Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್‌ಒಸಿಯಲ್ಲಿ ಚೀನಿ ಪಡೆಗಳು ಮತ್ತೆ...

ಎಲ್‌ಒಸಿಯಲ್ಲಿ ಚೀನಿ ಪಡೆಗಳು ಮತ್ತೆ ಪ್ರತ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ13 March 2016 11:50 PM IST
share
ಎಲ್‌ಒಸಿಯಲ್ಲಿ ಚೀನಿ ಪಡೆಗಳು ಮತ್ತೆ ಪ್ರತ್ಯಕ್ಷ

ಪಿಒಕೆ ಗಡಿಯಲ್ಲಿ ಚೀನಿ ಸೇನೆಯಿಂದ ರಸ್ತೆ ನಿರ್ಮಾಣ

ಶ್ರೀನಗರ, ಮಾ.13: ಜಮ್ಮುಕಾಶ್ಮೀರದ ಲಡಾಖ್ ಪ್ರದೇಶದಲ್ಲಿ ಈ ಹಿಂದೆ ಸರಣಿ ಅತಿಕ್ರಮಣಗಳನ್ನು ನಡೆಸಿರುವ ಚೀನಿ ಪಡೆಗಳು, ಇತ್ತೀಚಿನ ದಿನಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ಕ್ಕೆ ತಾಗಿಕೊಂಡಿರುವ ಗಡಿನಿಯಂತ್ರಣ ರೇಖೆ (ಎಲ್‌ಒಸಿ)ಯ ಮುಂಚೂಣಿ ಠಾಣೆಗಳಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭದ್ರತಾಪಡೆಗಳನ್ನು ಕಟ್ಟೆಚ್ಚರದಲ್ಲಿರಿಸಲಾಗಿದೆ.

ಉತ್ತರಕಾಶ್ಮೀರದ ನೌಗಾಮ್ ವಲಯದ ಎದುರಿಗಿರುವ ಪಾಕ್ ಮುಂಚೂಣಿ ಠಾಣೆಗಳಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ)ಯ ಹಿರಿಯ ಅಧಿಕಾರಿಗಳ ಉಪಸ್ಥಿತಿಯನ್ನು ಭಾರತೀಯ ಸೇನೆ ಗಮನಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ಎಲ್‌ಒಸಿ ಸಮೀಪ ರಸ್ತೆ ಮತ್ತಿತರ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ಪಿಎಲ್‌ಎ ಪಡೆಗಳು ಆಗಮಿಸಿರುವುದಾಗಿ ಪಾಕ್ ಸೇನಾಧಿಕಾರಿಗಳ ಸಂಭಾಷಣೆಗಳ ಕದ್ದಾಲಿಕೆಯಿಂದ ತಿಳಿದುಬಂದಿರುವುದಾಗಿ ಸೇನಾಮೂಲಗಳು ತಿಳಿಸಿವೆ.

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ತಾಗಿಕೊಂಡಿರುವ ಎಲ್‌ಒಸಿ ಪ್ರದೇಶದಲ್ಲಿ ಚೀನಿ ಪಡೆಗಳ ಉಪಸ್ಥಿತಿಯು 2015ರಲ್ಲಿ ಮೊದಲಬಾರಿಗೆ ಪತ್ತೆಯಾಗಿತ್ತು. ಆನಂತರ ಚೀನಿ ಸರಕಾರ ಮಾಲಿಕತ್ವದ ಗೆರೊಬಾ ಗ್ರೂಪ್ ಕಂಪೆನಿಯು, ಪಾಕ್‌ನ ತಾಂಗ್‌ಧಾರ್ ವಲಯದಲ್ಲಿ ಝೀಲಂ -ನೀಲಂ ನದಿಗೆ ನಿರ್ಮಿಸುತ್ತಿರುವ 970 ಮೆಗಾವ್ಯಾಟ್ ಸಾಮರ್ಥ್ಯದ ಜಲ ವಿದ್ಯುತ್ ಯೋಜನೆಯ ಪ್ರದೇಶದಲ್ಲಿಯೂ ಚೀನಿ ಪಡೆಗಳು ಗೋಚರಿಸಿದ್ದವು. ಉತ್ತರಕಾಶ್ಮೀರದ ಬಂಡಿಪೋರ್‌ನಲ್ಲಿ ಭಾರತ ನಿರ್ಮಿಸುತ್ತಿರುವ ಕಿಶನ್‌ಗಂಗಾ ಯೋಜನೆಗೆ ಪ್ರತಿಯಾಗಿ ಪಾಕ್ ಈ ಜಲವಿದ್ಯುತ್ ಯೋಜನೆಯನ್ನು ನಿರ್ಮಿಸುತ್ತಿದೆ.

ಲೀಪಾ ಕಣಿವೆಯಲ್ಲಿ ಪಿಎಲ್‌ಎ ಸೈನಿಕರು ಸುರಂಗಗಳನ್ನು ತೋಡುತ್ತಿರುವುದಾಗಿ ಪಾಕ್ ಸೇನಾಧಿಕಾರಿಗಳ ದೂರವಾಣಿ ಸಂಭಾಷಣೆಗಳ ಕದ್ದಾಲಿಕೆಯಿಂದ ತಿಳಿದುಬಂದಿದೆ. ಕಾರಕೋರಂ ಹೆದ್ದಾರಿಯನ್ನು ಸಂಪರ್ಕಿಸಲು ಪರ್ಯಾಯ ಮಾರ್ಗವಾಗಿ ಸರ್ವಋತು ರಸ್ತೆಯೊಂದನ್ನು ನಿರ್ಮಿಸುವ ಉದ್ದೇಶದಿಂದ ಸುರಂಗಗಳನ್ನು ನಿರ್ಮಿಸಲಾಗುತ್ತಿದೆಯೆಂದು ತಿಳಿದುಬಂದಿದೆ.

ಚೀನಾದ 46 ಶತಕೋಟಿ ಡಾಲರ್ ಮೊತ್ತದ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆಯ ಭಾಗವಾಗಿ ಪಿಎಲ್‌ಎ ಅಧಿಕಾರಿಗಳು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆಂದು ಸೇನಾತಜ್ಞರು ಭಾವಿಸಿದ್ದಾರೆ. ಈ ಬೃಹತ್ ಯೋಜನೆಯಡಿ ಕರಾಚಿಯ ಗ್ವಾದರ್ ಬಂದರನ್ನು ಕಾರಕೋರಂ ಹೆದ್ದಾರಿಯ ಮೂಲಕ ಚೀನಾದ ಕ್ಸಿನ್‌ಜಿಯಾಂಗ್ ಪ್ರಾಂತ್ಯದೊಂದಿಗೆ ಸಂಪರ್ಕಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X