Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಂಡ ಪಾವತಿಸಲು ಕಾಲಾವಕಾಶ ಕೋರಿದ...

ದಂಡ ಪಾವತಿಸಲು ಕಾಲಾವಕಾಶ ಕೋರಿದ ರವಿಶಂಕರ್ ಗುರೂಜಿ

ವಿಶ್ವ ಸಂಸ್ಕೃತಿ ಉತ್ಸವ ವಿವಾದ

ವಾರ್ತಾಭಾರತಿವಾರ್ತಾಭಾರತಿ11 March 2016 11:50 PM IST
share
ದಂಡ ಪಾವತಿಸಲು ಕಾಲಾವಕಾಶ ಕೋರಿದ ರವಿಶಂಕರ್ ಗುರೂಜಿ

ಹೊಸದಿಲ್ಲಿ, ಮಾ.11: ದಿಲ್ಲಿಯ ಯಮುನಾ ತೀರದಲ್ಲಿ ಇಂದು ವಿಶ್ವ ಸಂಸ್ಕೃತಿ ಉತ್ಸವ ಆರಂಭಕ್ಕೆ ಮೊದಲು ಭಾರತದ ಅತ್ಯುನ್ನತ ಪರಿಸರ ನ್ಯಾಯಾಲಯವು (ಎನ್‌ಜಿಟಿ) ಆದೇಶಿಸಿರುವ ರೂ. 5 ಕೋಟಿ ದಂಡವನ್ನು ಪಾವತಿಸಲು ತನ್ನಿಂದ ಸಾಧ್ಯವಾಗದೆಂದು ಆಧ್ಯಾತ್ಮ ಗುರು ಶ್ರೀ ಶ್ರೀ ರವಿಶಂಕರ್‌ರ ಸಂಘಟನೆಯಿಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ತಿಳಿಸಿದೆ.

ಪ್ರಾಥಮಿಕ ಠೇವಣಿಯೆಂದು ರೂ. 25 ಲಕ್ಷ ಇಂದು ಪಾವತಿಸಲಾಗುವುದು. ಉಳಿದ ಹಣವನ್ನು 3 ವಾರಗಳೊಳಗೆ ನೀಡಲಾಗುವುದೆಂದು ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನ ಹೇಳಿದೆ. ಆದಾಗ್ಯೂ, ಯಮುನಾ ನದಿಯ ನೆರೆ ಬಯಲಿನ 1 ಸಾವಿರ ಎಕರೆ ಪ್ರದೇಶದಲ್ಲಿ ತಾವು ನಿರ್ಮಿಸ ಬಯಸಿರುವ ಬಯೋಡೈವರ್ಸಿಟಿ ಪಾರ್ಕ್‌ನ ನಿರ್ಮಾಣ ವೆಚ್ಚಕ್ಕೆ ಈ ರೂ. 5 ಕೋಟಿಯ ಪಾವತಿಯು ಸಲ್ಲಬೇಕೆಂದು ಸಂಘಟಕರು ಆಗ್ರಹಿಸಿದ್ದಾರೆ.

ತಾವು ಜೈಲಿಗೆ ಹೋಗಲು ಸಿದ್ಧರೇ ವಿನಾ ಒಂದು ಪೈಸೆ ದಂಡ ಪಾವತಿಸುವುದಿಲ್ಲ. ತಾವೇನೂ ತಪ್ಪು ಮಾಡಿಲ್ಲವೆಂದು ನಿನ್ನೆ 59ರ ಹರೆಯದ ರವಿಶಂಕರ್ ಹೇಳಿದ್ದರು. ಆದರೆ, ಅಂತಹ ಹೇಳಿಕೆಯನ್ನು ಶ್ರೀ ಶ್ರೀಯವರಂತಹ ಸ್ಥಾನಮಾನದ ವ್ಯಕ್ತಿಯಿಂದ ತಾನು ನಿರೀಕ್ಷಿಸಿರಲಿಲ್ಲವೆಂದು ನ್ಯಾಯಾಲಯ ಪ್ರತಿಕ್ರಿಯಿಸಿತು.

ವೇದಿಕೆಯ ಸೂಕ್ಷ್ಮ ಜೈವಿಕ ವ್ಯವಸ್ಥೆಯನ್ನು ರಕ್ಷಿಸಲು ವಿಫಲವಾದುದಕ್ಕಾಗಿ ಬುಧವಾರ ನ್ಯಾಯಾಧಿಕರಣವು ಸಂಘಟಕರು ಹಾಗೂ ಸರಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬಳಿಕ ಅದು ರೂ. 5 ಕೋಟಿ ದಂಡ ಪಾವತಿಸುವಂತೆ ಆದೇಶಿಸಿ, ಮುಂದೆ ಇನ್ನಷ್ಟು ತೆರಬೇಕಾಗುವುದೆಂಬ ಎಚ್ಚರಿಕೆ ನೀಡಿತ್ತು. ಉತ್ಸವ ಮುಗಿದ ಬಳಿಕ ಉದ್ಯಾನವನ ನಿರ್ಮಿಸಲೇಬೇಕೆಂದು ನ್ಯಾಯಾಧಿಕರಣ ತಾಕೀತು ಮಾಡಿತ್ತು.

ಇನ್ನೀಗ, ಆರ್ಟ್ ಆಫ್ ಲಿವಿಂಗ್ ನ್ಯಾಯಾಲಯಕ್ಕೆ ಕನಿಷ್ಠ ರೂ. 4.75 ಕೋಟಿಗಳನ್ನಾದರೂ ಪಾವತಿಸಲೇಬೇಕಾಗುತ್ತದೆ. ಅದನ್ನು ಕೊಡದಿದ್ದಲ್ಲಿ, ಪ್ರತಿಷ್ಠಾನಕ್ಕೆ ಸಂಸ್ಕೃತಿ ಸಚಿವಾಲಯ ಮಂಜೂರು ಮಾಡಿರುವ ರೂ. 2.5 ಕೋಟಿ ಅನುದಾನದ ಭಾಗ ವನ್ನು ತಾನು ಸಂಗ್ರಹಿಸುವೆನೆಂದು ನ್ಯಾಯಾಧಿಕರಣ ಹೇಳಿದೆ.

ಇಲ್ಲಿ ಯಾವುದೇ ವಿವಾದವಿಲ್ಲ. ರವಿ ಶಂಕರ್ ವಿವಾದ ಗಳನ್ನು ಪರಿಹರಿಸುವುದಕ್ಕೆ ಹೆಸರುವಾಸಿ ಯಾದವರೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X