Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಟೆರೇಸ್ ಕಟ್ಟಡಗಳಲ್ಲಿ ಜೇನು...

ಮಂಗಳೂರು: ಟೆರೇಸ್ ಕಟ್ಟಡಗಳಲ್ಲಿ ಜೇನು ಸಾಕಣೆ ಮಾಡಬಹುದು - ಜೆ.ಪಿ.ಶ್ಯಾಮ್ ಭಟ್

ವಾರ್ತಾಭಾರತಿವಾರ್ತಾಭಾರತಿ13 March 2016 6:17 PM IST
share
ಮಂಗಳೂರು: ಟೆರೇಸ್ ಕಟ್ಟಡಗಳಲ್ಲಿ ಜೇನು ಸಾಕಣೆ ಮಾಡಬಹುದು - ಜೆ.ಪಿ.ಶ್ಯಾಮ್ ಭಟ್

ಮಂಗಳೂರು,ಮಾ,13:ಟೆರೇಸ್ ಕಟ್ಟಡದಲ್ಲಿಯೂ ಜೇನು ಸಾಕಣೆ ಮಾಡಬಹುದಾಗಿದೆ.ಆದರೆ ಅದಕ್ಕೆ ಜೇನು ವಾಸಿಸಲು ಅನುಕೂಲವಾಗುವ ವಾತವರಣ ಅಲ್ಲಿರಬೇಕು ಎಂದು ದ.ಕ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಜಿ.ಪಿ.ಶ್ಯಾಮ್ ಭಟ್ ತಿಳಿಸಿದ್ದಾರೆ.
 ಅವರು ಇಂದು ನಗರದ ಕದ್ರಿ ಉದ್ಯಾನವನದಲ್ಲಿ ದ.ಕ ಜಿಲ್ಲಾ ಪಂಚಾಯತ್,ತೋಟಗಾರಿಕಾ ಇಲಾಖೆ ರಾಷ್ಟ್ರೀಯ ತೋಟಗಾರಿಕಾ ಮಿಶನ್ ಹಾಗೂ ಜೇನು ಸಹಕಾರಿ ಸಂಘಗಳ ಸಹಭಾಗಿತ್ವದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಜೇನು ಹಬ್ಬದ ಎರಡನೆ ದಿನ ಕೃಷಿಕರೊಂದಿಗಿನ ಸಾವಯವ ಕೃಷಿ ,ಜೇನು ಕೃಷಿ ಸಂವಾದ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದರು.
  ನಗರ ಪ್ರದೇಶಗಳಲ್ಲಿ ಟೆರೇಸ್‌ಗಳಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಜೇನು ಸಾಕಬಹುದು ಆದರೆ ಈ ಪಟ್ಟಿಗೆಯ ಪ್ರದೇಶದಲ್ಲಿ ಶೇ 50 ರಷ್ಟು ಭಾಗ ನೆರಳಿರಬೇಕಾಗಿದೆ.ಸುತ್ತ ಮುತ್ತ ಜೇನು ನೊಣಗಳಿಗೆ ಜೇನು ಸಂಗ್ರ4ಹಿಸಲು ಅನುಕೂಲಕರವಾದ ಮರ ಗಿಡಗಳಿರಬೇಕು ಎಂದು ಶ್ಯಾಮ್ ಭಟ್ ತಿಳಿಸಿದರು.ಜೇನು ಉತ್ತಮ ಆರೋಗ್ಯ ವರ್ಧಕ ಪಾನೀಯವಾಗಿದೆ.ಜೇನು ತುಪ್ಪವನ್ನು ವಿವಿಧ ರೀತಿಯಲ್ಲಿ ಸೇವಿಸಬಹುದಾಗಿದೆ.ಮೊಸರಿಗೆ ಹಾಕಿ,ಹಾಲಿನೊಂದಿಗೆ,ಜ್ಯೂಸ್‌ಆಗಿ ಸೇವಿಬಹುದಾಗಿದೆ.ಜೇನು ಪಾಕೃತಿಕವಾಗಿ ನಮಗೆ ದೊರಕುವ ಒಂದು ರೀತಿಯ ಸಂಪತ್ತು ಎಂದು ಶ್ಯಾಮ್ ಭಟ್ ತಿಳಿಸಿದರು.
ಸಾವಯವ ಕೃಷಿಗೆ ಸಂಬಂಧಿಸಿದಂತೆ ಭೂಮಿಯ ಫಲವತ್ತತೆಯನ್ನು ಸಂರಕ್ಷಿಸುವ ಗಿಡಗಳನ್ನು ಹೆಚ್ಚು ಹೆಚ್ಚು ನೆಡಬೇಕು.ಶುಂಠಿ ಬೆಳೆ ನೆಲದ ಸಾರವನ್ನು ಹೇಗೆ ಹೀರಿಕೊಂಡು ಬೆಳೆಯುತ್ತದೆ.ಅದರಿಂದಾಗಿ ನೆಲದ ಸತ್ವ ಕಡಿಮೆಯಾಗುತ್ತದೆ ಎನ್ನುವ ಭಾವನೆ ಇರುತ್ತದೆ.ಆದರೆ ಇಂತಹ ಸಂದರ್ಭದಲ್ಲಿ ಅರಸಿನ ಗಿಡವನ್ನು ನೆಟ್ಟಾಗ ನೆಲದಲ್ಲಿ ಮರುವರ್ಷ ಉತ್ತಮ ಬೆಳೆ ಬೆಳೆಯಹಬುದು.ನಾವು ತಿನ್ನುವ ಆಹಾರದಲ್ಲಿ ಅರಸಿನ ಹೇಗೆ ನಂಜು ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆಯೋ ಅದೇ ರೀತಿ ಅರಸಿನ ಮಣ್ಣಿನ ಸಾರ ಸಂರಕ್ಷಣೆಯ ಬಗ್ಗೆ ಕಾರ್ಯನಿರ್ವಹಿಸುವ ಗುಣ ಹೊಂದಿರುವುದು ನನ್ನ ಅನುಭವಕ್ಕೆ ಬಂದಿದೆ ಎಂದು ಶ್ಯಾಮ್ ಭಟ್ ತಿಳಿಸಿದರು.ಸಂವಾದ ಗೋಷ್ಠಿಯನ್ನು ತೋಟಗಾರಿಕಾ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಪ್ರವೀಣ್ ನೆರವೇರಿಸಿದರು.
ಎರಡನೇ ದಿನದ ಜೇನು ಮೇಳದಲ್ಲಿ ಜೇನು ತುಪ್ಪದ ವಿವಿಧ ಉತ್ಪನ್ನಗಳನ್ನು ಕೃಷಿಕರು ಮಾರಾಟಕ್ಕೆ ಇಟ್ಟಿದ್ದರು.ಕದ್ರಿಪಾರ್ಕ್‌ನಲ್ಲಿ ಸಾವಯವವಾಗಿ ಬೆಳೆದ ತರಕಾರಿ ಹಣ್ಣು ಗಳ ಮಾರಾಟಮಳಿಗೆಗಳಿದ್ದವು,ತರಕಾರಿ ಬೀಜಗಳನ್ನು ರೈತರು ಆಸಕ್ತಿಯಿಂದ ಖರೀದಿಸುತ್ತಿರುವುದು ಕಂಡು ಬಂತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X