Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ನಾಗಯಕ್ಷೆ ಸಭಾಭವನದಲ್ಲಿ ಮಹಿಳಾ...

ಭಟ್ಕಳ: ನಾಗಯಕ್ಷೆ ಸಭಾಭವನದಲ್ಲಿ ಮಹಿಳಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ12 March 2016 7:25 PM IST
share
ಭಟ್ಕಳ: ನಾಗಯಕ್ಷೆ ಸಭಾಭವನದಲ್ಲಿ ಮಹಿಳಾ ದಿನಾಚರಣೆ

ಭಟ್ಕಳ: ಇಲ್ಲಿನ ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾ ಭವನದಲ್ಲಿ ಎರ್ಪಡಿಸಲಾಗಿದ್ದ ಮಹಿಳಾ ದಿನಾಚರಣೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಶ್ರೀದೇವಿ ಎಂ ಭಟ್ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಸಂಜೀವಿನಿ ಸಮಾಜ ಸೇವಾ ಸಂಸ್ಥೆ, ತಾಲೂಕಾ ಮಹಿಳಾ ಸ್ವ ಸಹಾಯ ಸಂಘ, ಮೇಘಶ್ರೀ ಸಂಘ ಮಂಕಿ, ಸಿ.ಡಿ.ಪಿ.ಓ. ಇಲಾಖೆ, ಅರ್ಬನ್ ಬ್ಯಾಂಕ್, ಪಿ.ಎಲ್.ಡಿ. ಬ್ಯಾಂಕ್, ಜನತಾ ಸಹಕಾರಿ ಪತ್ತಿನ ಸಂಘ, ಕೆ.ವಿ.ಜಿ. ಬ್ಯಾಂಕ್, ರೋಟರಿ ಕ್ಲಬ್, ಕೃಷಿ, ತೋಟಗಾರಿಕೆ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಎರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹಾಯಕ ಸರಕಾರಿ ಅಭಿಯೋಜಕಿ ಇಂದಿರಾ ನಾಯ್ಕ ಮಾತನಾಡಿ ಕಳೆದ 16 ವರ್ಷಗಳಿಂದ ಮಹಿಳಾ ಸಂಘಟನೆಯನ್ನು ಮಾಡುತ್ತಾ ನಿರಂತರವಾಗಿ ಮಹಿಳೆಯರ ಕುರಿತು ಚಿಂತಿಸುವ ಸುಮಾವತಿ ಶೆಟ್ಟಿಯವರ ಶ್ರಮ ಸಾರ್ಥಕವಾಗಿದೆ. ಮಹಿಳಾ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುತ್ತಿದ್ದು ಸ್ವ ಸಹಾಯ ಸಂಘಗಳ ಉದ್ಘಾಟನೆ ಕೂಡಾ ನೆರವೇರಿಸಿರುವುದು ಸಂತಸ ತಂದಿದೆ ಎಂದರು. ಮಹಿಳೆಯರ ಜೊತೆ ಸದಾ ತಾವು ಸ್ಪಂಧಿಸುವುದಾಗಿ ಭರವಸೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ರಾಜ್ಯ ಉಪಾಧ್ಯಕ್ಷ ಈಶ್ವರ ಎನ್. ನಾಯ್ಕ ನೂತನ ಸ್ವ ಸಹಾಯ ಸಂಘಗಳನ್ನು ಉದ್ಘಾಟಿಸಿ ಮಾತನಾಡಿ ಸ್ವ ಸಹಾಯ ಸಂಘಗಳ ಚಟುವಟಿಕೆಗಳು ಆರ್ಥಿಕವಾಗಿ ಆಶಾದಾಯಕ ಭರವಸೆಯನ್ನು ಮೂಡಿಸಿದ್ದು ಉತ್ತಮ ಬೆಳವಣಿಗೆಯಾಗಿದೆ. ಸ್ವ ಸಹಾಯ ಸಂಘಗಳನ್ನು ಉದ್ಘಾಟಿಸಲು ಸಂತಸವಾಗಿದ್ದು ಮುಂದೆಯೂ ಕೂಢಾ ಸ್ವ ಸಹಾಯ ಸಂಘಗಳ ಎಲ್ಲ ಚಟುವಟಿಕೆಗಳಿಗೆ ಸಹಾಯಕ್ಕೆ ಸದಾ ಸಿದ್ಧನಿದ್ದೇನೆ ಎಂದೂ ಹೇಳಿದರು. ಶ್ರೀ ನಾಗಯಕ್ಷೆ ಧರ್ಮದೇವಿ ಸಂಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಾಮದಾಸ ಪ್ರಭು ಇವರು ಮಾತನಾಡಿ ಮಹಿಳಾ ದಿನಾಚರಣೆ ಈ ಬಾರಿ ಶಿವರಾತ್ರಿ ಹಬ್ಬದಂದು ಬಂದಿದೆ. ನಿಜವಾಗಿಯೂ ಮಹಿಳೆಯರು ಶಿವರಾತ್ರಿ ಹಬ್ಬವನ್ನು ಆಚರಿಸಿದಂತಾಗಿದೆ ಎಂದರು. ಹೈನುಗಾರಿಕೆ ಮಾಡಲು ಇಚ್ಚಿಸುವವರು ಶೇ.4ರ ಬಡ್ಡಿ ದರದಲ್ಲಿ ಸಾಲವನ್ನು ತೆಗೆದುಕೊಂಡು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಉನ್ನತಗೊಳಿಸಿ ಹಾಗೂ ಈ ಸೌಲಭ್ಯ ಕಾರ್ಪೋರೇಶನ್ ಬ್ಯಾಂಕಿನಲ್ಲಿ ಲಭ್ಯವಿದ್ದು ಅರ್ಹರು ಪಡೆಯಲು ಸಹಾಯ ಮಾಡುವುದಾಗಿಯೂ ಭರವಸೆಯನ್ನು ನೀಡಿದರು. ಮುಖ್ಯ ಅಥಿತಿಗಳಾಗಿ ಉಪಸ್ಥಿತರಿದ್ದು ಉಪನ್ಯಾಸ ನೀಡಿದ ಹಿರಿಯ ಆರೋಗ್ಯ ನಿರೀಕ್ಷಕ ಈರಯ್ಯ ದೇವಾಡಿಗ ಆರೋಗ್ಯ ಇಲಾಖೆಯಲ್ಲಿ ಮಹಿಳೆಯರಿಗೆ ಸಿಗುವಂತಹ ಸೌಲಭ್ಯ ಹಾಗೂ ಮಹಿಳಾ ದಿನಾಚರಣೆಯ ಅಗತ್ಯತೆಯ ಕುರಿತು ವಿವರಿಸಿದರು. ಮುಖ್ಯ ಅತಿಥಿಗಳಾದ ಸಹಾಯಕ ಕೃಷಿ ನಿರ್ದೇಶಕ ಜೆ.ಡಿ.ಮರಗೋಡ, ಕೆ.ವಿ.ಜಿ.ಬ್ಯಾಂಕಿನ ಹಿರಿಯ ಶಾಖಾಧಿಕಾರಿ ಸೂರ್ಯನಾರಾಯಣ ರಾವ್, ಮೇಘಶ್ರೀ ಸಂಸ್ಥೆಯ ಖಜಾಂಚಿ ಶಂಕರ ನಾಯ್ಕ ಮಾತನಾಡಿದರು. ಆರತಿ ಆಚಾರ್ಯ ಸಂಗಡಿಗರು ಪ್ರಾರ್ಥನೆ ಹಾಡಿದರು. ಜಯಲಕ್ಷ್ಮೀ ನಾಯ್ಕ ಸ್ವಾಗತ ಗೀತೆ ಹಾಡಿದರು. ಸಂಘದ ಅಧ್ಯಕ್ಷೆ ಸುಮಾವತಿ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಶ್ರೇಯಾ ಸಚಿನ್ ಮಹಾಲೆ ವರದಿ ವಾಚಿಸಿದರು. ಮಂಜುಳಾ ಆಚಾರ್ಯ ಸ್ವಾಗತಿಸಿದರು, ಮಂದಾಕಿನಿ ಹೆಬ್ಬಾರ್ ನಿರ್ವಹಿಸಿದರು. ಮಂಜಮ್ಮ ಗೊಂಡ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X