡಲಾದ ಅನುಮತಿಗಳ ಬಗ್ಗೆ ವಿಚಾರಣೆ ಸಂದರ್ಭ ಎನ್‌ಜಿಟಿಯು,ದಿಲ್ಲಿಯಲ್ಲಿ...ವಿಶೇಷವಾಗಿ ನೆರೆ ನೀರಿನ ಹರವು ಬಯಲಿನಲ್ಲಿ ಇಂತಹ ಮತ್ತು ಇಷ್ಟೊಂದು ಭಾರೀ ನಿರ್ಮಾಣ ಚಟುವಟಿಕೆ ಈ ಹಿಂದೆಂದಾದರೂ ನಡೆದಿತ್ತೇ ಎಂದು ಸರಕಾರವನ್ನು ಪ್ರಶ್ನಿಸಿತ್ತು.
ಜಲ ಸಂಪನ್ಮೂಲ ಸಚಿವಾಲಯ ಹಾಗೂ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗಳು ತಾವು ಈ ಕಾರ್ಯಕ್ರಮಕ್ಕೆ ಅನುಮತಿಯನ್ನು ನೀಡಿಲ್ಲ ಎಂದು ಎನ್‌ಜಿಟಿಗೆ ತಿಳಿಸಿದ್ದವು.

ಕಾರ್ಯಕ್ರಮಕ್ಕೆ ಅನುಮತಿಗೆ ಸಂಬಂಧಿಸಿದಂತೆ ಮತ್ತು ಸಿದ್ಧತೆಯಲ್ಲಿ ಸೇನೆಯಂತಹ ಸಂಪನ್ಮೂಲಗಳ ಬಳಕೆ ಕುರಿತಂತೆ ಸರಕಾರವು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಪ್ರತಿಭಟನೆಯನ್ನೂ ಎದುರಿಸಬೇಕಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X