Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇಲಾಖಾವಾರು ಸಾಧನೆಗಳು ಸಾರ್ವಜನಿಕರಿಗೆ...

ಇಲಾಖಾವಾರು ಸಾಧನೆಗಳು ಸಾರ್ವಜನಿಕರಿಗೆ ತಿಳಿಯುವಂತಾಗಲಿ

ವಾರ್ತಾಭಾರತಿವಾರ್ತಾಭಾರತಿ14 March 2016 11:49 PM IST
share

ಮಾನ್ಯರೆ,

 ಪ್ರತಿವರ್ಷ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಮುಂಗಡ ಪತ್ರಗಳನ್ನು ಮಂಡಿಸುತ್ತಾರೆ.ಈ ಮುಂಗಡ ಪತ್ರಗಳಲ್ಲಿ ಆರೋಗ್ಯ,ಶಿಕ್ಷಣ, ಸಾರಿಗೆ, ರಸ್ತೆ, ಸಂಸ್ಕೃತಿ, ಹೀಗೆ ವಿವಿಧ ಪ್ರಕಾರಗಳಲ್ಲಿ ಇಲಾಖಾವಾರು ಹಣವನ್ನು ನಿಗದಿಪಡಿಸುತ್ತವೆ. ಹಲವಾರು ಯೋಜನೆಗಳನ್ನೂ ಘೋಷಿಸುತ್ತಾರೆ.ಆದರೆ, ಇದರಲ್ಲಿ ಎಷ್ಟರ ಮಟ್ಟಿಗೆ ಅನುಷ್ಠಾನವಾಗಿದೆ ಎಂಬುದು ಜನಸಾಮಾನ್ಯರಿಗೆ ತಿಳಿಯುವುದೇ ಇಲ್ಲ.ಮುಂಗಡ ಪತ್ರಗಳ ಪುಸ್ತಕದಲ್ಲಿ ಆರಂಭದ ಪುಟಗಳಲ್ಲಿ ಹಿಂದಿನ ವರ್ಷಗಳ ಯೋಜನೆಗಳು ಹಾಗೂ ಪ್ರಗತಿಗಳ ಬಗ್ಗೆ ಸಂಕ್ಷಿಪ್ತವಾಗಿ ಪ್ರಸ್ತಾಪವಾಗಿರುತ್ತದೆ.ಈ ಮುಂಗಡ ಪತ್ರವನ್ನು ಕೇವಲ ಚುನಾಯಿತ ಪ್ರತಿನಿಗಳು ಮಾತ್ರ ಗಮನಿಸುತ್ತಾರೆ.ಹೆಚ್ಚೆಂದರೆ,ವೆಬ್‌ಸೈಟ್‌ಗಳಲ್ಲಿ ಇವುಗಳು ದೊರೆಯುತ್ತವೆ.ಆದರೆ, ಪ್ರತಿಯೊಂದು ಇಲಾಖೆಯು ತಾನು ಕಳೆದ ಒಂದು ವರ್ಷದ ಅವಯಲ್ಲಿ ಮಾಡಿರುವಂತಹ ಸಾಧನೆಗಳ ವಿವರಗಳನ್ನು ಜನಸಾಮಾನ್ಯರಿಗೆ ದೊರೆಯುವಂತಾಗಲು ಶ್ವೇತಪತ್ರವನ್ನು ಬಿಡುಗಡೆ ಮಾಡಬೇಕು.

ಅಲ್ಲದೆ ಇದರಲ್ಲಿ ತನ್ನ ಇಲಾಖೆಗೆ ಮಂಜೂರಾದ ಹಣವೆಷ್ಟು, ಯಾವ ಯಾವ ಯೋಜನೆಗಳಿಗೆ ಅದನ್ನು ನಿಗದಿಪಡಿಸಿದೆ,ಯಾವ ಯಾವ ಯೋಜನೆಗಳಿಗೆ ಎಷ್ಟು ಹಣವನ್ನು ಖರ್ಚು ಮಾಡಿದೆ,ಆ ಯೋಜನೆಗಳಿಂದ ಎಷ್ಟು ಜನ ಲಾನುಭವಿಗಳಿಗೆ ಅನುಕೂಲವಾಗಿದೆ, ಉಳಿದಿರುವ ಹಣವೆಷ್ಟು, ಉಳಿದ ಹಣವನ್ನು ಮತ್ತು ಯೋಜನೆಯ ಗರಿಷ್ಠ ಪ್ರಮಾಣವನ್ನು ಮುಟ್ಟದಿರಲು ಕಾರಣಗಳೇನು? ಯಾವ ಯಾವ ದಿನಗಳಲ್ಲಿ ಯಾವ ಯಾವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂಬ ಮಾಹಿತಿಯನ್ನು ಶ್ವೇತಪತ್ರದಲ್ಲಿ ನಮೂದಿಸಿ ವಾರ್ತಾ ಇಲಾಖೆ ಪತ್ರಿಕೆಗಳ ಜಾಹೀರಾತುಗಳ ಮೂಲಕ ಜನರಿಗೆ ತಿಳಿಸಬೇಕು.ಹಾಲಿ ಕೇವಲ ಗಣರಾಜೋತ್ಸವ,ಸ್ವಾತಂತ್ರ ದಿನಾಚರಣೆ, ಮಹಾತ್ಮ ಗಾಂ ಜಯಂತಿ,ಅಂಬೇಡ್ಕರ್ ಜಯಂತಿ,ಕನ್ನಡ ರಾಜೋತ್ಸವದಂತಹ ಸಂದರ್ಭಗಳಲ್ಲಿ ಹಾಗೂ ಸರಕಾರದ ವಾರ್ಷಿಕ ಸಮಾರಂಭಗಳಲ್ಲಿ ಜಾಹೀರಾತು ನೀಡಿ ಮಾಹಿತಿಯನ್ನು ನೀಡುತ್ತಿವೆ. ಈ ಮಾಹಿತಿಗಳು ಸತ್ಯದಿಂದ ಕೂಡಿರುವುದಿಲ್ಲ.ಈ ಹಿನ್ನೆಲೆಯಲ್ಲಿ ಸಮಗ್ರ ಮಾಹಿತಿಗಳುಳ್ಳ ಶ್ವೇತಪತ್ರದ ಪ್ರತಿಗಳು ಜನಸಾಮಾನ್ಯರು ಓದುವ ಪತ್ರಿಕೆಗಳಲ್ಲಿ ಪ್ರಕಟವಾಗಬೇಕು. ಬಹಳಷ್ಟು ಇಲಾಖೆಗಳಲ್ಲಿ ಯೋಜನೆಗಳು, ಅನುಷ್ಠಾನ, ಕಾರ್ಯಕ್ರಮಗಳು, ಪ್ರಗತಿ ಎಲ್ಲವೂ ಕಾಗದದ ಮೇಲಿರುತ್ತದೆ ಅಷ್ಟೆ. ಸರಕಾರ ಸದನಕ್ಕೆ ಮಾತ್ರ ಸತ್ಯ ಸಂಗತಿಗಳನ್ನು ಹೇಳುವುದಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರಭುಗಳಾಗಿರುವ ಮತದಾರರಿಗೂ ಸತ್ಯ ಸಂಗತಿಗಳನ್ನು ತಿಳಿಸಬೇಕು.
-ಕೆ.ಎಸ್.ನಾಗರಾಜ್, ಬೆಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X