Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೂರನ್ನು ಸಮರ್ಥಿಸಿಕೊಳ್ಳಲು ಹೇಳಿಕೆಗೆ...

ದೂರನ್ನು ಸಮರ್ಥಿಸಿಕೊಳ್ಳಲು ಹೇಳಿಕೆಗೆ ಅವಕಾಶ ನೀಡದೆ ವಜಾಗೊಳಿಸುವುದು ಕಾನೂನು ಬಾಹಿರ

ವಾರ್ತಾಭಾರತಿವಾರ್ತಾಭಾರತಿ13 March 2016 9:44 PM IST
share
ದೂರನ್ನು ಸಮರ್ಥಿಸಿಕೊಳ್ಳಲು ಹೇಳಿಕೆಗೆ ಅವಕಾಶ ನೀಡದೆ ವಜಾಗೊಳಿಸುವುದು ಕಾನೂನು ಬಾಹಿರ

ಹೊಸದಿಲ್ಲಿ,ಮಾ.13: ದೂರುದಾರನಿಗೆ ತನ್ನ ದೂರನ್ನು ಸಮರ್ಥಿಸಿಕೊಳ್ಳುವ ಸಾಕ್ಷವನ್ನು ಸಲ್ಲಿಸುವ ಯಾವುದೇ ಅವಕಾಶ ನೀಡದೇ ದೂರನ್ನು ವಜಾಗೊಳಿಸುವುದು ಕಾನೂನುಬದ್ಧವಲ್ಲ ಮತ್ತು ತಾರ್ಕಿಕವೂ ಅಲ್ಲ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ದಿಲ್ಲಿಯ ಸೆಷನ್ಸ್ ನ್ಯಾಯಾಲಯವೊಂದು,ಸುಳ್ಳು ಒಬಿಸಿ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂದು ಐಎಎಸ್ ಅಧಿಕಾರಿಯೋರ್ವರ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ಸಕಾರಣವಾದ ಆದೇಶವನ್ನು ಹೊರಡಿಸುವಂತೆ ದೂರಿನ ವಿಚಾರಣೆ ನಡೆಸಿದ್ದ ಮಹಾನಗರ ನ್ಯಾಯಾಲಯಕ್ಕೆ ಸೂಚಿಸಿದೆ.
ಅಧಿಕಾರಿ ಮತ್ತು ಇತರರ ವಿರುದ್ಧದ ದೂರನ್ನು ವಜಾಗೊಳಿಸಿರುವ ಆದೇಶದಲ್ಲಿ ಮಹಾನಗರ ನ್ಯಾಯಾಧೀಶರು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಆತುರದ್ದಾಗಿವೆ ಮತ್ತು ದೂರುದಾರನಿಗೆ ತನ್ನ ದೂರನ್ನು ಸಮರ್ಥಿಸಿಕೊಳ್ಳಲು ಸಮನ್ಸ್ ಪೂರ್ವ ಹೇಳಿಕೆಯನ್ನು ಮಂಡಿಸಲು ಅವಕಾಶ ನಿಡಬೇಕಾಗಿತ್ತು ಎಂದು ವಿಶೇಷ ನ್ಯಾಯಾಧೀಶರಾದ ಅಂಜು ಬಜಾಜ್ ಚಂದ್ನಾ ಹೇಳಿದರು.
ಐಎಎಸ್ ಅಧಿಕಾರಿ ಮತ್ತು ಇತರ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ತನ್ನ ದೂರನ್ನು ವಜಾಗೊಳಿಸಿದ್ದ ಮಹಾನಗರ ನ್ಯಾಯಾಲಯದ ಕಳೆದ ವರ್ಷದ ಆದೇಶವನ್ನು ದಿಲ್ಲಿ ನಿವಾಸಿ ಮಹೇಶ ಕುಮಾರ ಪ್ರಶ್ನಿಸಿದ್ದಾರೆ.
ಐಎಎಸ್ ಅಧಿಕಾರಿ ಸುಳ್ಳು ಒಬಿಸಿ ಪ್ರಮಾಣಪತ್ರವನ್ನು ಸಲ್ಲಿಸಿ ನೌಕರಿಗೆ ಸೇರ್ಪಡೆಗೊಂಡಿದ್ದಾರೆ ಮತ್ತು ಅವರ ತಂದೆ ತನ್ನ ಅಫಿದಾವಿತ್‌ನಲ್ಲಿ ತನ್ನ ನಿಜವಾದ ಆದಾಯ ಮತ್ತು ಸ್ಥಿತಿಯನ್ನು ಬಚ್ಚಿಟ್ಟಿದ್ದಾರೆ ಎಂದು ಕುಮಾರ್ ಆರೋಪಿಸಿದ್ದರು.
ಸೂಕ್ತ ಪರಿಶೀಲನೆಯ ನಂತರವೇ ಒಬಿಸಿ ಪ್ರಮಾಣಪತ್ರವನ್ನು ನೀಡಲಾಗಿದ್ದ ಆಧಾರದಲ್ಲಿ ಮಹಾನಗರ ನ್ಯಾಯಾಧೀಶರು ಕುಮಾರ ಅವರ ದೂರನ್ನು ವಜಾಗೊಳಿಸಿದ್ದರು.
ವಿಚಾರಣಾ ನ್ಯಾಯಾಲಯವು ಸರಕಾರಿ ನೌಕರನ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂಬ ಮನವಿಯನ್ನು ತಿರಸ್ಕರಿಸಿರುವುದು ಸರಿಯಾಗಿಯೇ ಇದೆ,ಆದರೆ ದೂರನ್ನು ವಜಾಗೊಳಿಸುವ ಮುನ್ನ ಸಿಆರ್‌ಪಿಸಿಯ ಕಲಂ 200ರಡಿ ದೂರುದಾರನಿಗೆ ಸಮನ್ಸ್ ಪೂರ್ವ ಹೇಳಿಕೆಯನ್ನು ನೀಡಲು ಅವಕಾಶ ನೀಡಬೇಕಾಗಿತ್ತು ಎಂದು ಸೆಷನ್ಸ್ ನ್ಯಾಯಾಲಯವು ಸ್ಪಷ್ಟಪಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X