Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.17;ಗಾಂಧಿ ಮೊಮ್ಮಗ ಗೋಪಾಲ ಕೃಷ್ಣ...

ಮಾ.17;ಗಾಂಧಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ ನಗರಕ್ಕೆ

ವಾರ್ತಾಭಾರತಿವಾರ್ತಾಭಾರತಿ15 March 2016 5:40 PM IST
share

 ಮಂಗಳೂರು.ಮಾ,15:ಮಾರ್ಚ್ 17ರಂದು ನಗರದ ರವೀಂದ್ರ ಕಲಾಭವನದಲ್ಲಿ ನಡೆಯಲಿರುವ ‘ಗಾಂಧಿ ಹೆಜ್ಜೆಯ ಜಾಡಿನಲ್ಲಿ ಜತ್ತಪ್ಪ ರೈ ಜೀವನಗಾಥೆ ’ಹಾಗೂ ‘ಗಾಂಧಿ ವಿಚಾರ ಧಾರೆ ಸಾರ್ವಕಾಲಿಕ ರಾಜಕೀಯ ಒಂದು ಪವಿತ್ರ ಸೇವೆ’ಎಂಬ ವಿಚಾರ ಸಂಕಿರಣದ ಉದ್ಘಾಟಕರಾಗಿ ಪಶ್ಚಿಮ ಬಂಗಾಲದ ಮಾಜಿ ರಾಜ್ಯಪಾಲರು,ಮಹಾತ್ಮ ಗಾಂಧಿ ಹಾಗೂ ಚಕ್ರವರ್ತಿ ರಾಜಗೋಪಾಲಾಚಾರಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಭಾಗವಹಿಸಲಿದ್ದಾರೆ ಎಂದು ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ.ಉದಯ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

                   ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜು,ಗಾಂಧಿ ಸ್ಮಾರಕ ನಿಧಿ ಬೆಂಗಳೂರು,ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಸಂಶೋಧನಾ ಕೇಂದ್ರ ಉಡುಪಿ,ಪುತ್ತೂರಿನ ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನ ಕಜೆಮಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಪ್ರಸಕ್ತ ಕಾಲಘಟ್ಟದಲ್ಲಿ ವಿಶ್ವ ವಿದ್ಯಾನಿಲಯಗಳಲ್ಲಿ ಯುವ ಸಮುದಾಯಕ್ಕೆ ಗಾಂಧಿ ವಿಚಾರಧಾರೆಯ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಈ ವಿಚಾರ ಗೋಷ್ಟಿಯನ್ನು ಹಮ್ಮಿಕೊಳ್ಳಲಾಗಿದೆ .ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಪ್ರಥಮ ಬಾರಿಗೆ ಮಂಗಳೂರಿಗೆ ಮಾರ್ಚ್ 17ರಂದು ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ ವಿಶ್ರಾಂತ ನ್ಯಾಯಾಧೀಶರಾದ ಸಂತೋಷ್ ಹೆಗ್ಡೆ,ಹಿರಿಯ ಸ್ವಾತಂತ್ರ ಹೋರಾಟ ಗಾರ ಹೆಚ್.ಎಸ್.ದೊರೆಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಕೆ. ಭೈರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಸ್ವಾತಂತ್ರ ಹೋರಾಟಗಾರ ಕುಂಬ್ರ ಜತ್ತಪ್ಪ ರೈಗಳ ಪುಸ್ತಕದ ಪ್ರಕಾಶಕರಾದ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಹೇರಂಜೆ ಕೃಷ್ಣ ಭಟ್,ಪುಸ್ತಕವನ್ನು ಹೊರತರಲು ಮುಖ್ಯ ಕಾರಣ ಕರ್ತರಾದ ಡಾ.ಏರ್ಯಲಕ್ಷ್ಮೀ ನಾರಾಯಣ ಆಳ್ವ ಸಮಾಂಭದಲ್ಲಿ ಭಾಗವಹಿಸಲಿದ್ದಾರೆ. ವಿಚಾರ ಗೋಷ್ಠಿಯ ಬಳಿಕ ಅಪರಾಹ್ನ 3.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.ಈ ಸಮಾರಂಭದಲ್ಲಿ ನಿಟ್ಟಿ ವಿಶ್ವ ವಿದ್ಯಾ ನಿಲಯದ ಕುಲಪತಿ ಡಾ. ವಿನಯ ಹೆಗ್ಡೆ,ಕೇಂದ್ರ ಕಾನೂನು ಸಚಿವ ಸದಾನಂದ ಗೌಡ,ರಾಜ್ಯದ ಪರಿಸರ,ಜೀವಿಶಾಸ್ತ್ರ ಮತ್ತು ಅರಣ್ಯ ಸಚಿವರು ನಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ,ಕರ್ನಾಟಕದ ಮಾಜಿ ಎಡ್ವಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಡಾ.ಉದಯ ಕುಮಾರ್ ತಿಳಿಸಿದರು.

  ಎಲೆಮರೆಯ ಕಾಯಿಯಂತೆ ಬದುಕಿದ್ದ ಸ್ವಾತಂತ್ರ ಹೋರಾಟಗಾರ:-ಕುಂಬ್ರ ಜತ್ತಪ್ಪ ರೈಗಳು ಎಲೆಮರೆಯ ಕಾಯಿಯಂತೆ ಬದುಕಿದ್ದ ಸ್ವಾತಂತ್ರ ಹೋರಾಟ ಗಾರರಾಗಿದ್ದರು.ಅವರು ಸ್ವಾತಂತ್ರ ಹೋರಾಟಗಾರರಾಗಿ ಸೆರೆಮನೆ ವಾಸ ಅನುಭವಿಸಿದ್ದರೂ ಸ್ವಾತಂತ್ರ ಹೋರಾಟಗಾರರಿಗೆ ಸಿಗುವ ಸರಕಾರದ ಸೌಲಭ್ಯಗಳನ್ನು ಸ್ವೀಕರಿಸದೆ,ಗೌರವ ಧನವನ್ನು ಸ್ವೀಕರಿಸದೆ ಆದರ್ಶವಾದಿಯಾಗಿ ಬದುಕಿದ್ದರು.ಸಾಯುವ ವರೆಗೂ ಕಟ್ಟಾ ಗಾಂಧಿವಾದಿಯಾಗಿದ್ದರು ಇಂತಹ ವ್ಯಕ್ತಿತ್ವ ನಮ್ಮ ಇತಿಹಾಸದ ಪುಟಗಳಿಂದ ಮರೆಯಾಗಬಾರದು ಎಂದು ಅವರ ಜೀವನ ಚರಿತ್ರೆಯನ್ನು ಹೊರತರಬೇಕೆಂದ ಹಂಬಲ ಉಂಟಾಯಿತು.ಈ ಪ್ರಯತ್ನದಲ್ಲಿ ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನದೊಂದಿಗೆ ವಿವಿಧ ಸಂಸ್ಥೆಗಳು ಸಹಕಾರ ನೀಡಿವೆ ಎಂದು ಏರ್ಯಲಕ್ಷ್ಮೀ ನಾರಾಯುಣ ಆಳ್ವ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನದ ಸಂಚಾಲಕ ಇಳಂತಾಜೆ ಪ್ರಮೋದ್ ಕುಮಾರ್ ರೈ ,ಏರ್ಯಲಕ್ಷ್ಮೀನಾರಾಯಣ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X