Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಆರದಿರಲಿ ಬೆಳಕು ಮುಂಬೈ ನೆಲದಲ್ಲಿ...

ಆರದಿರಲಿ ಬೆಳಕು ಮುಂಬೈ ನೆಲದಲ್ಲಿ ತಾಯ್ನೆಲದ ಕನವರಿಕೆ

-ಕಾರುಣ್ಯಾ-ಕಾರುಣ್ಯಾ12 March 2016 11:15 PM IST
share
ಆರದಿರಲಿ ಬೆಳಕು ಮುಂಬೈ ನೆಲದಲ್ಲಿ ತಾಯ್ನೆಲದ ಕನವರಿಕೆ

ಬದುಕಿನ ಮಾರ್ಗವನ್ನು ಹುಡುಕಿ ಮುಂಬಯಿಗೆ ಹೋದವರು ಅಲ್ಲೂ ತಮ್ಮನ್ನು ಕೇವಲ ದುಡಿತಕ್ಕೆ ಸೀಮಿತವಾಗಿರಿಸಿಕೊಳ್ಳದೆ, ನಗರದ ಗದ್ದಲಗಳಲ್ಲಿ ಕಳೆದುಹೋಗದೆ ಹೃದಯದ ಮಾತಿಗೆ ಕಿವಿಯಾದ ಹಲವರಿದ್ದಾರೆ. ಸಾಹಿತ್ಯ, ಕಲೆ, ಸಂಸ್ಕೃತಿಯ ಮೂಲಕ ತಮ್ಮ ಬೇರನ್ನು, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಅಂತಹ ಒಂದು ಪ್ರಯತ್ನದ ಭಾಗವೇ, ಡಾ. ಕರುಣಾಕರ್ ಎನ್. ಶೆಟ್ಟಿ ಪಣಿಯೂರು ಅವರ ಕಥಾ ಸಂಕಲನ ‘ಆರದಿರಲಿ ಬೆಳಕು’. ಕನ್ನಡ ಸಾಹಿತ್ಯ ಪರಿಷತ್ತು, ಮಹಾರಾಷ್ಟ್ರ ಘಟಕವು ತನ್ನ ಶತಮಾನದ ಸಂಭ್ರಮದ ಹಿನ್ನೆಲೆಯಲಋ್ಲ ಈ ಕೃತಿಯನ್ನು ಹೊರ ತಂದಿದೆ. ಪೂರ್ಣಿಮಾ, ಅರುಣೋದಯ, ಕತ್ತಲೆ ಸರಿದಾಗ, ಶಂಖನಾದ ಕೃತಿಯನಂತರ ಅವರ ಈ ಕೃತಿ ಹೊರ ಬಂದಿದೆ. ಯಾವುದೇ ಸಾಹಿತ್ಯಿಕ ಹಣೆ ಪಟ್ಟಿಗಳಿಲ್ಲ, ನವೋದಯ ಮತ್ತು ಪ್ರಗತಿಶೀಲರ ದಟ್ಟ ಪ್ರಭಾವದಿಂದ ಹೊರ ಬಂದಿರುವ ಈ ಕತೆಗಳು, ನಮ್ಮ ದೈನಂದಿನ ಬದುಕಿನ ಘಟನೆಗಳಲ್ಲಿ ಮನುಷ್ಯ ಬದುಕಿನ ಸಾರ್ಥಕತೆಯನ್ನು ಹುಡುಕಲು ಪ್ರಯತ್ನಿಸುತ್ತದೆ.

ಈ ಕತೆಗಳು ಮಹಾರಾಷ್ಟ್ರದ ಮಣ್ಣಿನಲ್ಲಿ ಬೆಳಕು ಕಂಡಿದ್ದರೂ, ಇವುಗಳ ಮೂಲ ಸೆಲೆಯಿರುವುದು ದಕ್ಷಿಣ ಕನ್ನಡದ ತುಳು ಸಂಸ್ಕೃತಿಯಲ್ಲಿ. ಅಲ್ಲಲ್ಲಿ ನಗರಗಳ ಬದುಕು ಕಾಣುತ್ತವೆಯಾದರೂ, ಅದು ಅಂತಿಮವಾಗಿ ಹೋಗಿ ನಿಲ್ಲುವುದು ಹುಟ್ಟಿದ ಊರಿನಲ್ಲಿ. ಇಲ್ಲಿ ಒಟ್ಟು 18 ಕತೆಗಳಿವೆ. ಎಲ್ಲವೂ ಯಾವುದೇ ನಿರೂಪಣಾ ತಂತ್ರಗಳಿಲ್ಲದೆ, ಸರಾಗವಾಗಿ ಹರಿಯುವ, ಸರಳವಾಗಿ ಒಪ್ಪಿತವಾಗುವ ಕತೆಗಳು. ಜೀವನ ವೌಲ್ಯಗಳನ್ನು ಎತ್ತಿ ಹಿಡಿಯುವುದು ಕತೆಗಾರರ ಮುಖ್ಯ ಉದ್ದೇಶವಾಗಿದೆ. ಋಣಾನುಬಂಧ, ಕಾಲಚಕ್ರ, ಬಾಡಿಗೆ ತಾಯಿ, ಸೋಷಿಯಲ್, ವಾಟ್ಸ್‌ಆಪ್ ಹೀಗೆ ಹಲವು ಕತೆಗಳು ಆಧುನಿಕತೆ ಮತ್ತು ಪ್ರಾಚೀನತೆಯ ಜೊತೆಗಿನ ಸಂಘರ್ಷಗಳನ್ನು ಹೇಳುತ್ತದೆ. ಹೆಚ್ಚಿನ ಕತೆಗಳ ಅಂತ್ಯ ಪೂರ್ವನಿರ್ಧರಿತವಾದವುಗಳು. ಕೃತಿಯ ಮುಖಬೆಲೆ 150 ರೂಪಾಯಿ. ಆಸಕ್ತರು, 98203 57758 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X