Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೂಕ್ತ ದಾಖಲೆ,ಕಾನೂನು...

ಸೂಕ್ತ ದಾಖಲೆ,ಕಾನೂನು ಚೌಕಟ್ಟಿನಲ್ಲಿದ್ದರೆ ತನಿಖಾ ವರದಿಗಳು ಯಶಸ್ವಿ ಆಳ್ವಾಸ್ ಮೀಡಿಯಾ ಬರ್ನಲ್ಲಿ - ಎಸ್‌ಪಿ ಅಣ್ಣಾಮಲೈ

ವಾರ್ತಾಭಾರತಿವಾರ್ತಾಭಾರತಿ12 March 2016 7:28 PM IST
share
ಸೂಕ್ತ ದಾಖಲೆ,ಕಾನೂನು ಚೌಕಟ್ಟಿನಲ್ಲಿದ್ದರೆ ತನಿಖಾ ವರದಿಗಳು ಯಶಸ್ವಿ ಆಳ್ವಾಸ್ ಮೀಡಿಯಾ ಬರ್ನಲ್ಲಿ - ಎಸ್‌ಪಿ ಅಣ್ಣಾಮಲೈ

 ಮೂಡುಬಿದಿರೆ: ತನಿಖಾ ವರದಿಗಾರರು ಮತ್ತು ದಕ್ಷ ಪೊಲೀಸ್ ಅಧಿಕಾರಿಗಳು ಸಮಾಜದಲ್ಲಿರುವ ಭ್ರಷ್ಟಾಚಾರದಂತಹ ಕಂಟಕಗಳನ್ನು ನಿವಾರಣೆ ಮಾಡಲು ಸಾಧ್ಯವಿದೆ. ತನಿಖಾ ವರದಿಗೆ ಸಂಬಂಧಿಸಿದ ಸೂಕ್ತ ದಾಖಲೆ, ಸ್ವರಕ್ಷೆ, ಕಾನೂನಿನ ಚೌಕಟ್ಟಿನಲ್ಲಿ ಮಾಡುವ ಕಾರ್ಯವೈಖರಿಯಿಂದ ತನಿಖಾ ವರದಿ ಯಶಸ್ವಿಯಾಗುತ್ತದೆ ಎಂದು ಉಡುಪಿ ಎಸ್‌ಪಿ ಕೆ.ಅಣ್ಣಾಮಲೈ ಅಭಿಪ್ರಾಯಪಟ್ಟರು.  ಅವರು ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆದ ‘ಆಳ್ವಾಸ್ ಮೀಡಿಯಾ ಬರ್’ ರಾಷ್ಟ್ರೀಯ ಮಾಧ್ಯಮ ಉತ್ಸವದಲ್ಲಿ ಶನಿವಾರದಂದು ‘ತನಿಖಾ ವರದಿಗಾರಿಕೆ’ ಕುರಿತು ಮಾತನಾಡಿದ ದಕ್ಷ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಉತ್ತಮ ತನಿಖಾ ವರದಿಗಾರರಿಗೆ ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶವಿರುತ್ತದೆ. ಆದರೆ ಕೆಲವೊಮ್ಮೆ ಕಾನೂನಾತ್ಮಕ ರೀತಿಯಲ್ಲಿ ತನಿಖಾ ವರದಿಗಳು ಸೋಲು ಕಾಣುತ್ತಿವೆ. ತನಿಖಾ ವರದಿಗಾರರು, ತಮಗೆ ದಕ್ಷರೆನಿಸುವ ಪೊಲೀಸ್ ಅಧಿಕಾರಿಗಳ ಸಲಹೆಯನ್ನು ಪಡೆಯುವುದು ಅಗತ್ಯ. ಯಾವುದೇ ತನಿಖೆ ವರದಿ ಸಂದರ್ಭ ತಪಿತಸ್ಥರ ಮೇಲೆ ದಾಳಿ ಮಾಡುವ ಮೊದಲು ಪೊಲೀಸರಿಗೆ ಮಾಹಿತಿ ನೀಡುವುದು ಉತ್ತಮ ಎಂದು ಹೇಳಿದ ಅವರು ಪೊಲೀಸರಿಗೆ ಕಾನೂನಾತ್ಮಕ ಚೌಕಟ್ಟಿರುವುದರಿಂದ ಜನರಿಗೆ ಒಮ್ಮೆಲೇ ಮಾಹಿತಿ ನೀಡಲು ಸಾಧ್ಯವಿಲ್ಲ ಆದರೆ ಮಾಧ್ಯಮದವರು ಆ ಕೆಲಸ ಮಾಡಬಹುದು.

 ಮಾಧ್ಯಮಗಳು ಗುಣಮಟ್ಟದ ಸುದ್ಧಿಗಳನ್ನು ಬಿತ್ತರಿಸುವ, ಪ್ರಕಟಿಸುವಲ್ಲಿ ಕ್ರಾಂತಿಯನ್ನು ಮಾಡಬೇಕಾಗಿದೆ. ಇದಕ್ಕಿಂತ ಮುಖ್ಯವಾಗಿ ವೀಕ್ಷಕರು, ಓದುಗರಲ್ಲಿಯೂ ಜಾಗೃತಿಯಾಗಬೇಕಾಗಿದೆ. ಮಾಧ್ಯಮದ ಗುಣಮಟ್ಟಕ್ಕೆ ಬೆಂಬಲ ನೀಡಿದಾಗ ಮಾತ್ರ ಜನರಿಗೆ ಮಾಧ್ಯಮವನ್ನು ವಿಮರ್ಶಿಸುವ, ಟೀಕಿಸುವ ನೈತಿಕ ಹಕ್ಕಿರುತ್ತದೆ. ಗುಣಮಟ್ಟದ ವರದಿಗೋಸ್ಕರ ಪತ್ರಿಕೆ, ಸುದ್ದಿವಾಹಿನಿಗಳಿಗೆ ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸುವುದು ಅಗತ್ಯ ಎಂದು ಅಣ್ಣಾಮಲೈ ಅಭಿಪ್ರಾಯಪಟ್ಟರು.

 ಸುವರ್ಣ ಸುದ್ದಿವಾಹಿನಿಯ ತನಿಖಾ ವರದಿಗಾರ್ತಿ ವಿಜಯಲಕ್ಷ್ಮೀ ಶಿಬರೂರು ಮಾತನಾಡಿ, ಪತ್ರಿಕೋದ್ಯಮಕ್ಕೆ ಭ್ರಮೆಯಿಂದ ಬರಬಾರದು. ಪತ್ರಿಕಾರಂಗದಲ್ಲಿ ಇನ್ನು ಕೂಡಾ ತನಿಖಾ ವರದಿಗಾರಿಕೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿಲ್ಲ. ಆತ್ಮವಿಶ್ವಾಸ, ಕುತೂಹಲ, ಅಧ್ಯಯನ ಶೀಲತೆ, ಪ್ರಶ್ನಿಸುವ ಗುಣ, ಮನೆಯವರ ಬೆಂಬಲ, ರಿಸ್ಕ್ ತೆಗೆದುಕೊಳ್ಳುವ ಜಾಯಮಾನವಿದ್ದರೆ ತನಿಖಾ ವರದಿಗಾರಿಕೆಯಲ್ಲಿ ಯಶಸ್ವಿಯಾಗಬಹುದು. ತನಿಖಾ ವರಿದಿಗಾರರಾಗಬೆಕ್ಕೆನ್ನುವವರು ಮೊದಲು ತಮ್ಮ ಸುತ್ತಮುತ್ತಲು ನಡೆಯುವ ಅವ್ಯವಹಾರ, ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವುದು ಹೇಗೆ ಅನ್ನುವ ಯೋಚನೆಯನ್ನು ಮಾಡಬೇಕು. ಪಕ್ಕಾ ಮಾಹಿತಿ, ಸೂಕ್ತ ದಾಖಲೆ, ಸಾಕ್ಷ್ಯಗಳ ಸಂಗ್ರಹ ಮಾಡುವ ಚಾತುರ್ಯತೆ ತನಿಖಾ ವರದಿಗಾರನಲ್ಲಿರುವುದು ಅಗತ್ಯ. ಅವ್ಯವಹಾರಗಳನ್ನು ಮಾಧ್ಯಮಗಳ ಬಯಲಿಗೆಳೆಯಬಹುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X