Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.19 ಮತ್ತು 20 ಮುಟ್ಲುಪಾಡಿಯಲ್ಲಿ...

ಮಾ.19 ಮತ್ತು 20 ಮುಟ್ಲುಪಾಡಿಯಲ್ಲಿ ಅಖಿಲ ಭಾರತಮಟ್ಟದ ಕಬಡ್ಡಿ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ15 March 2016 6:37 PM IST
share

ಕಾರ್ಕಳ :ಅರ್ಧನಾರೀಶ್ವರ ಸ್ಪೋಟ್ಸ್ ಕ್ಲಬ್ ಮುಟ್ಲುಪಾಡಿ ಆಶ್ರಯದಲ್ಲಿ ಯುವ ಉದ್ಯಮಿ ಗಿರೀಶ್ ಶೆಟ್ಟಿ ನೇತೃತ್ವದಲ್ಲಿ ಕರ್ನಾಟಕ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಹಾಗೂ ಭಾರತೀಯ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಅಖಿಲ ಭಾರತಮಟ್ಟದ ಹೊನಲು ಬೆಳಕಿನ ಪ್ರೊ.ಕಬಡ್ಡಿ ಪಂದ್ಯಾಟವು ಮುನಿಯಾಲು ಗಾಂಧೀಮೈದಾನದಲ್ಲಿ ಮಾ.19 ಮತ್ತು 20ರಂದು ನಡೆಯಲಿದೆ.

ಈಗಾಗಲೇ ಕಳೆದ ಹತ್ತು ದಿನಗಳಿಂದ ಮುನಿಯಾಲು ಸುತ್ತಮುತ್ತಲಿನ ನೂರಾರು ಸ್ವಯಂಸೇವಕರು ಕ್ರೀಡಾಂಗಣ ಸಿದ್ದತೆಯ ಕೆಲಸದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಮಹಾರಾಷ್ಟ್ರ ಕೊಲ್ಲಾಪುರ ಜಿಲ್ಲೆಯ ಈಚಲ ಕಾರಂಜಿ ಸಾಯಿ ಗ್ಯಾಲೇರಿ ಕಂಪೆನಿಯ ಸಿಬ್ಬಂದಿಗಳು ಗ್ಯಾಲೇರಿ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

 ಮಹಾರಾಷ್ಟ್ರ, ತಮಿಳುನಾಡು, ಹೊಸದಿಲ್ಲಿ, ಕೇರಳ, ಹರಿಯಾಣ ಸೇರಿದಂತೆ ದೇಶದ 30ಕ್ಕೂ ಅಧಿಕ ಪ್ರಮುಖ ತಂಡಗಳು ಪಾಲ್ಗೊಳ್ಳಲಿದ್ದು, ಮಂಗಳೂರು ಮತ್ತು ಉಡುಪಿಯ ತಂಡಗಳಿಗೂ ಅವಕಾಶ ನೀಡಲಾಗಿದೆ. ಪ್ರೊ. ಕಬಡ್ಡಿಯ ಸ್ಟಾರ್ ಆಟಗಾರರಾದ ಯು.ಮುಂಬಾ ತಂಡದ ಶಭೀರ್ ಬಾಪು, ತೆಲುಗು ಟೈಟಾನ್‌ನ ರಾಹುಲ್ ಚೌಂದರಿ, ಜೈಪುರ್ ಪಿಂಕ್ ಪ್ಯಾಂಥರ್ಸ್‌ನ ಜಗದೀಶ್ ಕುಂಬ್ಳೆ, ಅಜಯ್ ಠಾಕೂರ್, ಪ್ರದೀಪ್ ನರ್ವಾಲ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ತೆಲುಗು ಟೈಟಾನ್ ತಂಡವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಕಡ್ತಲ ಸುಕೇಶ್ ಹೆಗ್ಡೆ ಅವರಿಗೆ ಸನ್ಮಾನ ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ಭಾರತದ ಕ್ರಿಕೆಟ್ ತಂಡ ಮಾಜಿ ನಾಯಕ್ ಅಜರುದ್ದೀನ್ ಹಾಗೂ ಚಿತ್ರನಟಿಯರು ಭಾಗವಹಿಸಲಿದ್ದಾರೆ.

4.10 ಲಕ್ಷ ರೂ. ಬಹುಮಾನ:

ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅಖಿಲ ಭಾರತಮಟ್ಟದ ಪ್ರೊ. ಕಬಡ್ಡಿ ನಡೆಯುತ್ತಿರುವುದು ಇದೇ ಮೊದಲ ಬಾರಿಯಾಗಿದ್ದು, ಆಕರ್ಷಕ ಬಹುಮಾನವನ್ನು ವಿಜೇತರಿಗೆ ಘೋಷಿಸಲಾಗಿದೆ. ಪ್ರಥಮ 2 ಲಕ್ಷ ರೂ, ದ್ವಿತೀಯ-1.50ಲಕ್ಷ ರೂ ಮತ್ತು ತೃತೀಯ ಹಾಗೂ ಚತುರ್ಥ ತಲಾ 80 ಸಾವಿರ ರೂ. ಒಟ್ಟು 4.10 ಲಕ್ಷ ರೂ. ನಗದು ಹಾಗೂ ಪ್ರಶಸ್ತಿಪತ್ರಗಳು ವಿಜೇತರ ಪಾಲಾಗಲಿದೆ. ಸುಮಾರು 4 ಎಕರೆ ವಿಶಾಲವಾದ ಮೈದಾನದಲ್ಲಿ 10 ಸಾವಿರ ಜನ ಕುಳಿತುಕೊಳ್ಳುವ ಗ್ಯಾಲರಿ ಹಾಗೂ 6 ಸಾವಿರ ಜನ ಕುಳಿತುಕೊಳ್ಳುವ ಆಸನ ವ್ಯವಸ್ಥೆ ಮಾಡಲಾಗಿದ್ದು, 20 ಸಾವಿರಕ್ಕೂ ಮಿಕ್ಕಿದ ಪ್ರೇಕ್ಷಕರು ಭಾಗವಹಿಸುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X