ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ

ಉಳ್ಳಾಲ, ಮಾ.13: ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿ ಕಾರದಲ್ಲಿದ್ದ ಸಂದರ್ಭ ಅಧಿಕಾರ ವಿಕೇಂದ್ರೀಕರಣ ಮಾಡಿತ್ತು. ಉತ್ತಮ ಆಡಳಿತವನ್ನು ನೀಡುವಲ್ಲಿ ಕಾಂಗ್ರೆಸ್ ಯಶಸ್ವಿಗಾಗಿತ್ತು. ಇದೇ ವಿಶ್ವಾಸದಿಂದ ಮತದಾರರು ಕಾಂಗ್ರೆಸ್ ಪರ ತೀರ್ಪು ನೀಡಿದ್ದಾರೆ ಎಂದು ವಿಧಾನ ಪರಿಷತ್ನ ಮಾಜಿ ಸಭಾಪತಿ ಟಿ.ಆರ್. ಸುದರ್ಶನ್ ಹೇಳಿದರು.
ಅವರು ದೇರಳಕಟ್ಟೆ ಮೈದಾನದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಉಳ್ಳಾಲ ಘಟಕದ ಆಶ್ರಯದಲ್ಲಿ ನಡೆದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗ ವಹಿಸಿ ಮಾತನಾಡಿದರು.
ಮತದಾರರನ್ನು ದಿಕ್ಕು ತಪ್ಪಿಸುವಂತಹ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ. ಹೈದರಾಬಾದ್ನ ವಿವಿಯಲ್ಲಿ ನಡೆದ ಘಟನೆಯ ಬಗ್ಗೆ ಬಿಜೆಪಿ ಸರಕಾರ ಚರ್ಚೆ ಮಾಡಿಲ್ಲ. ನೆಹರೂ ತೇಜೋವಧೆ ಮಾಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಮಂಗಳೂರು ಕ್ಷೇತ್ರದಲ್ಲಿ ಅತ್ಯಧಿಕ ಸ್ಥಾನ ಗಳಿಸಲು ಕಾಂಗ್ರೆಸ್ ಯಶಸ್ವಿಯಾಗಿದೆ. ಅಭಿವೃದ್ಧಿ ಕಾರ್ಯಕ್ರಮಗಳು ಕಾಂಗ್ರೆಸ್ ಪಕ್ಷದ ಯೋಜನೆಗಳಲ್ಲಿ ಒಂದಾಗಿದೆ. ಇದನ್ನು ಈಡೇರಿಸುವ ಕೆಲಸ ಕಾಂಗ್ರೆಸ್ ಮಾಡಲಿದೆ. ಪಕ್ಷದ ಗೆಲುವಿಗೆ ಕಾರಣರಾದ ಕಾರ್ಯಕರ್ತರು ಹಾಗೂ ಮತದಾರರ ಸಹಕಾರ ಅಭಿನಂದನಾರ್ಹ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಚಿವ ಯು.ಟಿ.ಖಾದರ್ ಕ್ಷೇತ್ರದ ಸಾಧನೆ ಮತ್ತು ಕ್ಷೇತ್ರದ ಪಕ್ಷದ ಕಾರ್ಯಕರ್ತರ ಮತ್ತು ಮತದಾರರ ಸೇವೆಯನ್ನು ವಿವರಿಸಿದರು.
ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕಣಚೂರು ಮೋನು, ಶ್ರೀನಿವಾಸ ಶೆಟ್ಟಿ, ಟಿ.ಎಸ್. ಅಬ್ದುಲ್ಲಾ, ಉಳ್ಳಾಲ ನಗರಸಭೆಯ ಅಧ್ಯಕ್ಷ ಹುಸೈನ್ ಕುಂಞಿಮೋನು, ಕಾಂಗ್ರೆಸ್ ಮುಖಂಡ ಸುದರ್ಶನ್ ಶೆಟ್ಟಿ, ಯೂತ್ ಕಾಂಗ್ರೆಸ್ನ ನಝರ್ ಶಾ ಪಟ್ಟೋರಿ, ಉಳ್ಳಾಲ ನಗರ ಸಭೆಯ ಸದಸ್ಯ ದಿನೇಶ್ ರೈ, ಕುರ್ನಾಡು ಜಿಪಂ ಸದಸ್ಯ ಮಮತಾಗಟ್ಟಿ, ಪಾವೂರು ತಾಪಂ ಸದಸ್ಯ ಮಹಮ್ಮದ್ ಮೋನು, ಮಾಜಿ ತಾಪಂ ಸದಸ್ಯ ಮುಸ್ತಫಾ, ಕೊಣಾಜೆ ಜಿಪಂ ಸದಸ್ಯೆ ರಶೀದಾ ಬಾನು, ಬೆಳ್ಮ ಗ್ರಾಪಂ ಉಪಾಧ್ಯಕ್ಷ ಸತ್ತಾರ್, ಸದಸ್ಯ ಅಬ್ದುರ್ರಝಾಕ್ ಕೆಕೆರೆ, ಕಬೀರ್ ಡಿ., ತಾಪಂ ಸದಸ್ಯರಾದ ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ, ಸುರೇಖಾ, ಡಿ.ಆರ್. ಸುದರ್ಶನ್, ಪದ್ಮಾವತಿ ಪೂಜಾರಿ, ಅಬ್ದುಲ್ ಜಬ್ಬಾರ್, ವಿಲ್ಮಾ ಆಲ್ಫ್ರೆಡ್ ಸೋಜ, ಕಿನ್ಯ ಗ್ರಾಪಂ ಸದಸ್ಯ ಹಮೀದ್ ಕಿನ್ಯ, ಅಲ್ಪ ಸಂಖ್ಯಾತ ಘಟಕ ಪ್ರ.ಕಾರ್ಯದರ್ಶಿ ಶರೀಫ್ದೇರಳಕಟ್ಟೆ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸದಸ್ಯ ರಹ್ಮಾನ್ ಕೊಣಾಜೆ ಸ್ವಾಗತಿಸಿದರು. ಇರಾ ಗ್ರಾಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು. ಬೆಳ್ಮ ಗ್ರಾಪಂ ಮಾಜಿ ಅಧ್ಯಕ್ಷ ಯೂಸುಫ್ ಬಾವ ವಂದಿಸಿದರು.







