Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರೆಸ್ಸೆಸ್‌ನಿಂದ ಪಾಠ ಕಲಿಯುವ...

ಆರೆಸ್ಸೆಸ್‌ನಿಂದ ಪಾಠ ಕಲಿಯುವ ಅಗತ್ಯವಿಲ್ಲ: .ಶ್ರೀರಾಮರೆಡ್ಡಿ

ಎನ್.ಕೆ.ಉಪಾಧ್ಯಾಯ ಜನ್ಮ ಶತಮಾನೋತ್ಸವ

ವಾರ್ತಾಭಾರತಿವಾರ್ತಾಭಾರತಿ12 March 2016 11:51 PM IST
share

ಬೆಂಗಳೂರು, ಮಾ. 12: ಸ್ವಾತಂತ್ರ ಸಂಗ್ರಾಮದಲ್ಲಿ ಬ್ರಿಟಿಷರೊಂದಿಗೆ ಕೈಜೋಡಿಸಿದ್ದ ಆರೆಸ್ಸೆಸ್‌ನಿಂದ ದೇಶಭಕ್ತಿ ಪಾಠ ಕಲಿಯುವ ಅಗತ್ಯ ನಮಗಿಲ್ಲ ಎಂದು ಸಿಪಿಎಂ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಕಿಡಿಕಾರಿದ್ದಾರೆ.

ಶನಿವಾರ ನಗರದ ಎನ್‌ಜಿಒ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ಏರ್ಪಡಿಸಿದ್ದ ‘ಎನ್.ಕೆ.ಉಪಾಧ್ಯಾಯ’ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ವಾತಂತ್ರ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದಇತಿಹಾಸವಿರುವುದು ಕಮ್ಯುನಿಸ್ಟ್‌ರಿಗೆ ಮಾತ್ರ. ಈ ಆರೆಸ್ಸೆಸ್‌ನವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು. ಅದೇ ರೀತಿ, ಆರೆಸ್ಸೆಸ್ ಸಂಸ್ಥಾಪಕರಲ್ಲಿ ಪ್ರಧಾನರಾದ ವಿನಾಯಕ ದಾಮೋದರ ಸಾವರ್ಕರ್ ಅವರನ್ನು ಸ್ವಾತಂತ್ರ ಹೋರಾಟಕ್ಕಾಗಿ ಅಂಡಮಾನ್ ಜೈಲಿಗೆ ಹಾಕಿದಾಗ ‘ತಮ್ಮನ್ನು ಜೈಲಿಂದ ಬಿಡುಗಡೆಗೊಳಿಸಿದರೆ, ಬ್ರಿಟಿಷ್ ಕಂಪೆನಿ ಸರಕಾರದ ಸೇವಕನಾಗಿರುತ್ತೇನೆ’ ಎಂದು ಮುಚ್ಚಳಿಕೆ ಬರೆದುಕೊಟ್ಟಿರುವುದನ್ನು ಈಗಾಲೂ ಅಂಡಮಾನ್ ಜೈಲಿನ ಇತಿಹಾಸದ ಪುಟಗಳಲ್ಲಿ ನೋಡಬಹುದು ಎಂದು ಹೇಳಿದರು.

 ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಸಹ ನಾನು ಸ್ವಾತಂತ್ರ ಹೋರಾಟಗಾರನಲ್ಲ. ನಾನೊಬ್ಬ ದಾರಿ ಹೋಕ ಎಂದು ಪತ್ರದಲ್ಲಿ ಬರೆದುಕೊಟ್ಟಿದ್ದಾರೆ. ಅಲ್ಲದೆ, ಸಂಘಪರಿವಾರ ಮತ್ತು ಬಿಜೆಪಿಯ ಹಿನ್ನಲೆ ಎಲ್ಲರಿಗೂ ತಿಳಿದಿದೆ ಎಂದ ಅವರು, ಕಮ್ಯುನಿಸ್ಟ್‌ನ ಎ.ಕೆ.ಗೋಪಾಲನ್ ಮತ್ತು ಯುವ ಸಮೂಹ 22 ವರ್ಷಗಳ ಕಾಲ ಸ್ವಾತಂತ್ರಕ್ಕಾಗಿ ಜೈಲುವಾಸ ಅನುಭವಿಸಿದವರು ಎಂದು ನೆನಪಿಸಿದರು.

 ಇತಿಹಾಸಕಾರರು ಇತಿಹಾಸ ತಿರುಚಿ ಬರೆದಿರುವ ಕಾರಣ ಕಮ್ಯುನಿಸ್ಟ್ ಹೋರಾಟಗಾರರು ಇತಿಹಾಸದ ಪುಟಗಳಲ್ಲಿ ಮರೆಯಾಗಿದ್ದಾರೆ ಎಂದು ಹೇಳಿದ ಶ್ರೀರಾಮರೆಡ್ಡಿ, ಕಾಂಗ್ರೆಸ್‌ನ ಮುಖಂಡರಾದ ನೆಹರೂ, ಗಾಂಧಿ ಅವರನ್ನು ಐಷಾರಾಮಿ ಜೈಲುಗಳಲ್ಲಿಡುತ್ತಿದ್ದರು. ಅದೇ ಬಡ ಮತ್ತು ಕಾರ್ಮಿಕರ ಹೋರಾಟ ಹಿನ್ನಲೆಯಿಂದ ಬಂದ ಕಮ್ಯುನಿಸ್ಟ್‌ರನ್ನು ಮೂಲಸೌಕರ್ಯವಿಲ್ಲದ ಯರವಾಡ, ಪುಣೆ ಜೈಲಿಗೆ ಹಾಕುತ್ತಿದ್ದರು. ಇದರಿಂದ ದೇಶಕ್ಕಾಗಿ ಯಾರು ನಿಜವಾದ ಕೊಡುಗೆ ನೀಡಿದ್ದಾರೆ ಎಂಬುವುದು ತಿಳಿದು ಬರುತ್ತದೆ. ಅಲ್ಲದೆ, ಈ ಆರೆಸ್ಸೆಸ್‌ನವರು ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಎಲ್ಲಿದ್ದರು? ಎಂದು ಅವರು ಪ್ರಶ್ನಿಸಿದರು.

ಸಮಾರಂಭದಲ್ಲಿ ಕ.ರಾ.ಗ್ರಾ.ಪಂ.ನೌಕರರ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ, ಪ್ರಧಾನ ಕಾರ್ಯದರ್ಶಿ ಎಂ.ಬಿ.ನಾಡಗೌಡ, ಉಪಾಧ್ಯಕ್ಷ ವಿ.ಪಿ.ಕುಲಕರ್ಣಿ ಸೇರಿ ಪ್ರಮುಖರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X