Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಉಲ್ಫಾ ಉಗ್ರ ಈಗ ಬಿಜೆಪಿ ಅಭ್ಯರ್ಥಿ...

ಮಾಜಿ ಉಲ್ಫಾ ಉಗ್ರ ಈಗ ಬಿಜೆಪಿ ಅಭ್ಯರ್ಥಿ !

ವಾರ್ತಾಭಾರತಿವಾರ್ತಾಭಾರತಿ14 March 2016 2:35 PM IST
share
ಮಾಜಿ ಉಲ್ಫಾ ಉಗ್ರ ಈಗ ಬಿಜೆಪಿ ಅಭ್ಯರ್ಥಿ !

ಗುವಹಾಟಿ, ಮಾ.14: ಅಸ್ಸಾಂನಲ್ಲಿ ಮುಂಬರಲಿರುವ ಅಸೆಂಬ್ಲಿ ಚುನಾವಣೆಯಲ್ಲಿ ತರುಣ್ ಗೊಗೋಯಿ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಮಣ್ಣು ಮುಕ್ಕಿಸಲು ಸರ್ವ ಪ್ರಯತ್ನಗಳನ್ನು ಮಾಡುತ್ತಿರುವ ಬಿಜೆಪಿ ಪೂರ್ವ ಅಸ್ಸಾಂನ ಮಾರ್ಘೆರಿಟಾ ಕ್ಷೇತ್ರದಿಂದ ಕುಖ್ಯಾತ ಮಾಜಿ ಉಲ್ಫಾ ಉಗ್ರ ಭಾಸ್ಕರ ಶರ್ಮನನ್ನು ಕಣಕ್ಕಿಳಿಸಲು ನಿರ್ಧರಿಸಿ ಸಾಕಷ್ಟು ವಿವಾದಕ್ಕೆಡೆ ಮಾಡಿಕೊಟ್ಟಿದೆ.

ಪಕ್ಷದ ಈ ನಿರ್ಧಾರ ಈಗಾಗಲೇ ನಾಗರಿಕ ಸಮಾಜ, ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಪರೇಶ್ ಬರುವಾ ನೇತೃತ್ವದ ಉಲ್ಫಾ ಬಣದಿಂದ ಭಾರೀ ವಿರೋಧ ಎದುರಿಸುತ್ತಿದೆ. ಭಾಸ್ಕರ ಶರ್ಮ 1998 ಹಾಗೂ 2001ರ ನಡುವೆ ಹಲವಾರು ಉಲ್ಫಾ ನಾಯಕರುಗಳ ಹತ್ಯೆಗೆ ಸಂಚು ಹೂಡಿದ್ದರು ಹಾಗೂ ಅವರೊಬ್ಬ ‘ದ್ರೋಹಿ’ ‘ಸರಣಿ ಹಂತಕ’ ಎಂದು ಪರೇಶ್  ಹಲವು ಪತ್ರಿಕೆಗಳಿಗೆ ಈಮೇಲ್ ಸಂದೇಶ ಕಳುಹಿಸಿದ್ದಾರೆ. ಮುಸುಕುಧಾರಿ ವ್ಯಕ್ತಿಗಳು ಮೇಲೆ ತಿಳಿಸಿದ ಅವಧಿಯಲ್ಲಿ ನಡೆಸಿದ ಉಲ್ಫಾ ನಾಯಕರುಗಳ ಹತ್ಯೆಗಳಲ್ಲಿ ಭಾಸ್ಕರ ಶರ್ಮ ಕೈವಾಡವಿದೆಯೆಂದೂ ಅವರು ಆರೋಪಿಸಿದ್ದಾರೆ.

ಬಿಜೆಪಿ ಭಾಸ್ಕರ ಶರ್ಮ ರನ್ನು ಕಣಕ್ಕಿಂದ ಹಿಂದೆ ಸರಿಸದೇ ಇದ್ದಲ್ಲಿನಾವು ಏನೇ ಮಾಡಲು ಹೇಸುವುದಿಲ್ಲ ಎಂದು ಉಲ್ಫಾದ ಬಣವೊಂದು ಹೇಳಿಕೊಂಡಿದೆ. ಆದರೆ ಭಾಸ್ಕರ ಶರ್ಮ ಹಣ ಬಲ ಹಾಗೂ ಸ್ನಾಯು ಬಲ ಹೊಂದಿರುವ ಓರ್ವ ಪ್ರಭಾವಿ ನಾಯಕರಾಗಿದ್ದು ಅವರನ್ನು ಬಿಜೆಪಿ ಕಣದಿಂದ ಹಿಂದಕ್ಕೆ ಸರಿಸುವ ಸಾಧ್ಯತೆಯೇ ಇಲ್ಲವೆಂದು ಹೇಳಲಾಗುತ್ತಿದೆ.


ಮಾರ್ಘೆರಿಟಾ ಕ್ಷೇತ್ರವನ್ನು 1998ರಿಂದ ಗೆಲ್ಲುತ್ತಿರುವ ಪ್ರದ್ಯೋತ್ ಬೊರ್ಡೊಲೊಯ್ ಅವರನ್ನು ಭಾಸ್ಕರ ಶರ್ಮ ಖಂಡಿತವಾಗಿಯೂ ಸೋಲಿಸಬಲ್ಲರು ಎಂಬ ಆತ್ಮವಿಶ್ವಾಸದಲ್ಲಿ ಬಿಜೆಪಿಯಿದೆ.


ಮುಖ್ಯಮಂತ್ರಿ ತರುಣ್ ಗೊಗೊಯ್ ಹಾಗೂ ಅಸ್ಸಾಂ ಗಣ ಪರಿಷದ್ ಕೂಡ ಬಿಜೆಪಿ ನಿರ್ಧಾರವನ್ನು ಟೀಕಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X