Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದಕ್ಷಿಣ ಸುಡಾನ್: ಅತ್ಯಾಚಾರಕ್ಕೆ ಅವಕಾಶವೇ...

ದಕ್ಷಿಣ ಸುಡಾನ್: ಅತ್ಯಾಚಾರಕ್ಕೆ ಅವಕಾಶವೇ ಸೈನಿಕರಿಗೆ ಸಂಬಳ

ಭೀಕರ ಪರಿಸ್ಥಿತಿಯ ಬಗ್ಗೆ ವಿಶ್ವಸಂಸ್ಥೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ11 March 2016 7:51 PM IST
share
ದಕ್ಷಿಣ ಸುಡಾನ್: ಅತ್ಯಾಚಾರಕ್ಕೆ ಅವಕಾಶವೇ ಸೈನಿಕರಿಗೆ ಸಂಬಳ

ಜಿನೇವ, ಮಾ. 11: ದಕ್ಷಿಣ ಸುಡಾನ್‌ನಲ್ಲಿ ಜಗತ್ತಿನಲ್ಲೇ ಭಯಾನಕ ಮಾನವಹಕ್ಕುಗಳ ಉಲ್ಲಂಘನೆ ಕೃತ್ಯಗಳು ನಡೆಯುತ್ತಿದ್ದು, ಈ ದೇಶವು ಸಂಬಳದ ಬದಲಿಗೆ ತನ್ನ ಸೈನಿಕರನ್ನು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲು ಬಿಡುತ್ತಿದೆ ಎಂದು ವಿಶ್ವಸಂಸ್ಥೆಯ ಮಾನವಹಕ್ಕುಗಳ ಕಚೇರಿ ಶುಕ್ರವಾರ ಹೇಳಿದೆ.
‘‘ದಕ್ಷಿಣ ಸುಡಾನ್‌ನ ಸೇನೆಗೆ ಪೂರಕವಾಗಿ ದಾಳಿಗಳನ್ನು ನಡೆಸುತ್ತಿರುವ ಸಶಸ್ತ್ರ ಹೋರಾಟಗಾರರು ಮಾನವಹಕ್ಕು ಉಲ್ಲಂಘನೆಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿಯನ್ನು ನಮ್ಮ ವೀಕ್ಷಣಾ ತಂಡ ಪಡೆದುಕೊಂಡಿದೆ. ಈ ಸಂಬಂಧ ಈ ಹೋರಾಟಗಾರರು ಸರಕಾರದೊಂದಿಗೆ ‘ಏನು ಸಾಧ್ಯವೋ ಅದನ್ನು ಮಾಡಿ ಹಾಗೂ ಏನು ಸಾಧ್ಯವೋ ಅದನ್ನು ಪಡೆಯಿರಿ’ ಎಂಬ ಒಪ್ಪಂದವನ್ನು ಹೊಂದಿದ್ದಾರೆ’’ ಎಂದು ನೂತನ ವರದಿಯಲ್ಲಿ ಮಾನವಹಕ್ಕುಗಳ ಸಂಸ್ಥೆ ಹೇಳಿದೆ.

‘‘ಹಾಗಾಗಿ, ಹೆಚ್ಚಿನ ಯುವಕರು ತಮ್ಮ ಸಂಬಳವಾಗಿ ಆಕಳುಗಳು ಮತ್ತು ಇತರ ಸೊತ್ತುಗಳನ್ನು ಕದಿಯುತ್ತಿದ್ದಾರೆ ಹಾಗೂ ಮಹಿಳೆಯರು ಮತ್ತು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ನಡೆಸುತ್ತಿದ್ದಾರೆ’’ ಎಂದು ವರದಿ ಹೇಳಿದೆ.

ಪ್ರತಿಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬುದಾಗಿ ಶಂಕಿಸಲಾದ ನಾಗರಿಕರನ್ನು ಜೀವಂತ ಸುಡಲಾಗುತ್ತಿದೆ, ಹಡಗುಗಳ ಕಂಟೇನರ್‌ಗಳಲ್ಲಿ ಹಾಕಿ ಉಸಿರುಗಟ್ಟಿಸಲಾಗುತ್ತಿದೆ, ಮರಕ್ಕೆ ನೇತು ಹಾಕಲಾಗುತ್ತಿದೆ ಹಾಗೂ ತುಂಡು ತುಂಡಾಗಿ ಕತ್ತರಿಸಲಾಗುತ್ತಿದೆ ಎಂಬ ಭಯಾನಕ ಚಿತ್ರಣವನ್ನು ವರದಿ ಮುಂದಿಟ್ಟಿದೆ. ಇಂಥ ಅಮಾನುಷ ಕ್ರೌರ್ಯಕ್ಕೆ ಒಳಗಾದವರಲ್ಲಿ ಮಕ್ಕಳು ಸೇರಿದ್ದಾರೆ ಎಂದಿದೆ.

ಯುದ್ಧಾಸ್ತ್ರವಾಗಿ ಮಹಿಳೆಯರ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಲಾಗುತ್ತಿದೆ ಎಂಬುದಾಗಿಯೂ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮುಖ್ಯಸ್ಥ ಝಾಯಿದ್ ರಅದ್ ಅಲ್ ಹುಸೈನ್ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X