Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲ್ಯರ ‘ವಿಲ್ಲಾ’ ಬ್ಯಾಂಕ್ ವಶಕ್ಕೆ...

ಮಲ್ಯರ ‘ವಿಲ್ಲಾ’ ಬ್ಯಾಂಕ್ ವಶಕ್ಕೆ ತೆಗೆದುಕೊಳ್ಳಲು ಸಹಕರಿಸದಿದ್ದ ಗೋವಾ ಬಿಜೆಪಿ ಸರಕಾರ

ವಾರ್ತಾಭಾರತಿವಾರ್ತಾಭಾರತಿ12 March 2016 11:52 PM IST
share
ಮಲ್ಯರ ‘ವಿಲ್ಲಾ’ ಬ್ಯಾಂಕ್ ವಶಕ್ಕೆ ತೆಗೆದುಕೊಳ್ಳಲು ಸಹಕರಿಸದಿದ್ದ ಗೋವಾ ಬಿಜೆಪಿ ಸರಕಾರ

ಹೊಸದಿಲ್ಲಿ, ಮಾ.12: ಗೋವಾದಲ್ಲಿ ಮದ್ಯದ ದೊರೆ ವಿಜಯ ಮಲ್ಯ ಒಡೆತನದಲ್ಲಿರುವ ಆಸ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಬಯಸಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಗೋವಾದ ಬಿಜೆಪಿ ಸರಕಾರ ತಡೆದಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಎಸ್‌ಬಿಐ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ಹೊರಗೆಡಹಿದ್ದಾರೆ.

 ಗೋವಾ ರಾಜಧಾನಿ ಪಣಜಿ ಸಮೀಪ ಭವ್ಯ ವಿಲ್ಲಾವೊಂದನ್ನು ಹೊಂದಿರುವ ಮಲ್ಯ ಅದನ್ನು ಬ್ಯಾಂಕಿಗೆ ಗ್ಯಾರಂಟಿಯಾಗಿ ಒದಗಿಸಿದ್ದರು ಎಂದು ಟಿವಿ ಶೋ ಒಂದರಲ್ಲಿ ಹೇಳಿದ ಭಟ್ಟಾಚಾಯರ್ಯ, ಐಎಎಸ್ ಅಧಿಕಾರಿಯಗಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಒಬ್ಬರು ಮಲ್ಯರ ವಿಲ್ಲಾವನ್ನು ವಶಕ್ಕೆ ತೆಗೆದುಕೊಳ್ಳುವಂತೆ ಹೇಳಿದ ಹೈಕೋರ್ಟ್ ಆದೇಶವನ್ನು ಜಾರಿಗೊಳಿಸಲು ನಿರಾಕರಿಸಿದ್ದರು ಎಂದು ಹೇಳಿದರು.
  ‘‘ನಾವು ಮಲ್ಯರ ಗೋವಾ ವಿಲ್ಲಾವನ್ನು ವಶಕ್ಕೆ ಪಡೆಯಲು ಪ್ರಯತ್ನಿಸುತ್ತಿದ್ದೆವು. ಈ ಕ್ರಮವನ್ನು ಮೂರು ತಿಂಗಳೊಳಗಾಗಿ ತೆಗೆದುಕೊಳ್ಳಬೇಕೆಂಬ ಹೈಕೋರ್ಟ್ ಆದೇಶದ ಹೊರತಾಗಿಯೂ ಕಲೆಕ್ಟರ್ ಎಂಟು ಸುತ್ತುಗಳ ವಿಚಾರಣೆ ನಡೆಸಿ ನಂತರ ರಜೆ ಮೇಲೆ ತೆರಳಿದರು. ಹೆಚ್ಚಾಗಿ ಕಲೆಕ್ಟರ್ ಹುದ್ದೆಯಲ್ಲಿರುವವರು ಇಂತಹ ಆದೇಶವನ್ನು ಯಾವುದೇ ವಿಚಾರಣೆ ನಡೆಸದೆ ಜಾರಿಗೊಳಿಸುತ್ತಾರಾದರೂ ಈ ಅಧಿಕಾರಿ ಎಂಟು ಸುತ್ತಿನ ವಿಚಾರಣೆ ನಡೆಸಿದರು’’ ಎಂದು ಹೇಳಿದರು.
 ‘‘ಸಾಲ ನೀಡಿದ ಬ್ಯಾಂಕ್‌ಗಳ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿಯವರನ್ನು ಸಂಪರ್ಕಿಸಿದ್ದರೂ ಅವರು ಅತ್ಯುನ್ನತ ನ್ಯಾಯಾಲಯ (ಸುಪ್ರೀಂಕೋರ್ಟ್)ದ ಕದ ತಟ್ಟದಂತೆ ಸಲಹೆ ನೀಡಿದರಲ್ಲದೆ ಸಾಲ ವಸೂಲಿ ನ್ಯಾಯಾಧಿಕರಣದ ಮೊರೆ ಹೋಗಲು ತಿಳಿಸಿದರು,’’ ಎಂದು ಭಟ್ಟಾಚಾರ್ಯ ತಿಳಿಸಿದರು.
‘‘ಮರುದಿನ ನಾವು ಹೈಕೋರ್ಟಿಗೆ ಹೋದರೂ ಕೋರ್ಟ್ ನಮ್ಮನ್ನು ಸಾಲ ವಸೂಲಿ ನ್ಯಾಯಾಧಿಕರಣಕ್ಕೆ ಅಪೀಲು ಸಲ್ಲಿಸಲು ಸಲಹೆ ನೀಡಲಾಯಿತು. ಆದರೆ ಅದರಿಂದ ನಮಗೇನೂ ಪ್ರಯೋಜನವಾಗಿಲ್ಲ. ಅವರು ಪ್ರಮಾಣ ಮಾಡಿರುವ ಆಸ್ತಿ ವಶಪಡಿಸುವುದು ನಮಗೆ ಬೇಕಿತ್ತು. ಮಲ್ಯರವರು ತಮ್ಮ ಆಸ್ತಿಯ ಬಗ್ಗೆ ವೈಯಕ್ತಿಕ ಗ್ಯಾರಂಟಿ ನೀಡಿದ್ದರು,’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X