Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 2016ಕ್ಕೆ ಭಾರತ ಹಜ್ ಕೋಟ 1,36,020

2016ಕ್ಕೆ ಭಾರತ ಹಜ್ ಕೋಟ 1,36,020

ಒಪ್ಪಂದಕ್ಕೆ ಭಾರತ-ಸೌದಿ ಸಹಿ

ವಾರ್ತಾಭಾರತಿವಾರ್ತಾಭಾರತಿ11 March 2016 7:02 PM IST
share
2016ಕ್ಕೆ ಭಾರತ ಹಜ್ ಕೋಟ 1,36,020

ಜಿದ್ದಾ, ಮಾ. 11: ಈ ವರ್ಷ ಭಾರತೀಯರ ಹಜ್ ಕೋಟವನ್ನು 1,36,020ಕ್ಕೆ ನಿಗದಿಪಡಿಸುವ ಒಪ್ಪಂದವೊಂದಕ್ಕೆ ಸೌದಿ ಅರೇಬಿಯ ಮತ್ತು ಭಾರತ ಗುರುವಾರ ಸಹಿ ಹಾಕಿವೆ.

ಈ ಪೈಕಿ 1,00,020 ಯಾತ್ರಿಕರು ಭಾರತೀಯ ಹಜ್ ಸಮಿತಿ ಮೂಲಕ ಬರುತ್ತಾರೆ ಹಾಗೂ ಇತರ 36,000 ಮಂದಿ ಖಾಸಗಿ ಪ್ರವಾಸ ನಿರ್ವಾಹಕರ ಮೂಲಕ ಯಾತ್ರೆ ಕೈಗೊಳ್ಳುತ್ತಾರೆ.

ವಿದೇಶಾಂಗ ವ್ಯವಹಾರಗಳ ಖಾತೆಯ ಸಹಾಯಕ ಸಚಿವ ಜನರಲ್ ವಿ.ಕೆ. ಸಿಂಗ್ ನೇತೃತ್ವದ ಉನ್ನತ ಮಟ್ಟದ ನಿಯೋಗವೊಂದು ಗುರುವಾರ ಜಿದ್ದಾದಲ್ಲಿ ಅಲ್ಲಿನ ಹಜ್ ಸಚಿವ ಬಂದಾರ್ ಹಜ್ಜರ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿತು.

ಭಾರತೀಯ ನಿಯೋಗದಲ್ಲಿ ಸೌದಿ ಅರೇಬಿಯಕ್ಕೆ ಭಾರತದ ರಾಯಭಾರಿ ಅಹ್ಮದ್ ಜಾವೇದ್, ಕಾನ್ಸುಲ್ ಜನರಲ್ ಬಿ.ಎಸ್. ಮುಬಾರಕ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಹಜ್ ವಿಶೇಷಾಧಿಕಾರಿಯಾಗಿರುವ ಅಸೀಮ್ ಮಹಾಜನ್ ಭಾರತೀಯ ನಿಯೋಗದಲ್ಲಿದ್ದರು.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ರಾಕೇಶ್ ಮೋಹನ್,ಭಾರತೀಯ ಹಜ್ ಸಮಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅತಾವುರ್ ರಹಮಾನ್, ನಾಗರಿಕ ವಾಯುಯಾನ ಸಚಿವಾಲಯದ ನಿರ್ದೇಶಕಿ ಪೂಜಾ ಜಿಂದಾಲ್, ಉಪ ಕಾನ್ಸುಲ್ ಜನರಲ್ ಹಾಗೂ ಹಜ್ ಕಾನ್ಸುಲ್ ಮುಹಮ್ಮದ್ ಶಾಹಿದ್ ಅಲಂ ಅವರು ನಿಯೋಗದ ಸದಸ್ಯರಾಗಿದ್ದರು.

ಸೌದಿ ನಿಯೋಗದಲ್ಲಿ ಉಪ ಹಜ್ ಸಚಿವ ಹುಸೈನ್ ಶರೀಫ್, ಉಪ ಸಾರಿಗೆ ಸಚಿವ ಮುಹಮ್ಮದ್ ಸಿಮ್‌ಸಿಮ್, ಉಪ ಆಂತರಿಕ ವ್ಯವಹಾರಗಳ ಸಚಿವ ರಾಜಕುಮಾರ ಮನ್ಸೂರ್ ಬಿನ್ ಮುಹಮ್ಮದ್ ಬಿನ್ ಸಅದ್ ಅಲ್-ಸೌದ್ ಹಾಗೂ ಇತರ ಅಧಿಕಾರಿಗಳು ಇದ್ದರು.

ಮಕ್ಕಾ ಮಸೀದಿ ಮಸ್ಜಿದುಲ್ ಹರಂನ ವಿಸ್ತರಣೆ ಕಾರ್ಯ ಈಗ ಪ್ರಗತಿಯಲ್ಲಿರುವುದರಿಂದ ಸೌದಿ ಅರೇಬಿಯವು ಈ ವರ್ಷ ಎಲ್ಲ ದೇಶಗಳ ಹಜ್ ಕೋಟವನ್ನು 20 ಶೇಕಡದಷ್ಟು ಕಡಿತಗೊಳಿಸಿದೆ. ಈ ಕಡಿತ ಸೌದಿ ಅರೇಬಿಯ ಮತ್ತು ಕೊಲ್ಲಿ ಸಹಕಾರ ಮಂಡಳಿ (ಜಿಸಿಸಿ)ಯ ದೇಶಗಳಿಗೆ 50 ಶೇಕಡದಷ್ಟು ಆಗಿರುತ್ತದೆ.
 ಈ ಸಂದರ್ಭದಲ್ಲಿ, ಸೌದಿ ಮತ್ತು ಭಾರತೀಯ ಅಧಿಕಾರಿಗಳು, ಯಾತ್ರಿಕರಿಗೆ ಉತ್ತಮ ಆಹಾರ ಪೂರೈಕೆ ಸೇವೆಯೊದಗಿಸುವುದು ಸೇರಿದಂತೆ ವಿವಿಧ ಹಜ್ ಸಂಬಂಧಿ ವಿಷಯಗಳ ಬಗ್ಗೆ ಚರ್ಚಿಸಿದರು. ಹಜ್ 1437ಕ್ಕಾಗಿ ನಿಕಟ ಸಮನ್ವಯದಿಂದ ಕೆಲಸ ಮಾಡಲು ಉಭಯ ಬಣಗಳು ಒಪ್ಪಿಕೊಂಡವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X