Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿವಾದ ಜೈಲಿಗೆ ಹೋಗಲು ರೆಡಿ ದಂಡ...

ವಿವಾದ ಜೈಲಿಗೆ ಹೋಗಲು ರೆಡಿ ದಂಡ ಪಾವತಿಸಲ್ಲ: ರವಿಶಂಕರ್

ವಿಶ್ವ ಸಂಸ್ಕೃತಿ ಉತ್ಸವ

ವಾರ್ತಾಭಾರತಿವಾರ್ತಾಭಾರತಿ10 March 2016 11:51 PM IST
share
ವಿವಾದ ಜೈಲಿಗೆ ಹೋಗಲು ರೆಡಿ ದಂಡ ಪಾವತಿಸಲ್ಲ: ರವಿಶಂಕರ್

ಹೊಸದಿಲ್ಲಿ, ಮಾ.10: ತಾನೇನೂ ತಪ್ಪು ಮಾಡಿಲ್ಲ. ತಾನು ಕಾರಾಗೃಹಕ್ಕೆ ಹೋಗುವೆನೆಯೇ ವಿನಾ ಒಂದು ಪೈಸೆ ದಂಡ ಕಟ್ಟುವುದಿಲ್ಲ ಎಂದು ವಿಶ್ವಾದ್ಯಂತ ಅನುಯಾಯಿಗಳನ್ನು ಹೊಂದಿರುವ ಆಧ್ಯಾತ್ಮಿಕ ಗುರು ರವಿಶಂಕರ್ ಇಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

59ರ ಹರೆಯದ ಅವರು, ಪರಿಸರ ಕಳವಳದ ನಡುವೆ ದಿಲ್ಲಿಯ ಯಮುನಾ ತೀರದಲ್ಲಿ ನಾಳೆ ಆರಂಭವಾಗಲಿರುವ ಬೃಹತ್ ವಿಶ್ವ ಸಂಸ್ಕೃತಿ ಉತ್ಸವಕ್ಕೆ ಮುನ್ನ ರೂ. 5 ಕೋಟಿ ದಂಡವನ್ನು ಠೇವಣಿಯಿರಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ನೀಡಿರುವ ಆದೇಶದ ಕುರಿತು ಪ್ರತಿಕ್ರಿಯಿಸುತ್ತಿದ್ದರು.

ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನದ ಮುಖ್ಯಸ್ಥ ರವಿಶಂಕರ್, ಮೂರು ದಿನಗಳ ಈ ಕಾರ್ಯಕ್ರಮವನ್ನು ‘ವಿಶ್ವ ಸಂಸ್ಕೃತಿ ಉತ್ಸವ’ ಎಂದು ಘೋಷಿಸಿದ್ದಾರೆ.

7 ಎಕರೆ ವಿಸ್ತಾರದ ವೇದಿಕೆ, ನದಿಯ ಮೇಲಿನ ತಾತ್ಕಾಲಿಕ ತೇಲು ಸೇತುವೆಗಳು ಹಾಗೂ ಲಕ್ಷಾಂತರ ಜನರ ಸೇರುವಿಕೆಯಿಂದ ಪ್ರದೇಶದ ಸೂಕ್ಷ್ಮ ಜೈವಿಕ ವ್ಯವಸ್ಥೆಗೆ ಹಾನಿಯಾಗಬಹುದೆಂದು ಪರಿಸರವಾದಿಗಳು ನ್ಯಾಯಾಧಿಕರಣದ ಮುಂದೆ ಆರೋಪಿಸಿದ್ದರು. ಆದರೆ, ರವಿಶಂಕರ್ ಇದನ್ನು ನಿರಾಕರಿಸಿದ್ದಾರೆ.

ಸಮಾರಂಭದ ಬಳಿಕ ತನ್ನ ಸ್ವಯಂ ಸೇವಕರು ನೆರೆ ಬಯಲಿನಲ್ಲಿ ಬಯೋ ಡೈವರ್ಸಿಟಿ ಪಾರ್ಕ್ ಒಂದನ್ನು ನಿರ್ಮಿಸಬಹುದು. ಅದನ್ನು ತಾವೇ ಮಾಡಬಯಸಿದ್ದೇವೆ ಹೊರತು ಅದು ನ್ಯಾಯಾಲಯದ ತೀರ್ಪಿನ ಭಾಗವಾಗಿಲ್ಲ ಎಂದಿದ್ದಾರೆ.

ತಾನು ಆದೇಶಿಸಿರುವ ರೂ. 5 ಕೋಟಿ ದಂಡದ ಹಿಂದೆಯೇ ತನ್ನ ತಜ್ಞರು ಸಿದ್ಧಪಡಿಸಿರುವ ಇನ್ನೂ ದೊಡ್ಡ ಬಿಲ್ ಖಂಡಿತ ಬರುತ್ತದೆಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಎಚ್ಚರಿಸಿದೆ.

ಕಾರ್ಯಕ್ರಮ ಸನಿಹದಲ್ಲಿರುವಾಗ ತಮಗೆ ಅಲ್ಲಿಂದ ಹೊರ ನಡೆಯಲು ಹೇಳುವುದು ನ್ಯಾಯೋಚಿತವಲ್ಲ. ಸಮಾರಂಭಕ್ಕಾಗಿ ಸೇನೆಯು ತೇಲು ಸೇತುವೆಗಳನ್ನು ನಿರ್ಮಿಸಿರುವುದು ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ತನಗೆ ಸಂಬಂಧವಿದೆಯೆಂಬ ಭಾವನೆಯ ಸೂಚನೆಯಲ್ಲ. ಲಕ್ಷಾಂತರ ಜನರು ಆಗಮಿಸುತ್ತಿರುವಾಗ ಇದನ್ನು ಖಾಸಗಿ ಕಾರ್ಯಕ್ರಮವೆಂದು ಪರಿಗಣಿಸಲು ಹೇಗೆ ಸಾಧ್ಯ? ಇದು ಕುಂಭಮೇಳವಾಗಿರುತ್ತಿದ್ದರೆ, ಸಹಾಯಕ್ಕೆ ಸೇನೆಯನ್ನು ಉಪಯೋಗಿಸುತ್ತಿರಲಿಲ್ಲವೇ? ಎಂದು ರವಿಶಂಕರ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X