Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ. 97ರಷ್ಟು ಪ್ರೌಢರಲ್ಲಿ ಆಧಾರ್:...

ಶೇ. 97ರಷ್ಟು ಪ್ರೌಢರಲ್ಲಿ ಆಧಾರ್: ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ11 March 2016 11:53 PM IST
share
ಶೇ. 97ರಷ್ಟು ಪ್ರೌಢರಲ್ಲಿ ಆಧಾರ್: ಜೇಟ್ಲಿ

ಹೊಸದಿಲ್ಲಿ, ಮಾ.11: ಭಾರತದ ಶೇ. 97ರಷ್ಟು ಪ್ರೌಢರು ಈಗ ಆಧಾರ್ ಕಾರ್ಡ್ ಪಡೆದಿದ್ದಾರೆ. ತಾನು ಲೋಕಸಭೆಯಲ್ಲಿ ಮಂಡಿಸಿರುವ ಮಸೂದೆಯು, ಸರಕಾರದ ಸಬ್ಸಿಡಿಗಳು ಹಾಗೂ ಸೇವೆಗಳು ಸಂಪೂರ್ಣವಾಗಿ ಹಾಗೂ ನೇರವಾಗಿ ಫಲಾನುಭವಿಗಳಿಗೆ ತಲುಪುವಂತೆ ದೂರಗಾಮಿಯಾಗಿ ಖಚಿತಪಡಿಸಲಿದೆಯೆಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇಂದು ಹೇಳಿದ್ದಾರೆ.

ಆಧಾರ್ (ಆರ್ಥಿಕ ಮತ್ತಿತರ ಸಬ್ಸಿಡಿಗಳು, ಲಾಭಗಳು ಹಾಗೂ ಸೇವೆಗಳ ಪೂರೈಕೆ ಗುರಿ) ಮಸೂದೆ-2016ರ ಮೇಲೆ ಚರ್ಚೆಗೆ ಚಾಲನೆ ನೀಡಿದ ಅವರು, ಆಧಾರ್ ಕಾರ್ಡ್‌ಗೆ ಒದಗಿಸಲಾಗಿರುವ ವ್ಯಕ್ತಿಗತ ವಿವರಗಳು ಯಾವುದೇ ರೀತಿಯೂ ದುರುಪಯೋಗವಾಗಲಾರದೆಂದು ಸದಸ್ಯರಿಗೆ ಭರವಸೆ ನಿಡಿದರು.
ಈ ಮಸೂದೆಯನ್ನು ಜೇಟ್ಲಿ, ಮಾ.3ರಂದು ಲೋಕಸಭೆಯಲ್ಲಿ ಮಂಡಿಸಿದ್ದರು.
ಭಾರತದಲ್ಲಿ ವಾಸಿಸುತ್ತಿರುವವರಿಗೆ ಆಧಾರ್ ಎಂದು ಕರೆಯಲ್ಪಡುವ ವಿಶಿಷ್ಟ ಗುರುತು ಸಂಖ್ಯೆಗೆ ಸಂಯೋಜಿಸುವ ಮೂಲಕ ಸೇವೆಗಳನ್ನು ಒದಗಿಸಲು ಸರಕಾರಕ್ಕೆ ಕಾನೂನಿನ ಬಲ ನೀಡಲು ಈ ಮಸೂದೆ ಉದ್ದೇಶಿಸಿದೆ. ಅರ್ಜಿ ಸಲ್ಲಿಸುವ ದಿನಾಂಕದ ಹಿಂದಿನ ಒಂದು ವರ್ಷದಲ್ಲಿ 182 ದಿನಗಳ ಕಾಲ ಭಾರತದಲ್ಲಿ ವಾಸಿಸಿರುವ ಪ್ರತಿಯೊಬ್ಬನಿಗೂ ಆಧಾರ್ ಕಾರ್ಡ್ ನೀಡಲಾಗುವುದು.
ಕಾಂಗ್ರೆಸ್‌ನ ವಿರೋಧದ ನಡುವೆಯೂ ಜೇಟ್ಲಿ, ಅದನ್ನು ಆರ್ಥಿಕ ಮಸೂದೆಯನ್ನಾಗಿ ಪರಿವರ್ತಿಸುವ ಕ್ರಮವನ್ನು ಸಮರ್ಥಿಸಿಕೊಂಡರು. 2010ರಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಪ್ರಾಯೋಗಿಕವಾಗಿ ಮಂಡಿಸಿದ್ದ ಹಿಂದಿನ ಮಸೂದೆ, ಅದನ್ನು ಆರ್ಥಿಕ ಮಸೂದೆ ಎಂದಿರಲಿಲ್ಲವೆಂದು ಲೋಕಸಭೆಯಲ್ಲಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪಿಸಿದರು.
ಆಳುವ ಮೈತ್ರಿಕೂಟ ಬಹುಮತ ಹೊಂದಿರದ ರಾಜ್ಯಸಭೆಯಲ್ಲಿ ಕರಡು ಮಸೂದೆಗೆ ಆತಂಕ ಉಂಟಾಗಬಹುದೆಂಬ ಶಂಕೆಯಿಂದ ಸರಕಾರ ಅದನ್ನು ಆರ್ಥಿಕ ಮಸೂದೆಯೆಂದು ಕರೆಯಬಯಸಿದೆಯೆಂದು ಅವರು ಆರೋಪಿಸಿದರು.
ಆದರೆ ಹೊಸ ಮಸೂದೆಯು, 2010ರಲ್ಲಿ ಮನಮೋಹನ್ ಸಿಂಗ್ ಸರಕಾರ ಮಂಡಿಸಿದ ಮಸೂದೆಯಂತಿಲ್ಲ. ಇದು ಸರಕಾರವು ಫಲಾ ನುಭವಿಗಳಿಗಾಗಿ ಖರ್ಚು ಮಾಡುವ ಹಣದ ಮೇಲೆ ಪ್ರಧಾನವಾಗಿ ದೃಷ್ಟಿ ಕೇಂದ್ರೀ ಕರಿಸಿದೆಯೇ ಹೊರತು, ಕೇವಲ ಗುರುತು ದಾಖಲೆ ಯಂತಲ್ಲವೆಂದು ಜೇಟ್ಲಿ ಹೇಳಿದರು.

ಈ ಮಸೂದೆ ಒಂದು ಪ್ರಾಥಮಿಕ ದೃಷ್ಟಿಯುಳ್ಳದ್ದಾಗಿದೆ. ಅದೆಂದರೆ- ಯಾರೂ ಭಾರತದ ನಿಧಿಯಿಂದ- ಅದು ರಾಜ್ಯ ಸರಕಾರ ಗಳಿರಬಹುದು, ಕೇಂದ್ರ ಸರಕಾರವಿರಬಹುದು ಅಥವಾ ಇತರ ಸಂಸ್ಥೆ ಗಳಿರಬಹುದು ಲಾಭವನ್ನು ಪಡೆಯುವ ಯಾರೇ ಆಗಲಿ, ಆಧಾರ್ ಕಾರ್ಡ್ ಹೊಂದಲು ಅರ್ಹನಿರುತ್ತಾನೆ ಎಂದವರು ತಿಳಿಸಿದರು.
ಶೇ.67ರಷ್ಟು ಮಕ್ಕಳು ಸಹ ಆಧಾರ್ ಕಾರ್ಡ್ ಪಡೆದಿದ್ದು, ಪ್ರತೀ ನಿತ್ಯ 5-7 ಲಕ್ಷ ಜನರು ಈ ವ್ಯವಸ್ಥೆಗೆ ಸೇರ್ಪಡೆಯಾಗುತ್ತಿದ್ದಾರೆಂದು ಜೇಟ್ಲಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X