Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 16,000 ಕಾನ್‌ಸ್ಟೇಬಲ್‌ಗಳ ಹಾಗೂ 500...

16,000 ಕಾನ್‌ಸ್ಟೇಬಲ್‌ಗಳ ಹಾಗೂ 500 ಮಂದಿ ಪಿಎಸ್‌ಐಗಳ ನೇಮಕಾತಿಗೆ ಕ್ರಮ - ರಾಜ್ಯ ಗೃಹ ಸಚಿವ ಡಾ ಜಿ. ಪರಮೇಶ್ವರ

ವಾರ್ತಾಭಾರತಿವಾರ್ತಾಭಾರತಿ14 March 2016 6:38 PM IST
share
16,000 ಕಾನ್‌ಸ್ಟೇಬಲ್‌ಗಳ ಹಾಗೂ 500 ಮಂದಿ ಪಿಎಸ್‌ಐಗಳ ನೇಮಕಾತಿಗೆ ಕ್ರಮ - ರಾಜ್ಯ ಗೃಹ ಸಚಿವ ಡಾ ಜಿ. ಪರಮೇಶ್ವರ

ಬೆಳ್ತಂಗಡಿ: ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ತೀವ್ರವಾಗಿದ್ದು ಇದೀಗ 16,000 ಕಾನ್‌ಸ್ಟೇಬಲ್‌ಗಳ ಹಾಗೂ 500 ಮಂದಿ ಪಿಎಸ್‌ಐಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ ಜಿ. ಪರಮೇಶ್ವರ ತಿಳಿಸಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ಪೋಲಿಸ್ ಠಾಣೆಯ ಉದ್ಘಾಟನಾ ಕಾರ್ಯಕ್ರಮ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದರು.

ಈಗಾಗಲೇ 8000 ಮಂದಿ ಕಾನ್‌ಸ್ಟೇಬಲ್‌ಗಳ ನೇಮಕಾತಿ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಇನ್ನೂ ಎಂಟು ಸಾವಿರ ಮಂದಿಯ ಆಯ್ಕೆ ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದೆ. ಸಿಬ್ಬಂದಿ ನೇಮಕಾತಿ ಮುಗಿದಾಗ ರಾಜ್ಯದ ಪೋಲಿಸ್ ಇಲಾಖೆಯ ಬಹುತೇಕ ಸಿಬ್ಬಂದಿ ಸಮಸ್ಯೆಯು ನಿವಾರಣೆಯಾಗುತ್ತದೆ. ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವ ಉದೇಶದಿಂದ ರಾಜ್ಯ ಗೃಹ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಠಾಣೆಗೆ ಬರುವ ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮತ್ತು ಸ್ಥಳೀಯ ಜನರಿಗೆ ಸೂಕ್ತ ರಕ್ಷಣೆ ಮತ್ತು ಸಂಚಾರಿ ವ್ಯವಸ್ಥೆ ಸುಗಮವಾಗಿಸಲು ಅಗತ್ಯವಾಗಿದ್ದು ಇದನ್ನು ಮನಗೊಂಡು ಹೊಸ ಠಾಣೆಯನ್ನು ಮಂಜೂರುಗೊಳಿಸಲಾಗಿದೆ. ಠಾಣೆಗೆ ಸ್ವತಂತ್ರವಾದ ಹೊಸ ಕಟ್ಟಡ ಹಾಗು ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು. ಪೋಲಿಸ್ ದೂರು ಪ್ರಾಧಿಕಾರದ ಕಾರ್ಯನಿರ್ವಹಣೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಮಟ್ಟದಲ್ಲಿ ಪರಿಶೀಲನೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    ಪೋಲಿಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಯಾರದೇ ಹಸ್ತಕ್ಷೇಪಕ್ಕೆ ಅವಕಾಶವಿರುವುದಿಲ್ಲ. ಶಿಸ್ತಿನ ಇಲಾಖೆಯಾಗಿರುವ ಪೋಲಿಸ್ ಇಲಾಖೆಯಲ್ಲಿ ಯಾವುದೆ ಅಶಿಸ್ತನ್ನು ಸಹಿಸುವುದಿಲ್ಲ ಮತ್ತು ಒತ್ತಡಗಳಿಗೂ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅತಂತ್ರ ಸ್ಥಿತಿಯಿರುವ ರಾಜ್ಯದ 5 ಜಿಲ್ಲಾ ಪಂಚಾಯತುಗಳಲ್ಲಿ ಕಾಂಗ್ರೇಸ್‌ಗೆ ಅಧಿಕಾರಕ್ಕೆ ಬರುವ ಅವಕಾಶವಿದ್ದು ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳೊಂದಿಗೆ ಹೊಂದಾಣಿಕ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಹುದ್ದೆಯ ಕುರಿತು ಈವರೆಗೆ ಯಾವುದೇ ಹೊಸ ಚರ್ಚೆ ಆಗಿಲ್ಲ. ಎಲ್ಲರೂ ಸೇರಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
      
ಮಂಗಳೂರು ಜೈಲ್‌ನಲ್ಲಿ ಮೊಬೈಲ್ ಜಾಮರ್ ಅಳವಡಿಕೆಯಿಂದ ಸ್ಥಳೀಯ ಜನರಿಗೆ ತೊಂದರೆಯಾಗಿರುವುದು ಗೊತ್ತಾಗಿದೆ. ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ನಗರದ ಹೊರವಲಯದಲ್ಲಿ 40 ಎಕರೆ ಜಾಗ ಮಂಜೂರಾಗಿದೆ. ಜೈಲಿನ್ನು ಹೊಸ ಜಾಗಕ್ಕೆ ಸ್ಥಳಾಂತರಿಸುವಾಗ ಈ ಸಮಸ್ಯೆ ಪರಿಹಾರವಾಗಲಿದೆ ಎಂದರು. 

ಮೈಸೂರಿನಲ್ಲಿ ನಡೆದ ಕೊಲೆಪ್ರಕರಣದ ತನಿಖೆಯನ್ನು ಈಗಾಗಲೇ ಸಿಸಿಬಿಗೆ ವಹಿಸಲಾಗಿದೆ. ತಪ್ಪು ಮಾಡಿದವರು ಯಾರೇ ಆಗಲಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣವನ್ನು ರಾಜಕೀಯಕರಣಗೊಳಿಸದೆ ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ಅವರು ಈ ಸಂದರ್ಭ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X