Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜ್ಪೆ: ವಿಮಾನ ನಿಲ್ದಾಣದ ಮುಂದೆ ಧರಣಿ:...

ಬಜ್ಪೆ: ವಿಮಾನ ನಿಲ್ದಾಣದ ಮುಂದೆ ಧರಣಿ: ಎಮಿಗ್ರೇಶನ್ ಮತ್ತು ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 March 2016 11:59 PM IST
share
ಬಜ್ಪೆ: ವಿಮಾನ ನಿಲ್ದಾಣದ ಮುಂದೆ ಧರಣಿ: ಎಮಿಗ್ರೇಶನ್ ಮತ್ತು ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಗಳೂರು, ಮಾ.9: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಎಮಿಗ್ರೇಶನ್ ಮತ್ತು ಕಸ್ಟಮ್ಸ್ ಅಧಿಕಾರಿಗಳು ಅನಗತ್ಯ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಇಂದು ಕೇರಳ ಸ್ಟೇಟ್ ಮುಸ್ಲಿಮ್ ಯೂತ್ ಲೀಗ್ ಕಾಸರಗೋಡು ಜಿಲ್ಲಾ ಸಮಿತಿಯು ವಿಮಾನ ನಿಲ್ದಾಣದ ಬಳಿ ಧರಣಿ ನಡೆಸಿತು.

ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದ ಮಂಜೇಶ್ವರ ಕ್ಷೇತ್ರದ ಶಾಸಕ ಪಿ.ಬಿ.ಅಬ್ದುರ್ರಝಾಕ್, ಬಜ್ಪೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯಲ್ಲಿ ಕೇರಳಿಗರ ಕೊಡುಗೆ ಅಪಾರ. ಮಂಗಳೂರು ವಿಮಾನ ನಿಲ್ದಾಣ ಸ್ಥಾಪನೆಯಾಗುವ ಮೊದಲು ವಿದೇಶದಲ್ಲಿರುವ ಕೇರಳಿಗರು ಮುಂಬೈ ಮೂಲಕ ಕೇರಳಕ್ಕೆ ಮರಳುತ್ತಿದ್ದರು. ಮಂಗಳೂರಿನಲ್ಲಿ ಪ್ರತ್ಯೇಕ ವಿಮಾನ ನಿಲ್ದಾಣ ನಿರ್ಮಾಣವಾದರೆ ಕೇರಳ, ಮಂಗಳೂರು ಮತ್ತು ಸುತ್ತಮುತ್ತ ಜಿಲ್ಲೆಗಳ ಜನರಿಗೆ ಅನುಕೂಲವಾಗಬಹುದು ಎಂಬ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಸ್ಥಾಪನೆಗೆ ಕೇರಳಿಗರು ಹಾಗೂ ಕರಾವಳಿಯ ಜನರು ಆಗ್ರಹಿಸಿದ್ದರು. ಇಷ್ಟೆಲ್ಲಾ ಪ್ರಯತ್ನದ ಹೊರತಾಗಿಯೂ ಇಲ್ಲಿನ ಅಧಿಕಾರಿಗಳ ವರ್ತನೆಯನ್ನು ಗಮನಿಸುವಾಗ ಬೇಸರವಾಗುತ್ತದೆ. ಎಮಿಗ್ರೇಶನ್, ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ವಿದೇಶದಿಂದ ಬರುವ ಯುವಕರಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ. ಇದು ನಿಲ್ಲಬೇಕು. ಒಂದು ವೇಳೆ ಅಧಿಕಾರಿಗಳ ವರ್ತನೆ ಹೀಗೆಯೇ ಮುಂದುವರಿದಲ್ಲಿ ಕೇರಳದ ಜನಪ್ರತಿನಿಧಿಗಳು ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಲೀಗ್‌ನ ಪ್ರಧಾನ ಕಾರ್ಯದರ್ಶಿ ಎ.ಕೆ.ಎಂ.ಅಶ್ರಫ್ ಮಾತನಾಡಿ, ಮಂಜೇಶ್ವರ ಮಂಗಳಪಾಡ ಪಂಚಾಯತ್ ವ್ಯಾಪ್ತಿಯ ಮುತ್ತಂ ಬಳಿಯ ನಿವಾಸಿ ಅಬ್ದುಲ್ ಖಾದರ್ ದುಬೈ ಹೋಗುತ್ತಿದ್ದ ಸಂದರ್ಭ ಇಲ್ಲಿನ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಯ ನೆಪದಲ್ಲಿ ಅವರ ಬಳಿ ಇದ್ದ ಟ್ಯಾಬ್‌ವೊಂದನ್ನು ವಶಕ್ಕೆ ಪಡೆದು ‘ಇದು ಸ್ಫೋಟಕ ವಸ್ತು’ ಎಂದು ಸತಾಯಿಸಿದ್ದಾರೆ. ಮಾತ್ರವಲ್ಲದೆ, ಅವರ ತಂದೆ ಸಹಿತ ಕುಟುಂಬಸ್ಥರನ್ನು ಕರೆಸಿ ಸುಮಾರು 24 ತಾಸುಗಳ ಕಾಲ ವಿಚಾರಣೆ ನಡೆಸಿ ಕೊನೆಗೆ ‘ಸಾರಿ’ (ತಪ್ಪಾಗಿದೆ) ಎಂದು ಹೇಳಿ ಕಳುಹಿಸಿಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವಿಮಾನ ನಿಲ್ದಾಣದಲ್ಲಿ ತಿಂಗಳ ಹಿಂದೆ ಕಾಸರಗೋಡು ತಳಂಗರೆಯ ನಿವಾಸಿ ಹಾಗೂ ರಣಜಿ ತಂಡದ ಆಟಗಾರ ಮುಹಮ್ಮದ್ ಅಝರುದ್ದೀನ್ ಕತರ್‌ಗೆ ತೆರುಳುತ್ತಿದ್ದ ಸಂದರ್ಭ ಎಮಿಗ್ರೇಶನ್ ಮತ್ತು ಕಸ್ಟಮ್ಸ್ ಅಧಿಕಾರಿಗಳು ಅವರ ವೀಸಾ ನಕಲಿ ಎಂದು ಹೇಳಿ ಸುಮಾರು 6 ಗಂಟೆಗಳ ಕಾಲ ಕಿರುಕುಳ ನೀಡಿ ಅನಂತರ ಕ್ಷಮೆಯಾಚಿಸಿದ್ದಾರೆೆ ಎಂದವರು ಹೇಳಿದರು.

ಬಳಿಕ ಶಾಸಕ ಅಬ್ದುರ್ರಝಾಕ್ ನೇತೃತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಜೆ.ಟಿ.ರಾಧಾಕೃಷ್ಣನ್‌ರಿಗೆ ಮನವಿ ಸಲ್ಲಿಸಲಾಯಿತು.

ಧರಣಿಯಲ್ಲಿ ಯೂತ್ ಲೀಗ್‌ನ ಕಾಸರಗೋಡು ಜಿಲ್ಲಾಧ್ಯಕ್ಷ ಮೊದಿನ್ ಕೊಲ್ಲಂಬಾಡಿ, ಪ್ರಧಾನ ಕಾರ್ಯದರ್ಶಿ ಎ.ಕೆ.ಎಂ.ಅಶ್ರಫ್, ಉಪಾಧ್ಯಕ್ಷರಾದ ಮುಹಮ್ಮದ್ ಕುಂಞಿ, ಯೂಸುಫ್ ಉಳುವಾರ್, ಕಾರ್ಯದರ್ಶಿಗಳಾದ ಅಶ್ರಫ್ ಎಡನೀರ್, ಟಿ.ಎಸ್.ನಜೀಬ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X